LIVE TV LocalCrimeNationalInternationalPoliticsEducationTechnologyEntertainmentSportsFeature
State News

ಡಯಟ್ ಮೇಲೆ ದಾಳಿ ಮೂವರು ನೌಕರರಿಗೆ ತಲ್ವಾರ್ ಏಟು ಆತಂಕ ಮೂಡಿಸಿದ ಆಗಂತುಕನ ದಾಳಿ

ಮಂಗಳೂರು -

ಶಿಕ್ಷಣ ಇಲಾಖೆಯ ಮೂವರು ಮಹಿಳಾ ನೌಕರರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ - ಶಿಕ್ಷಕಿ ಯೊಬ್ಬ ರಿಗೆ ಗಿಪ್ಟ್ ಕೊಡುವ ನೆಪದಲ್ಲಿ ಎಂಟ್ರಿ ಕೊಟ್ಟು ಅಟ್ಯಾಕ್ ಮಾಡಿದ್ದಾನೆ.ಹೌದು ಇಂಥಹದೊಂದು ಘಟನೆ ಮಂಗಳೂರಿನ ಡಯಟ್ ನಲ್ಲಿ ನಡೆದಿದೆ. ನಗರದ ಜೈಲು ರಸ್ತೆಯಲ್ಲಿರುವ ಡಯಟ್ ಶಿಕ್ಷಣ ಸಂಸ್ಥೆಗೆ ಯುವಕನೊಬ್ಬ ಎಂಟ್ರಿ ಕೊಟ್ಟು ಶಿಕ್ಷಕಿ ಯೊಬ್ಬರನ್ನು ವಿಚಾರಣೆ ಮಾಡಿದ್ದಾರೆ.ಅವರು ಇಲ್ಲಿ ಇಲ್ಲ ನಮಗೆ ಗೊತ್ತಿಲ್ಲ ಎಂದು ಹೇಳಿದ್ದಾರೆ.ಇದನ್ನು ಕೇಳಿದ ಆ ಯುವಕ ಡಯಟ್ ಒಳಗೆ ಪ್ರವೇಶ ಮಾಡಿದ್ದಾನೆ.ನೋಡತೇನಿ ಅವರಿಗೆ ನಾನು ಗಿಪ್ಟ್ ಕೊಡಬೇಕು ಎಂದಿದ್ದಾರೆ.ಶಿಕ್ಷಣ ಸಂಸ್ಥೆಯೊಳಗೆ ಬಂದ ಆಗಂತುಕ ನೋರ್ವನು ಏಕಾಎಕಿಯಾಗಿ ಅಲ್ಲಿದ್ದ ಮೂವರು ಮಹಿಳಾ ಸಿಬ್ಬಂದಿಗೆ ತಲ್ವಾರ್ ನಿಂದ ದಾಳಿ ಮಾಡಿದ್ದಾರೆ.

30-35 ವಯಸ್ಸಿನ ಈ ಒಂದು ಯುವಕ ಏಕಾಎಕಿ ಯಾಗಿ ಪ್ರವೇಶ ಮಾಡಿ ಒಳಗಡೆ ಬಂದು ಮತ್ತೆ ಯಾರೋ ಒಂದು ಹೆಸರನ್ನು ಹೇಳಿ ಈ ಹೆಸರಿನ ಶಿಕ್ಷಕಿ ಯವರು ಇಲ್ಲಿ ಇದ್ದಾರೆ ಎಂದು ವಿಚಾರಣೆ ಮಾಡಿದ್ದಾನೆ.ನಾನು ಕೂಡಾ ಅವರ ಕೈಯಲ್ಲಿ ಕಲಿತ ವನು ಎಂದಿದ್ದಾನೆ.ಇದೇಲ್ಲವನ್ನು ಕೇಳಿ ಡಯಟ್ ನಲ್ಲಿರುವ ಮಹಿಳಾ ಸಿಬ್ಬಂದಿಗಳು ಯುವಕನಿಗೆ ಸ್ಪಷ್ಟವಾದ ಮಾಹಿತಿಯನ್ನು ನೀಡಿಲ್ಲ ಇದರಿಂದ ಕೋಪಗೊಂಡ ಯುವಕ ಏಕಾಎಕಿಯಾಗಿ ತಲ್ವಾರ್ ನಿಂದ ಸಿಕ್ಕ ಸಿಕ್ಕವರ ಮೇಲೆ ದಾಳಿಯನ್ನು ಮಾಡಿದ್ದು ಮೂವರು ಮಹಿಳಾ ನೌಕರರು ಸಿಬ್ಬಂದಿ ತೀವ್ರವಾಗಿ ಗಾಯಗೊಂಡಿದ್ದು ಇನ್ನೂ ಸಧ್ಯ ಸುದ್ದಿ ತಿಳಿದ ಪೊಲೀಸರು ಸ್ಥಳಕ್ಕೇ ಭೇಟಿ ನೀಡಿ ಪರಿಶೀಲನೆ ಮಾಡಿದ್ದು ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.

ಇನ್ನೂ ಇತ್ತ ತೀವ್ರವಾಗಿ ಗಾಯಗೊಂಡಿರುವ ಮೂವರು ಮಹಿಳಾ ನೌಕರರು ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆದುಕೊಳ್ಳುತ್ತಿದ್ದಾರೆ. ಡಯಟ್‌ ಒಳಗೆ ಬಂದಿದ್ದ ವ್ಯಕ್ತಿಯೋರ್ವ ಶಿಕ್ಷಕಿಯೊಬ್ಬರ ಹೆಸರು ಕೇಳಿದ್ದಾನೆ.ಆದರೆ ಯಾರೂ ಅನ್ನೋದು ಅಲ್ಲಿದ್ದ ಸಿಬ್ಬಂದಿಗೆ ಗೊತ್ತೇ ಆಗಲಿಲ್ಲ. ಆ ಬಳಿಕ ಅವರಿಗೆ ಒಂದು ಗಿಫ್ಟ್‌ ನೀಡಬೇಕು ಎಂದು ಹೇಳಿ ತನ್ನ ಬಳಿಯಲ್ಲಿದ್ದ ಮಚ್ಚನ್ನು ಸಿಬ್ಬಂದಿಗಳ ಮೇಲೆ ಬೀಸಿದ್ದಾನೆ.ಘಟನೆಯಲ್ಲಿ ಸಿಬ್ಬಂದಿಗಳಾದ ನಿರ್ಮಲಾ,ರೀನಾ ರಾಯ್‌ ಹಾಗೂ ಗುಣವತಿ ಎಂಬವರು ಗಂಭೀರವಾಗಿ ಗಾಯಗೊಂಡಿದ್ದಾರೆ.ಈ ಮೂವರು ಕೂಡ ಡಯಟ್‌ನಲ್ಲಿ ಎಫ್‌ಡಿಎ, ಸ್ಟೆನ್ನೋಗ್ರಾಫರ್‌ ಮತ್ತು ಡಿ ಗ್ರೂಪ್‌ ನೌಕರರಾಗಿ ದ್ದಾರೆ.

ಘಟನೆಯ ಬೆನ್ನಲ್ಲೇ ಸಮೀಪದಲ್ಲಿದ್ದ ಜೈಲು ಸಿಬ್ಬಂದಿಗಳು ಅಪರಿಚಿತ ವ್ಯಕ್ತಿಯನ್ನು ಸೆರೆ ಹಿಡಿದಿದ್ದು ಆತನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.ಆತ ಯಾರೂ,ಯಾವ ಉದ್ದೇಶಕ್ಕಾಗಿ ಹೀಗೆ ಮಾಡಿದ್ದೇನೆ ಅನ್ನೋ ಬಗ್ಗೆ ಬಾಯ್ಬಿಟ್ಟಿಲ್ಲ ಎಂದು ತಿಳಿದುಬಂದಿದೆ. ಸ್ಥಳಕ್ಕೆ ನಗರ ಪೊಲೀಸ್‌ ಆಯುಕ್ತ ಎನ್.‌ ಶಶಿಕುಮಾರ್‌ ಭೇಟಿ ನೀಡಿದ್ದು ಪರಿಶೀಲನೆಯನ್ನು ನಡೆಸುತ್ತಿದ್ದಾರೆ.

ಗಾಯಗೊಂಡಿರುವ ಮಹಿಳಾ ಸಿಬ್ಬಂದಿಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಮೂವರು ಕೂಡ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಪೊಲೀಸರು ಸ್ಥಳದಲ್ಲಿಯೇ ಮೊಕ್ಕಾಂ ಹೂಡಿದ್ದು ಪರಿಶೀಲನೆಯನ್ನು ನಡೆಸುತ್ತಿದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....