LIVE TV LocalCrimeNationalInternationalPoliticsEducationTechnologyEntertainmentSportsFeature
Sports News

ಶಿಕ್ಷಕರಿಗೆ ಹೆಚ್ಚುವರಿ ಕಿರಿಕಿರಿ ಮತ್ತೊಂದು ದೊಡ್ಡ ಆತಂಕ ದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರು.....

ಬೆಂಗಳೂರು -

ಹತ್ತಾರು ವರ್ಷಗಳ ನಿರೀಕ್ಷೆಗೆ ಫಲ ಎಂಬಂತೆ ಸಾರ್ವತ್ರಿಕ ವರ್ಗಾವಣೆಯಲ್ಲಿ ತಾವು ಬಯಸಿದ್ದ ಶಾಲೆ,ಸ್ಥಳವನ್ನು ಪಡೆದ ಶಿಕ್ಷಕರು ನೆಮ್ಮದಿಯ ನಿಟ್ಟುಸಿರು ಬಿಡುತ್ತಿರುವಾ ಗಲೇ ಈಗ ಹೆಚ್ಚುವರಿ ಹಣೆಪಟ್ಟಿ ಚಿಂತೆಗೆ ಕಾರಣವಾಗಿದೆ. ಸಾರ್ವಜನಿಕ ಶಿಕ್ಷಣ ಇಲಾಖೆಯು ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗಳ ಮರುಹೊಂದಾಣಿಕೆ ಹಾಗೂ ವೃಂದವಾರು ಬಲ ನಿಗದಿಪಡಿಸಿ ಆದೇಶ ಹೊರಡಿಸಿದೆ. ವಿದ್ಯಾರ್ಥಿ- ಶಿಕ್ಷಕರ ಅನುಪಾತದನ್ವಯ(ಪಿಟಿಆರ್)ಹಲವು ವೃಂದಗಳಲ್ಲಿ ಹೆಚ್ಚುವರಿ ಹುದ್ದೆಗಳನ್ನು ಗುರುತಿಸಲಾಗಿದೆ. ಇವರನ್ನು ಮತ್ತೆ ಮರುನಿಯೋಜಿಸಲಾಗುತ್ತದೆ ಅಥವಾ ವರ್ಗಾವಣೆ ಮಾಡಲಾಗುತ್ತದೆ ಎಂದು ಇಲಾಖೆ ಹೇಳಿದೆ.

ಇದೇ ಮೊದಲ ಬಾರಿಗೆ ಪ್ರಾಥಮಿಕ ಶಾಲಾ ಶಿಕ್ಷಕರು (ಪಿಎಸ್ಟಿ) ಹಾಗೂ ಪದವೀಧರ ಶಾಲಾ ಶಿಕ್ಷಕರು (ಜಿಪಿಟಿ) ಅನ್ವಯ ವಂದವಾರು ಬಲ ಘೋಷಣೆ ಮಾಡಲಾಗಿದೆ. ಶಿಕ್ಷಕರನ್ನು ವಿಷಯವಾರು ವಿಭಜಿಸಿರುವುದರಿಂದ ಹೆಚ್ಚುವರಿ ಹೊರೆ ಜಾಸ್ತಿಯಾಗಿದೆ.

ಈ ಬಾರಿ ಶಿಕ್ಷಕರ ಸಾರ್ವತ್ರಿಕ ವರ್ಗಾವಣೆಯಲ್ಲಿ 15-20 ಸಾವಿರ ಶಿಕ್ಷಕರಿಗೆ ಅವಕಾಶ ದೊರೆತಿದೆ.ಆದರೆ ಈಗ ಹೆಚ್ಚುವರಿ ಹಣೆಪಟ್ಟಿಯಿಂದಾಗಿ ಇದರ ಅರ್ಧದಷ್ಟು ಶಿಕ್ಷಕರು ಬಾಧಿತರಾಗಲಿದ್ದಾರೆ ಎಂದು ಅಂದಾಜಿಸಲಾಗಿದೆ. ಆದರೆಸ್ಥಳ ಆಯ್ಕೆಯ ಅವಕಾಶವನ್ನು ಶಿಕ್ಷಕರಿಗೆ ನೀಡಿದಲ್ಲಿ ಕೊಂಚ ನಿರಾಳರಾಗಬಹುದು ಎನ್ನುವುದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶಂಭುಲಿಂಗನಗೌಡ ಪಾಟೀಲ ಅವರ ಅಭಿಪ್ರಾಯ.ಕಠಿಣ ನಿಯಮಗಳಿಂದಾಗಿ 15-18 ವರ್ಷಗಳಿಂದ ವರ್ಗಾವಣೆ ದೊರೆಯದೆ ಸಂಕಷ್ಟ ಪಡುತ್ತಿರುವವರ ಸಂಖ್ಯೆಯೂ ದೊಡ್ಡದಿದೆ.ಶಿಕ್ಷಕರ ಕೊರತೆ ನೆಪವೊಡ್ಡದೆ ಸೇವಾ ಹಿರಿತನದವರಿಗೂ ಅವಕಾಶ ನೀಡಲಿ ಎನ್ನುವುದು ಸಂಘದ ಆಗ್ರಹವಾಗಿದ್ದು ಏನೇನಾಗುತ್ತದೆ ಎಂಬೊಂದನ್ನು ಕಾದು ನೋಡಬೇಕು

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....