LIVE TV LocalCrimeNationalInternationalPoliticsEducationTechnologyEntertainmentSportsFeature
State News

BEO ಕಚೇರಿ ಜಪ್ತಿ ಕಚೇರಿಯಲ್ಲಿನ ವಸ್ತುಗಳನ್ನು ತಗೆದುಕೊಂಡು ಹೋದ ಅರ್ಜಿದಾರರು....

ಕಾರವಾರ -

ಶಾಲೆಯ ಬಾಡಿಗೆಯನ್ನು ಪಾವತಿಸದ ಹಿನ್ನಲೆಯಲ್ಲಿ ಬಿಇಓ ಕಚೇರಿಯನ್ನು ಜಪ್ತಿ ಮಾಡಿದ ಘಟನೆ ಕಾರವಾರದಲ್ಲಿ ನಡೆದಿದೆ.ಹೌದು ಭಟ್ಕಳದ ಮುಗ್ದುಮ್ ಕಾಲೋನಿಯ ಜಮಾತುಲ್ ಮುಸ್ಲಿಮಿನ್‌ನ ಕಟ್ಟಡದಲ್ಲಿನ ಸರ್ಕಾರಿ ಉರ್ದು ಪ್ರಾರ್ಥಮಿಕ ಶಾಲೆಯ ಕಟ್ಟಡವನ್ನು ಕಳೆದ 40 ವರ್ಷಗಳಿಂದ ನಡೆಯುತ್ತಿದ್ದು 20 ವರ್ಷಗಳಿಂದ ಬಾಡಿಗೆ ಬಾಕಿ ಉಳಿಸಿಕೊಂಡಿರುವುದರಿಂದ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಾಗಿತ್ತು.ಈ ಕುರಿತಂತೆ ವಿಚಾರಣೆ ಮಾಡಿದ ನ್ಯಾಯಾಲಯ ಆದೇಶವನ್ನು ಮಾಡಿದ್ದು ಹೀಗಾಗಿ ಆದೇಶ ದಂತೆ ಭಟ್ಕಳದ ಬಿಇಒ ಕಚೇರಿಯ ಉಪಕರಣಗಳನ್ನು ನ್ಯಾಯಾಲಯದ ಸಿಬ್ಬಂದಿ ಜಪ್ತಿ ಮಾಡಿದರು.

ಮುಗ್ದುಮ್ ಕಾಲೋನಿಯಲ್ಲಿರುವ ಸರ್ಕಾರಿ ಉರ್ದು ಪ್ರಾಥಮಿಕ ಶಾಲೆಯು 40 ವರ್ಷದಿಂದ ಬಾಡಿಗೆ ಕಟ್ಟಡ ದಲ್ಲಿ ನಡೆಯುತ್ತಿದ್ದು ಈ ಕಟ್ಟಡವು ಜಮಾತೆ ಮುಸ್ಲೀಮಿ ನ್‌ಗೆ ಸೇರಿದೆ.ಸುಮಾರು 20 ವರ್ಷದಿಂದ ಶಿಕ್ಷಣಾಧಿಕಾರಿ ಕಚೇರಿಯಿಂದ ಕಟ್ಟಡದ ಬಾಡಿಗೆ (ಸುಮಾರು 1.49 ಲಕ್ಷ) ಕಟ್ಟದ ಕಾರಣ ಜಮಾತೆ ಮುಸ್ಲೀಮಿನ್ ಕಾರ್ಯದರ್ಶಿ 2005 ರಲ್ಲಿ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ದಾವೆ ಹೂಡಿದ್ದರು.ಅದರಂತೆ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಬಿಇಓ ಕಛೇರಿಯಲ್ಲಿನ ಉಪಕರಣಗಳನ್ನು ಜಪ್ತಿ ಮಾಡುವಂತೆ ಸೆಪ್ಟೆಂಬರ್ 14 ರಂದು ಆದೇಶ ಹೊರಡಿಸಿತ್ತು.ಅದರಂತೆ ತಾಲೂಕಿನ ಜೆಎಮ್‌ಎಫ್‌ಸಿ ನ್ಯಾಯಾಲಯದ ಬಿಲಿಫ್ ಗಣಪತಿ ಬಿಇಓ ಕಛೇರಿಗೆ ಬಂದು ನ್ಯಾಯಲಯದ ವಾರಂಟ್ ಹೊರಡಿಸಿ ಜಪ್ತಿ ನಿಯಮ ಜಾರಿಗೆ ಮಾಡಿ ವಸ್ತುಗಳನ್ನು ಜಪ್ತಿ ಮಾಡಿಕೊಂಡರು

9 ಕಂಪ್ಯೂಟರ್, 66 ಫೈಬರ್ ಚೇರ್, 26 ಕುರ್ಚಿ, 26 ಟೇಬಲ್, ಒಂದು ವಾಹನ ಹಾಗೂ 2 ಮೆಟಲ್ ಟೇಬಲ್ ಅನ್ನು ಜಪ್ತಿ ಮಾಡಿಕೊಳ್ಳಲಾಗಿದೆ. ಕಾಲಾವಕಾಶ ಕೇಳಿದ ಶಿಕ್ಷಣಾಧಿಕಾರಿ ನ್ಯಾಯಾಲಯದಲ್ಲಿ ದಾವೆ ಹೂಡಿದ್ದ ಮುಗ್ದುಮ್ ಕಾಲೋನಿಯ ಜಮಾತುಲ್ ಮುಸ್ಲಿಮಿನ್ ಅಧ್ಯಕ್ಷ, ಕಾರ್ಯದರ್ಶಿ, ಸದಸ್ಯರು ಕೂಡ ಜಪ್ತಿಯ ವೇಳೆ ಬಿಇಒ ಕಚೇರಿಗೆ ಬಂದಿದ್ದರು.

ಕ್ಷೇತ್ರ ಶಿಕ್ಷಣಾಧಿಕಾರಿ ದೇವಿದಾಸ ಮೊಗೇರ ಈ ವೇಳೆ ಅವರ ಬಳಿ ಒಂದು ತಿಂಗಳ ಕಾಲಾವಕಾಶ ಕೇಳಿದರು.ನ್ಯಾಯಾ ಲಯದ ಆದೇಶಕ್ಕೆ ವಿರುದ್ಧವಾಗಿ ನಾವು ನಡೆದುಕೊಳ್ಳಲು ಸಾಧ್ಯವಿಲ್ಲ.ಜಪ್ತಿಯ ಆದೇಶದಂತೆ ನಮಗೆ ಸಿಗಬೇಕಾದ ಹಣ ನೀಡಬೇಕು. ಇದಕ್ಕೆ ನ್ಯಾಯಾಲಯದ ಆದೇಶದಂತೆ ಮುಂದುವರೆಯಲಿ ಎಂದು ಜಮಾತುಲ್ ಮುಸ್ಲಿಮಿನ್ ಅಧ್ಯಕ್ಷ ಸಾದಿಕ್ ಮಟ್ಟಾ ತಿಳಿಸಿದರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...