LIVE TV LocalCrimeNationalInternationalPoliticsEducationTechnologyEntertainmentSportsFeature
State News

ತನಿಖೆ ಆರಂಭವಾಗುತ್ತಿದ್ದಂತೆ ಐವರನ್ನೂ ವಶಕ್ಕೆ ಪಡೆದ ಎಸ್ಐಟಿ ಟೀಮ್

ಬೆಂಗಳೂರು -

ಸೆಕ್ಸ್ ಸಿಡಿ ಪ್ರಕರಣವನ್ನು ಎಸ್ ಐಟಿ ತನಿಖೆಗೆ ಹಸ್ತಾಂತರ ಮಾಡಿದ ಬೆನ್ನಲ್ಲೇ ತನಿಖೆ ಚುರುಕು ಕೊಂಡಿದೆ. ಈ ಒಂದು ಕೇಸ್ ನ್ನು ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡಕ್ಕೆ ತನಿಖೆಗೆ ವಹಿಸಿದ ಬೆನ್ನಲ್ಲೇ ಈಗ ಮಹತ್ವದ ಸುಳಿವು ತನಿಖಾಧಿಕಾರಿಗಳಿಗೆ ಸಿಕ್ಕಿದೆ. ಹೌದು ರಾಸಲೀಲೆ ಸಿಡಿ ಪ್ರಕರಣದ ತನಿಖೆ ಆರಂಭದಲ್ಲಿ ನಾಲ್ಕು ಖಾಸಗಿ ಚಾನೆಲ್ ಗಳ ವರದಿಗಾರರನ್ನು ತನಿಖಾಧಿಕಾರಿಗಳು ವಶಕ್ಕೆ ತಗೆದುಕೊಂಡಿದ್ದಾರೆ. ಸಿಡಿಯ ಮೂಲಕ್ಕೆ ಕೈಹಾಕಿದ್ದು ವಿಶೇಷ ತನಿಖಾ ತಂಡವು ಈ ಸಂಬಂಧ ನಾಲ್ಕು ಜನ ವರದಿಗಾರರನ್ನು ಹಾಗೇ ಮತ್ತೊಬ್ಬರನ್ನು ವಶಕ್ಕೆ ತಗೆದುಕೊಂಡು ವಿಚಾರಣೆಗೆ ಒಳಪಡಿಸಿದ್ದಾರೆ. ಸರಕಾರದ ಆದೇಶದ ಮೇರೆಗೆ ಶುಕ್ರವಾರ ಏಳು ಮಂದಿ ಅಧಿಕಾರಿಗಳ ನೇತ್ರತ್ವದಲ್ಲಿ ವಿಶೇಷ ತನಿಖಾ ತಂಡದ ರಚನೆಯಾಗಿದ್ದು, ಕೂಡಲೇ ಕಾರ್ಯ ಪ್ರವೃತ್ತವಾಗಿರುವ ಟೀಮ್ ನಾಲ್ಕು ಖಾಸಗಿ ಚಾನಲ್ ಗಳ ವರದಿಗಾರರನ್ನು ವಶಕ್ಕೆ ತಗೆದುಕೊಂಡಿರುವ ಎಸ್ ಐಟಿ ಅಧಿಕಾರಿಗಳು ವಿಚಾರಣೆಯನ್ನು ಮಾಡ್ತಾ ಇದ್ದಾರೆ. ಪ್ರಮುಖ ಆರೋಪಿಗಳನ್ನು ವಶಕ್ಕೆ ತಗೆದುಕೊಂಡು ವಿಚಾರಣೆ ಮಾಡ್ತಾ ಇದ್ದಾರೆ. ಭವಿತ, ಲಕ್ಷ್ಮೀಪತಿ, ಆಕಾಶ, ಅಭಿಷೇಕ ಹೀಗೆ ನಾಲ್ಕು ಜನರನ್ನು ವಶಕ್ಕೆ ತಗೆದುಕೊಂಡಿರುವ ಅಧಿಕಾರಿಗಳು ಡ್ರೀಲ್ ಮಾಡ್ತಾ ಇದ್ದಾರೆ.ಇನ್ನೂ ನಾಪತ್ತೆಯಾಗಿರುವ ಎರಡು ಚಾನಲ್ ಗಳ ಇಬ್ಬರು ವರದಿಗಾರರನ್ನು ಎಸ್ ಐಟಿ ಟೀಮ್ ನವರು ಹುಡುಕತಾ ಇದ್ದಾರೆ. ಇದು ಒಂದೆಡೆಯಾದರೆ ಇನ್ನೂ ಇತ್ತ ಸಿಡಿ ಹರಿಬಿಟ್ಟು ಮೊದಲು ದೂರು ನೀಡಿ ನಂತರ ಉಲ್ಟಾ ಹೊಡೆದ ದಿನೇಶ್ ಕಲ್ಲಹಳ್ಳಿಗೆ ಈ ಸಿಡಿ ನೀಡಿದ ವ್ಯಕ್ತಿಯನ್ನು ಎಸ್‌ಐಟಿ ಪೊಲಿಸರು ಈಗಾಗಲೇ ವಶಕ್ಕೆ ತಗೆದು ಕೊಂಡು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಇದೇ ವೇಳೆ ಇಂದಲ್ಲ ನಾಳೆ ದಿನೇಶ್ ಕಲ್ಲಹಳ್ಳಿ ಅವರನ್ನು ವಿಚಾರಣೆಯ ಮಾಡಲು ಎಸ್‌ಐಟಿ ಅಧಿಕಾರಿಗಳು ಮುಂದಾಗಿದ್ದಾರೆ, ಎಸ್‌ಐಟಿ ತನಿಖೆ ಸುಲಭವಾಗಲಿ ಎಂಬ ಉದ್ದೇಶದಿಂದ ಹಾಗೂ ತಮ್ಮ ಹೆಸರಿಗೆ ಅಂಟಿರುವ ಕಳಂಕ ಅಳಿಸಿಕೊಳ್ಳುವ ಪ್ರಯತ್ನವಾಗಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸೋಮವಾರ ದೂರು ಸಲ್ಲಿಸುವ ಸಾಧ್ಯತೆ ಇದೆ. ಇನ್ನೂ ಈ ಪ್ರಕರಣದ ಹಿಂದೆ ಮಾಜಿ ಸಚಿವರ ಹೆಸರಿಗೆ ಮಸಿ ಬಳಿಯುವ ಹುನ್ನಾರವಿದ್ದು, ಇದರಲ್ಲಿ ಒಂಬತ್ತು ಜನರ ಕೈವಾಡವಿದೆ ಎಂದು ಬಾಲಚಂದ್ರ ಜಾರಕಿಹೊಳಿ ಆರೋಪಿಸಿದ್ದಾರೆ. ಈ ಪ್ರಕರಣ ಬೇಧಿಸಲು ರಚಿಸಲಾಗಿರುವ ಎಸ್‌ಐಟಿ ತಂಡವು ಹೆಚ್ಚುವರಿ ಆಯುಕ್ತ ಸೌಮೇಂದು ಮುಖರ್ಜಿ (ಮುಖ್ಯಸ್ಥ), ಸಂದೀಪ್ ಪಾಟೀಲ್, ರವಿಕುಮಾರ್, ಅನುಚೇತ್, ಧರ್ಮೇಂದ್ರ, ಕಬ್ಬನ್ ಪಾರ್ಕ್ ಠಾಣೆ ಇನ್ಸ್ಪೆಕ್ಟರ್ ಮಾರುತಿ, ಸೈಬರ್ ಕ್ರೈಂ ಇನ್ಸ್ಪೆಕ್ಟರ್ ಪ್ರಶಾಂತ್ ಬಾಬು.ಬೆಂಗಳೂರು: ರಾಸಲೀಲೆ ಸಿಡಿ ಪ್ರಕರಣದ ಮೂಲಕ್ಕೆ ಕೈಹಾಕಿರುವ ವಿಶೇಷ ತನಿಖಾ ತಂಡವು ಈ ಸಂಬಂಧ ನಾಲ್ಕು ಜನ ವರದಿಗಾರರು ಹಾಗೇ ಇನ್ನೊರ್ವನನ್ನು ವಶಕ್ಕೆ ತಗೆದುಕೊಂಡು ವಿಚಾರಣೆಗೆ ಗುರಿಪಡಿಸಿದೆ. ಒಟ್ಟಾರೆ ಸರಕಾರದ ಆದೇಶದ ಮೇರೆಗೆ ಶುಕ್ರವಾರ ಏಳು ಮಂದಿ ಅಧಿಕಾರಿಗಳ ವಿಶೇಷ ತನಿಖಾ ತಂಡದ ರಚನೆಯಾಗಿದ್ದು ಕಾರ್ಯ ಪ್ರವತ್ತರಾಗಿರುವ ಅಧಿಕಾರಿಗಳ ಟೀಮ್ ಮೊದಲು ಸಿಡಿ ಹರಿಬಿಟ್ಟು ಮೊದಲು ದೂರು ನೀಡಿ ನಂತರ ಉಲ್ಟಾ ಹೊಡೆದ ದಿನೇಶ್ ಕಲ್ಲಹಳ್ಳಿಗೆ ಈ ಸಿಡಿ ನೀಡಿದ ವ್ಯಕ್ತಿಯನ್ನು ಎಸ್‌ಐಟಿ ಪೊಲಿಸರು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ ಎನ್ನಲಾಗುತ್ತಿದ್ದು ಏನೇ ಆಗಲಿ ಈವರೆಗೆ ಸೆಕ್ಸ್ ಸಿಡಿ ವಿಚಾರ ಕುರಿತಂತೆ ಸಿಡಿಯಲ್ಲಿನ ಯುವತಿಯ ಗುರುತು ಮಾಹಿತಿ ಸಿಗದಿದ್ದರೂ ಈ ಒಂದು ಪ್ರಕರಣದಲ್ಲಿ ಈಗಾಗಲೇ ವಿಶೇಷ ತನಿಖಾ ತಂಡವು ಐದು ಜನರನ್ನು ವಶಕ್ಕೆ ತಗೆದುಕೊಂಡಿದ್ದು ಡ್ರೀಲ್ ಮಾಡುತ್ತಾ ಇದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...