LIVE TV LocalCrimeNationalInternationalPoliticsEducationTechnologyEntertainmentSportsFeature
Education News

ಮತ್ತೊಂದು ಉಪವಾಸ ಸತ್ಯಾಗ್ರಹಕ್ಕೇ ಬಸವರಾಜ ಹೊರಟ್ಟಿ – 5 ರಿಂದ ಧಾರವಾಡದಲ್ಲಿ ಸತ್ಯಾಗ್ರಹ ಆರಂಭ

ಧಾರವಾಡ -

ರಾಜ್ಯ ಸರ್ಕಾರದ ವಿರುದ್ದ ಮಾಜಿ ಶಿಕ್ಷಣ ಸಚಿವ ಬಸವರಾಜ ಹೊರಟ್ಟಿ ಮತ್ತೊಂದು ಹೋರಾಟಕ್ಕೇ ಮುಂದಾಗಿದ್ದಾರೆ. ಈ ಹಿಂದೆ ದೊಡ್ಡ ಪ್ರಮಾಣದಲ್ಲಿ ಹೋರಾಟ ಮಾಡಿದ್ದ ಹೊರಟ್ಟಿಯವರು ಈಗ ಮತ್ತೊಂದು ಹೋರಾಟಕ್ಕೇ ಸಿದ್ದರಾಗಿದ್ದಾರೆ. ಡಿಸೆಂಬರ್ 5 ರಿಂದ ಧಾರವಾಡದಲ್ಲಿ ಉಪವಾಸ ಸತ್ಯಾಗ್ರಹದೊಂದಿಗೆ ಹೋರಾಟವನ್ನು ಆರಂಭ ಮಾಡಲಿದ್ದಾರೆ.

ಕರ್ನಾಟಕ ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘ,ಕರ್ನಾಟಕ ರಾಜ್ಯ ಖಾಸಗಿ ಶಿಕ್ಷಣ ಸಂಸ್ಥೆಗಳ ನೌಕರರ ಮತ್ತು ಆಡಳಿತ ಮಂಡಳಿಗಳ ಹೋರಾಟ ಸಮಿತಿ ಹಾಗೂ ವಿವಿಧ ಸಂಘಟನೆಗಳ ನೇತ್ರತ್ವದಲ್ಲಿ ಬಸವರಾಜ ಹೊರಟ್ಟಿಯವರು ಮತ್ತೊಂದು ಹೋರಾಟವನ್ನು ಮಾಡುತ್ತಿದ್ದಾರೆ.

ಪ್ರಮುಖವಾಗಿ 1995 ರ ನಂತರ ಆರಂಭಗೊಂಡ ಶಾಶ್ವತ ಅನುದಾನ ರಹಿತ ಶಾಲಾ ಕಾಲೇಜುಗಳಿಗೆ ಅನುದಾನ ನೀಡುಬೇಕು,ನೂತನ ಪಿಂಚಣಿ ಯೋಜನೆ ಜಾರಿಗೆ ತರಬೇಕು, ಕೆಲ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಮಾಜಿ ಶಿಕ್ಷಣ ಸಚಿವ ಬಸವರಾಜ ಹೊರಟ್ಟಿ ಧಾರವಾಡದ ಮುತ್ತಣ್ಣ ಸ್ಮಾರಕ ಪೊಲೀಸ್ ವಸತಿ ಶಾಲೆಯ ಶಿಕ್ಷಕರ ವೇತನ ಬಿಡುಗಡೆ ಹಾಗೇ ಶಾಲಾ ಆರಂಭಕ್ಕೇ ಅವಕಾಶ ನೀಡಬೇಕು ಹೀಗೆ ಕೆಲ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಮಾಜಿ ಶಿಕ್ಷಣ ಸಚಿವ ಬಸವರಾಜ ಹೊರಟ್ಟಿ ಉಪವಾಸ ಸತ್ಯಾಗ್ರಹ ಮಾಡಲಿದ್ದಾರೆ.

ಧಾರವಾಡ ಜಿಲ್ಲಾಧಿಕಾರಿ ಕಚೇರಿಯ ಮುಂದೆ ಈ ಒಂದು ಸತ್ಯಾಗ್ರಹ ಆರಂಭವಾಗಲಿದ್ದು ಹೋರಾಟದಲ್ಲಿ ರಾಜ್ಯದ ರಾಜ್ಯದ ಕೇಂದ್ರ ಸಮಿತಿಯ ಸದಸ್ಯರು ಎಲ್ಲಾ ಜಿಲ್ಲಾ ಕೇಂದ್ರದಿಂದ ಶಿಕ್ಷಕರು ಶಿಕ್ಷಣ ಸಂಸ್ಥೆಗಳ ಮಾಲೀಕರು ಸೇರಿದಂತೆ ಹಲವರು ಹೊರಟ್ಟಿಯವರೊಂದಿಗೆ ಸತ್ಯಾಗ್ರಹದಲ್ಲಿ ಪಾಲ್ಗೊಳ್ಳಲಿದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....