LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಟಾಯರ್ ಕಳ್ಳರ ಬಂಧನ - ಹುಬ್ಬಳ್ಳಿಯ ಗೋಕುಲ್ ಪೊಲೀಸ್ ಠಾಣೆ ಪೊಲೀಸರ ಕಾರ್ಯಾಚರಣೆ

ಹುಬ್ಬಳ್ಳಿ -

ಹುಬ್ಬಳ್ಳಿಯ ಗೋಕುಲ ಠಾಣೆ ಪೊಲೀಸರು ಠಾಣಾ ವ್ಯಾಪ್ತಿಯಲ್ಲಿನ ಟಾಯರ್ ಕಳ್ಳತನ ಪ್ರಕರಣವನ್ನು ಪತ್ತೆ ಹಚ್ಚಿದ್ದಾರೆ‌.

ಗೋಕುಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶಿವಶಕ್ತಿ ಎಂಟರ್ ಪ್ರೈಜಸ್ ನಲ್ಲಿ 01.02.2021 ರಂದು ಕಳ್ಳತನ ಮಾಡಲಾಗಿತ್ತು. ಗೋಡೌನದ ಮೇಲ್ಛಾವಣಿ ಹತ್ತಿ ಬಂದು ಮೇಲ್ಯಾವಣಿಯ ಸಿಮೆಂಟ್ ಸೀಟಿಗೆ ಅಳವಡಿಸಿದ ನಟ ಬೋಲನ್ನು ಬಿಚ್ಚಿ ಪಕ್ಕಕ್ಕೆ ಸರಿಸಿ ಗೊಡೌನ ಒಳಗೆ ಪ್ರವೇಶ ಮಾಡಿ ಸಂಗ್ರಹಿಸಿಟ್ಟಿದ್ದ ಟಾಯರಗ ಗಳನ್ನು ಕಳ್ಳತನ ಮಾಡಲಾಗಿತ್ತು.

ವಿವಿಧ ಕಂಪನಿಗಳ ಮತ್ತು ವಾಹನಗಳಿಗೆ ಸಂಬಂಧಿ ಸಿದ 131 ಟಾಯರ್. 108 ಟ್ಯೂಬ್ ಮತ್ತು ಇತರೆ ವಸ್ತುಗಳನ್ನು ಕಳ್ಳತನ ಮಾಡಲಾಗಿತ್ತು‌. ಹೀಗೆ ಒಟ್ಟು 5,78,345 ರೂ ಕಿಮ್ಮತ್ತಿನ ವಸ್ತುಗಳ ನ್ನು ಕಳ್ಳತನ ಮಾಡಿಕೊಂಡು ಹೋದ ಬಗ್ಗೆ ಗೋಕುಲ ರೋಡ ಮೊಲೀಸ ಠಾಣೆಯಲ್ಲಿ ದೂರು ನೀಡಿದ್ದು ಪ್ರಕರಣ ದಾಖಲಾಗಿತ್ತು. ಈ ಕುರಿತು ಕಾರ್ಯಾಚರಣೆ ಮಾಡಿದ ಗೋಕುಲ ಠಾಣೆ ಪೊಲೀಸರು ಆರೋಪಿ ಗಳನ್ನು ಬಂಧನ ಮಾಡಿದ್ದಾರೆ.

ಹಳ್ಳೆಪ್ಪ ತಂದೆ ದೇವಪ್ಪ ಪೂಜಾರ ಸಾ: ಮಾರುತಿ ನಗರ ಗೋಕುಲ್ ರೋಡ ಹುಬ್ಬಳ್ಳಿ, ವಸೀಂ ಮಕ್ತುಮಸಾಬ ಸೈದಾಪೂರ ಸಾ: ಗದಗ ಬೆಟಗೇರಿ ನರಸಾಪೂರ ಬಂಧಿಸಿ 2,10,000/- ಕಿಮ್ಮತ್ತಿನ ವಸ್ತುಗಳನ್ನು ವಶಪಡಿಸಿಕೊಂಡಿದ್ದು, ಹಾಗೂ ಇನ್ನೂಳಿದ ಆರೋಪಿತರಿಗೆ ಪತ್ತೆ ಮಾಡುವದು ಬಾಕಿ ಇದ್ದು, ಸದರಿ ಎರಡು ಜನ ಆರೋಪಿಗಳನ್ನು ದಸ್ತಗಿರಿ ಮಾಡಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ‌.

ವಿನೋದ ಎಮ್. ಮುತ್ತೆದಾರ, ಸಹಾಯಕ ಪೊಲೀಸ ಆಯುಕ್ತರು, ಹುಬ್ಬಳ್ಳಿ ಶಹರ ಮಾರ್ಗದರ್ಶನದಲ್ಲಿ ಗೋಕುಲ ರೋಡ ಪೊಲೀಸ ಠಾಣೆಯ ಪೊಲೀಸ ಇನ್ಸಪೆಕ್ಟರ್ ರವರಾದ ಜಗದೀಶ್ ಸಿ. ಹಂಚಿನಾಳ, ರವರು ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಗಳಾದ ಎಮ್.ಎಚ್ ಮೂಗನೂರ, ಎ.ಎಸ್.ಐ. ಬಸವರಾಜ ಬೆಳಗಾವಿ, ರಾಜು ಹೊರ್ಕದವರ, ಮಹಾದೇವ ಹೊನ್ನಪ್ಪನವರ, ವಿಜಯ ಹಕಾಟೆ, ಸುಲೇಮಾನ ಚೋಪದಾರ, ಮಹೇಶ ಬೆನ್ನೂರ ಹಾಗೂ ಶ್ರೀ ಸಂಜೀವರಡ್ಡಿ ಕಡಬುರ ಸೇರಿದಂತೆ ಹಲವರು ಈ ಒಂದು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....