LIVE TV LocalCrimeNationalInternationalPoliticsEducationTechnologyEntertainmentSportsFeature
State News

ಮರದ ಪೊಟರೆಗಳಲ್ಲಿ ಗಿಡನೆಟ್ಟು ಹೊಸ ಪ್ರಯೋಗ - ಬಂಡೀಪುರ ಅರಣ್ಯ ಇಲಾಖೆ ಯಶಸ್ವಿ

ಚಾಮರಾಜನಗರ:

ಅರಣ್ಯದಲ್ಲಿ ಒಣಗಿದ ದೊಡ್ಡ ಮರಗಳ ಪೊಟರೆಯೊಳಗೆ ಪಕ್ಷಿಗಳ ಹಿಕ್ಕೆಯಿಂದ ಬಿದ್ದ ಬೀಜಗಳಿಂದ ಹಸಿರು ಚಿಗುರೊಡೆಯುವುದು ಸಹಜ ಪ್ರಕ್ರಿಯೆ ಆದರೆ ಚಾಮರಾಜನಗರ ಜಿಲ್ಲೆಯ ಬಂಡೀಪುರದ ಅಭಯಾರಣ್ಯದಲ್ಲಿ ಕೃತಕವಾಗಿ ಪೊಟರೆಗಳಲ್ಲಿ ಬೀಜಗಳು ಬಿತ್ತನೆ ಮಾಡಿ ಯಶ್ವಸಿಗೊಂಡಿದ್ದಾರೆ.

ಸಸ್ಯಾಹಾರಿ ಪ್ರಾಣಿಗಳಿಗೆ ಮೇವಿಗೆ ಕೊರತೆಯಾಗಬಾರದು ಮತ್ತು ಸಾಯುವ ಹಂತದಲ್ಲಿರುವ ಮರಗಳು ಇರುವ ಸ್ಥಳದಲ್ಲೇ ಇನ್ನೊಂದು ಗಿಡವನ್ನು ಬೆಳೆಸಬೇಕು ಎಂಬದು ಈ ವಿನೂತನ ಯೋಜನೆಯ ಹಿಂದಿನ ಉದ್ದೇಶ.

ಒಣಗಿದ ಮರದ ಪೊಟರೆಗಳಲ್ಲಿ ಹತ್ತಿ, ಆಲದಮರ, ಮತ್ತಿ, ಗೋಣಿ, ಬಸುರಿ ಸೇರಿದಂತೆ ಪ್ರಾಣಿಗಳ ಮೇವಿಗೆ ಆಗುವ ಗಿಡಗಳನ್ನು ನೆಡುವ ಕಾರ್ಯ ಸಂರಕ್ಷಿತ ಪ್ರದೇಶದಾದ್ಯಂತ ಚಾಲ್ತಿಯಲ್ಲಿದೆ. ಬಂಡೀಪುರ ವ್ಯಾಪ್ತಿಯಲ್ಲಿ 13 ವಲಯಗಳಿದ್ದು ಕನಿಷ್ಠ 10 ಸಾವಿರ ಗಿಡಗಳನ್ನು ನೆಡುವ ಮೂಲಕ ಅಧಿಕಾರಿಗಳು ಯಶ್ವಸಿಯಾಗಿದ್ದಾರೆ.

ಒಂದು ವಲಯದಲ್ಲಿ ಗರಿಷ್ಠ 800ರಿಂದ 1000 ಗಿಡಗಳನ್ನು ಈ ವಿಧಾನದ ಮೂಲಕ ಬೆಳೆಸುವ ಯೋಜನೆಯನ್ನು ಇಲಾಖೆ ಹಾಕಿಕೊಂಡಿದೆ.
ಕಾಡಿನಲ್ಲಿರುವ ಒಣಗಿದ ಮರಗಳು ಇರುವಲ್ಲಿ ಹಾಗೂ ಖಾಲಿ ಜಾಗಗಳಲ್ಲಿ ಗಿಡಗಳನ್ನು ನಿರಂತರವಾಗಿ ನೆಡಲಾಗುತ್ತದೆ. ನೆಟ್ಟ ಎಲ್ಲ ಸಸಿಗಳು ಬದುಕುವುದಿಲ್ಲ. ಪ್ರಾಣಿಗಳು ಹಾಳು ಮಾಡುತ್ತವೆ. ಸಣ್ಣ ಚಿಗುರುಗಳನ್ನು ತಿನ್ನುತ್ತವೆ. ಇದನ್ನು ತಪ್ಪಿಸುವ ಪ್ರಯತ್ನವಾಗಿ ಹೊಸ ಪ್ರಯೋಗ ಕೈಗೆತ್ತಿಕೊಳ್ಳಲಾಗಿದೆ ಎಂದು ಹೇಳುತ್ತಾರೆ ಅಧಿಕಾರಿಗಳು.

ಮರದ ಪೊಟರೆಗಳಲ್ಲಿ ಹೆಚ್ಚಿನ ನೀರಿನ ಅಂಶ ಇದ್ದರೆ ಗೊಬ್ಬರದ ಅವಶ್ಯಕತೆ ಇರುವುದಿಲ್ಲ. ಪೊಟರೆಗಳಲ್ಲಿ ಸಿಗುವ ಪೋಷಕಾಂಶಗಳ ಬಳಸಿಕೊಂಡೇ ಗಿಡಗಳು ಬೆಳೆಯುತ್ತವೆ .

ಕಾಳ್ಗಿಚ್ಚಿನ ಸಮಯದಲ್ಲಿ ಬೆಂಕಿ ಹರಡಿ ಕಾಡು ನಾಶವಾಗುವುದು ತಪ್ಪುತ್ತದೆ ಎಂಬ ದೃಷ್ಟಿಯಿಂದ ಎಲ್ಲ ವಲಯಗಳಲ್ಲಿ ಇರುವ ಒಣಗಿದ ಮರಗಳನ್ನು ಗುರುತಿಸಿ ಸಸಿ ನೆಡುವ ಮತ್ತು, ಬೀಜ ಬಿತ್ತನೆ ಮಾಡುವ ಪ್ರಯೋಗ ಮಾಡುತ್ತಿದ್ದೇವೆ ಈಗಾಗಲೇ ಬಹುತೇಕ ಕಡೆ ಇದು ಯಶ್ವಸಿಯಾಗಿದೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...