LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಬೆಳಗಾವಿ ಲಿಪಿಕ ನೌಕರರ ಸಂಘ ಅಸ್ಥಿಸ್ವಕ್ಕೆ – ಮೂವರು ಸಂಚಾಲಕರ ನೇಮಕ – ಏಪ್ರೀಲ್ ನಲ್ಲಿ ಸಮಾವೇಶ

ಧಾರವಾಡ -

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯ ನೌಕರರ ಸಂಘ ಬೆಳಗಾವಿ ವಿಭಾಗ ಮಟ್ಟದ ಲಿಪಿಕ ನೌಕರರ ಸಂಘ ಅಸ್ಥಿತ್ವಕ್ಕೆ ಬಂದಿದೆ. ಧಾರವಾಡದಲ್ಲಿ ಬೆಳಗಾವಿ ವಿಭಾಗ ಮಟ್ಟದ ಇಲಾಖೆಯ ಮುಖ್ಯಸ್ಥರು ಸಭೆ ಮಾಡಿ ಸಂಘದ ರಚನೆ ಕುರಿತಂತೆ ಚರ್ಚೆ ಮಾಡಿದರು.

ಧಾರವಾಡ ಆರೋಗ್ಯ ಇಲಾಖೆಯ ಪ್ರಥಮ ದರ್ಜೆ ಸಹಾಯಕ ಶ್ರೀಪಾದ ಕಮ್ಮಾರ ನೇತ್ರತ್ವದಲ್ಲಿ ನಡೆದ ಈ ಒಂದು ಸಭೆಯಲ್ಲಿ ಬೆಳಗಾವಿ ವಿಭಾಗದ ಇಲಾಖೆಯ ನೌಕರರು ಈ ಒಂದು ಸಭೆಯಲ್ಲಿ ಪಾಲ್ಗೊಂಡು ಕಳೆದ ಹಲವು ದಿನಗಳಿಂದ ನೆನೆಗುದಿಗೆ ಬಿದ್ದಿದ್ದ ಸಂಘದ ರಚನೆಯ ಕುರಿತಂತೆ ಚರ್ಚೆ ಮಾಡಿದರು.

ಒಂದೂವರೆ ಘಂಟೆಗಳ ಕಾಲ ಸಭೆಯಲ್ಲಿ ಚರ್ಚೆ ಮಾಡಿ ಅಂತಿಮವಾಗಿ ಬೆಳಗಾವಿ ವಿಭಾಗೀಯ ಮಟ್ಟದ ಲಿಪಿಕ ನೌಕರರ ಕೇಂದ್ರ ಸಂಘವನ್ನು ರಚನೆ ಮಾಡಿದರು. ಸಧ್ಯ ಧಾರವಾಡದ ಶ್ರೀಪಾದ ಕಮ್ಮಾರ ಅವರನ್ನು ಬೆಳಗಾವಿ ವಿಭಾಗದ ಸಂಚಾಲಕರನ್ನಾಗಿ

ಬೆಳಗಾವಿಯ ಹೇಮಂತ ಕುಲಕರ್ಣಿ, ಹುಬ್ಬಳ್ಳಿಯ ನಾಗರಾಜ ಕಡಕೋಳ ಹೀಗೆ ಮೂವರನ್ನು ಸಂಘದ ಸಂಚಾಲಕರನ್ನಾಗಿ ನೇಮಕ ಮಾಡಿದರು.

ಧಾರವಾಡ, ಹಾವೇರಿ, ಬೆಳಗಾವಿ, ಗದಗ, ಬಾಗಲಕೋಟೆ,ಕಾರವಾರ,ವಿಜಯಪುರ ಹೀಗೆ ವಿಭಾಗದ ಏಳು ಜಿಲ್ಲೆಗಳನ್ನು ಒಳಗೊಂಡ ಸಂಘವನ್ನು ರಚನೆ ಮಾಡಲಾಗಿದೆ.

ಮುಖ್ಯವಾಗಿ ನೌಕರರ ಕುಂದು ಕೊರತೆ ಸಮಸ್ಯೆ ನ್ಯಾಯಯುತವಾದ ಬೇಡಿಕೆಗಳ ಈಡೇರಿಕೆಗಳನ್ನು ಸರ್ಕಾರಕ ಗಮನಕ್ಕೆ ತರೊದು ಅಲ್ಲದೇ ಹೋರಾಟ ಹೀಗೆ ಹಲವಾರು ಉದ್ದೇಶಗಳನ್ನು ಮುಂದಿಟ್ಟು ಕೊಂಡು ಈ ಒಂದು ಸಂಘವನ್ನು ರಚನೆ ಮಾಡಲಾಗಿದೆ.

ಇನ್ನೂ ಬರುವ ಏಪ್ರೀಲ್ ನಲ್ಲಿ ದೊಡ್ಡ ಪ್ರಮಾಣ ದಲ್ಲಿ ಸಂಘದ ಒಂದು ಸಮಾವೇಶವನ್ನು ಮಾಡಿ ಸಂಘವನ್ನು ಉದ್ಘಾಟನೆ ಮಾಡಿ ನಂತರ ವಿಭಾಗದ ಅಧ್ಯಕ್ಷರು ಸೇರಿದಂತೆ ಸಂಘಟನೆಯನ್ನು ಬಲಪಡಿಸೊದು ಹೀಗೆ ಎಲ್ಲವೂ ಸಮಾವೇಶದ ಬಳಿಕ ಕಾರ್ಯಾರಂಭ ಆಗಲಿವೆ ಎಂದು ಬಾಗಲಕೋಟ ಲಿಪಿಕ ನೌಕರರ ಸಂಘದ ಅಧ್ಯಕ್ಷರು ಮತ್ತು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷರಾದ ಮಲ್ಲಿಕಾರ್ಜುನ ಬಳ್ಳಾರಿ ಹೇಳಿದರು. ಸಂಘದ ಧಾರವಾಡ ಜಿಲ್ಲೆಯ ಪ್ರಧಾನ ಕಾರ್ಯದರ್ಶಿ ಮತ್ತು ಬೆಳಗಾವಿ ವಿಭಾಗದ ಸಂಚಾಲಕರಾದ ಶ್ರೀಪಾದ ಕುಂಬಾರ ಸುದ್ದಿ ಸಂತೆಗೆ ತಿಳಿಸಿದ್ದಾರೆ.

ಅಲ್ಲದೇ ಬರುವ ದಿನಗಳಲ್ಲಿ ಸಂಘವನ್ನು ಇನ್ನಷ್ಟು ಬಲಪಿಡಿಸಿಸೊದಾಗಿ ಹೇಳಿದರು. ಈ ಒಂದು ಸಭೆಯಲ್ಲಿ ಏಳು ಜಿಲ್ಲೆಗಳ ಅಧ್ಯಕ್ಷರು ಪ್ರಧಾನ ಕಾರ್ಯದರ್ಶಿಗಳು ಮತ್ತು ಖಜಾಂಚಿ ಗಳು ಮತ್ತು ಲಿಪಿಕ ನೌಕರರ ಸಂಘದ ಸದಸ್ಯರು ಪಾಲ್ಗೊಂಡಿದ್ದರು.ಇದೇ ವೇಳೆ ಧಾರವಾಡ ಆರೋಗ್ಯ ಇಲಾಖೆಯ ಸಿಬ್ಬಂದಿ ಗಳಾದ ಗಣಪತಿ,ಅರವಿಂದ ಕೋಳಿವಾಡ,ಬಸವರಾಜ ಮೊರಬದ,ಮಹೇಶ್,ನಾಗರಾಜ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...