ಹಾಸನ -
ಬಿಇಒ ಕಚೇರಿ ಅಧೀಕ್ಷಕ ವೇಣುಗೋಪಾಲ್ ನಿಧನ ರಾದ ಘಟನೆ ಹಾಸನ ದಲ್ಲಿ ನಡೆದಿದೆ.ಹಾಸನ ಕ್ಷೇತ್ರ ಶಿಕ್ಷಣಾಧಿಕಾರಿ (ಬಿಇಒ) ಕಚೇರಿಯಲ್ಲಿ ಅಧೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಣುಗೋಪಾಲ್ (45) ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ನಗರದ ಸದಾಶಿವನಗರದಲ್ಲಿರುವ ನಿವಾಸದಲ್ಲಿ ಮುಂಜಾನೆ ಸುಮಾರು 5 ಗಂಟೆ ವೇಳೆಯಲ್ಲಿ ಮಲಗಿ ದ್ದಾಗಲೇ ಅವರಿಗೆ ಹೃದಯಾಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.ವೇಣುಗೋಪಾಲ್ ಅವರು ರಾಜ್ಯ ಸರಕಾರಿ ಎನ್ಪಿಎಸ್ ನೌಕರರ ಸಂಘದ ಹಾಸನ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸುತ್ತಿದ್ದರು ಅವರ ನಿಧನಕ್ಕೆ ಸಹೋದ್ಯೋ ಗಿಗಳು ಹಾಗೂ ಸರಕಾರಿ ನೌಕರರು ಶಿಕ್ಷಕ ಬಂಧು ಗಳು ಸೇರಿದಂತೆ ಹಲವರು ಕಂಬನಿ ಮಿಡಿದಿದ್ದಾರೆ.
ಸುದ್ದಿ ಸಂತೆ ನ್ಯೂಸ್ ಹಾಸನ.....