LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಇಪಿಎಫ್ ಪ್ರಾದೇಶಿಕ ಕಚೇರಿ ಸೊಸೈಟಿ ಚುನಾವಣೆ - ಸಂಘದ ಒಗ್ಗಟ್ಟಿನಿಂದ ಅವಿರೋಧವಾಗಿ ಆಯ್ಕೆಯಾದ್ರು ನಿರ್ದೇಶಕರ ಮಂಡಳಿ

ಹುಬ್ಬಳ್ಳಿ -

ಹುಬ್ಬಳ್ಳಿಯ ನವನಗರದಲ್ಲಿರುವ ಇಪಿಎಫ್ ಕೋ ಆಪರೇಟಿವ್ ಸೊಸೈಟಿಗೆ ಚುನಾವಣೆ ನಡೆಯಿತು. ಸೊಸೈಟಿಯ ನಿರ್ದೇಶಕರ ಸ್ಥಾನಗಳಿಗೆ ಸರ್ವಸದಸ್ಯರು ಸರ್ವಾನುಮತದಿಂದ ಅವಿರೋಧವಾಗಿ ಆಯ್ಕೆ ಮಾಡಲಾಯಿತು. 2020-25 ರ ಐದು ವರುಷಗಳ ಅವಧಿಗೆ ಚುನಾವಣೆ ಮಾಡಲಾಯಿತು. ಇಪಿಎಫ್ ಕೋ ಆಪರೇಟಿವ್ ಸೊಸೈಟಿ ಚುನಾವಣೆಯನ್ನು ಹುಬ್ಬಳ್ಳಿಯ ನವನಗರದ ಇಪಿಎಫ್ ಪ್ರಾದೇಶಿಕ ಕಚೇರಿಯಲ್ಲಿ ನಡೆಸಲಾಯಿತು.

ಮುಂಬರುವ ಅವಧಿಗೆ ಸಂಘದ ಎಲ್ಲಾ ನಿರ್ದೇಶಕರುಗಳನ್ನು ಸರ್ವ ಸದಸ್ಯರು ಸಭೆಯಲ್ಲಿ ಸರ್ವಾನುಮತದಿಂದ ಅವಿರೋಧವಾಗಿ ಆಯ್ಕೆ ಮಾಡಿದರು. ಕಾರ್ಯದರ್ಶಿ ಮತ್ತು ಖಜಾಂಚಿಯನ್ನು ನಾಮನಿರ್ದೇಶನ ಮಾಡಲು ಸೊಸೈಟಿ ನಿರ್ದೇಶಕರ ಮಂಡಳಿಯು ಸಭೆ ನಡೆಸಿತು.ಇನ್ನೂ ಗೌರವ ಕಾರ್ಯದರ್ಶಿಯಾಗಿ ನಾಮದೇವ ಬಡಿಗೇರ

ನಾಮದೇವ ಬಡಿಗೇರ

ಮತ್ತು ಖಜಾಂಚಿಯಾಗಿ ಶ್ರೀವಲ್ಲಭ ಜೋಶಿ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ ಎಂದು ಸೊಸೈಟಿಯ ಸಭೆಯಲ್ಲಿ ಅಧ್ಯಕ್ಷರಾದ ಜೆ. ಎ. ಮಂಜುನಾಥ್ ಘೋಷಿಸಿದರು.

ಶ್ರೀ ವಲ್ಲಭ ಜೋಶಿ

ಜೆ ಎ ಮಂಜುನಾಥ

ಉಪಾಧ್ಯಕ್ಷರಾದ ಪ್ರಶಾಂತ ಮಹೇಂದ್ರನವರ ಅವರು ನೂತನವಾಗಿ ಆಯ್ಕೆಯಾದ ಎಲ್ಲ ನಿರ್ದೇಶಕರುಗಳಿಗೆ ಅಭಿನಂದನೆ ಸಲ್ಲಿಸಿದರು.ಇದೇ ವೇಳೆ ಮಾತನಾಡಿ ಎಲ್ಲಾ ನಿರ್ದೇಶಕರ ಪರವಾಗಿ ಷೇರುದಾರರಿಗೆ ಉತ್ತಮ ಸೇವೆಯನ್ನು ನೀಡುವ ಭರವಸೆ ನೀಡಿದ್ದಾರೆ.

ಪ್ರಶಾಂತ ಮಹೇಂದ್ರನವರ

ಸೊಸೈಟಿಯ ಮಾಜಿ ಕಾರ್ಯದರ್ಶಿ ಕೆ.ವೆಂಕಟೇಶ ಅವರು ಸೊಸೈಟಿ ನಿರ್ದೇಶಕರ ಮಂಡಳಿಯ ಗೌರವ ಸಲಹೆಗಾರರಾಗಿ ನಾಮ ನಿರ್ದೇಶನಗೊಂಡಿದ್ದಾರೆ. ಸಭೆಯಲ್ಲಿ ಸಂಘದ ಎಲ್ಲ ನಿರ್ದೇಶಕರು ಭಾಗವಹಿಸಿದ್ದರು. ಒಟ್ಟಾರೆ ಐದು ವರುಷಗಳ ಸೊಸೈಟಿಗೆ ಇಲಾಖೆಯ ಎಲ್ಲಾ ನೌಕರರು ಅವಿರೋಧವಾಗಿ ಆಯ್ಕೆ ಮಾಡುವ ಮೂಲಕ ಒಗ್ಗಟ್ಟನ್ನು ತೋರಿಸಿದ್ರು.ಎಲ್ಲದಕ್ಕೂ ಚುನಾವಣೆ ಚುನಾವಣೆ ಎಂದುಕೊಂಡು ಹಣ ಸಮಯ ಗುಂಪುಗಾರಿಕೆ ಮಾಡಿಕೊಳ್ಳುವ ಇಂದಿನ ವ್ಯವಸ್ಥೆಯ ನಡುವೆ ಎಪಿಎಫ್ ನೌಕರರ ಒಗ್ಗಟ್ಟು ನಿಜಕ್ಕೂ ಇತರ ಇಲಾಖೆಗಳಿಗೆ ಮಾದರಿಯಾಗಿದ್ದು ನೂತನವಾಗಿ ಆಯ್ಕೆಯಾದ ಎಲ್ಲರಿಗೂ ಸುದ್ದಿ ಸಂತೆ ವೇಬ್ ನ್ಯೂಸ್ ಪರವಾಗಿ ಅಭಿನಂದನೆಗಳು ಹಾಗೇ ಉತ್ತಮವಾಗಿ ಕೆಲಸ ಮಾಡಿ ಎಲ್ಲರ ಹಿತ ಕಾಪಾಡಲಿ ಎಂಬುದು ನಮ್ಮ ಎಲ್ಲಾ ನೌಕರರ ಆಶಯ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....