LIVE TV LocalCrimeNationalInternationalPoliticsEducationTechnologyEntertainmentSportsFeature
Local News

21ಕ್ಕೆ ಎಸ್.ಎಸ್.ಕೆ‌ ಸಮಾಜದಿಂದ ಸತ್ಕಾರ, ಅಭಿನಂದನಾ ಸಮಾರಂಭ

ಹುಬ್ಬಳ್ಳಿ -

ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿರುವ ನಾಗೇಶ ಕಲಬುರ್ಗಿಯವರಿಗೆ ಎಸ್.ಎಸ್.ಕೆ.ಶ್ರೀ ತುಳಜಾಭವಾನಿ ದೇವಸ್ಥಾನ ಕೇಂದ್ರ ಪಂಚ ಸಮಿತಿ ವತಿಯಿಂದ ಸತ್ಕಾರ ಹಾಗೂ ಅಭಿನಂದನಾ ಸಮಾರಂಭವನ್ನು ಇದೇ 21ರಂದು ಕೇಶ್ವಾಪೂರದ ಶ್ರೀನಿವಾಸ ಗಾರ್ಡನ್ ನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಎಸ್.ಎಸ್.ಕೆ ಸಮಾಜದ ಮುಖ್ಯ ಧರ್ಮದರ್ಶಿ ನೀಲಕಂಠಸಾ ಜಡಿ ಹೇಳಿದರು.

ನಗರದಲ್ಲಿಂದು ತುಳಜಾಭವಾನಿ ದೇವಸ್ಥಾನದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,ಎಸ್.ಎಸ್.ಕೆ ಸಮಾಜವು ರಾಜಕೀಯವಾಗಿ,ಸಾಮಾಜಿಕವಾಗಿ ಹಾಗೂ ಸಾರ್ವಜನಿಕ ಸೇವೆಯಲ್ಲಿ ಸಮಾಜದ ಮುಖ್ಯವಾಹಿನಿಯಲ್ಲಿ ಗುರುತಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸಮಾಜದ ಪ್ರತಿಭಾವಂತರಿಗೆ ಪ್ರೋತ್ಸಾಹಿಸಿ ಮತ್ತಷ್ಟು ಬೆಂಬಲ ನೀಡುವ ಸದುದ್ದೇಶದಿಂದ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ ಎಂದರು.

ನಾಗೇಶ ಕಲಬುರ್ಗಿಯವರ ನೇಮಕಕ್ಕೆ ಕಾರಣಿಕರ್ತರಾದ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್, ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರಿಗೆ ಅಭಿನಂದನಾಪೂರ್ವಕ ಸತ್ಕಾರ ಮಾಡಲಾಗುತ್ತದೆ.ಕಾರ್ಯಕ್ರಮದ ಅಧ್ಯಕ್ಷತೆಯನ್ನು ನೀಲಕಂಠಸಾ ಜಡಿ ವಹಿಸಲಿದ್ದು,

ಮುಖ್ಯ ಅತಿಥಿಗಳಾಗಿ ಶಾಸಕರಾದ ಅರವಿಂದ ಬೆಲ್ಲದ, ಪ್ರದೀಪ ಶೆಟ್ಟರ್, ಅಮೃತ ದೇಸಾಯಿ, ಶಂಕರಪಾಟೀಲ ಮುನೇನಕೊಪ್ಪ, ಎಸ್.ವಿ ಸಂಕನೂರ,ಸಿ.ಎಂ.ನಿಂಬಣ್ಣವರ ಆಗಮಿಸಲಿದ್ದಾರೆ. ಇನ್ನೂ ಇದೇ ಸಂದರ್ಭದಲ್ಲಿ ನಿಗಮ ಮಂಡಳಿಗೆ ಆಯ್ಕೆಯಾದ ರಾಜು.ಜರ್ತಾರಘರ, ಸಂಗೀತಾ ಬದ್ದಿ,ರಂಜನಾ ಬಂಕಾಪೂರ ಇವರಿಗೆ ಸತ್ಕರಿಸಲಾಗುತ್ತದೆ ಎಂದು ಅವರು ಹೇಳಿದರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....