LIVE TV LocalCrimeNationalInternationalPoliticsEducationTechnologyEntertainmentSportsFeature
State News

BRC ಅಮಾನತು - ಕರ್ತವ್ಯ ಲೋಪ ಹಿನ್ನಲೆ ಅಮಾನತು ಆದೇಶ.....

ಬೆಂಗಳೂರು  -

ರಾಜ್ಯದಲ್ಲಿ ಜಾತಿಗಣತಿಗೆ ಹಾಜರಾಗದ ಶಿಕ್ಷಕನಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಿದ್ದು, ಅಮಾನತು ಮಾಡಿ ಮಹತ್ವದ ಆದೇಶ ಹೊರಡಿಸಲಾಗಿದೆ.ರಂಗನಾಥ್ ಎಂ. ಕ್ಷೇತ್ರ ಸಮನ್ವಯಾಧಿಕಾರಿಗಳು ಬಿ.ಆರ್.ಸಿ ಕೇಂದ್ರ, ಹೊಸನಗರ ತಾಲ್ಲೂಕು, ಶಿವಮೊಗ್ಗ ಜಿಲ್ಲೆ ಇವರನ್ನು ಕರ್ತವ್ಯಲೋಪ ಹಿನ್ನೆಲೆಯಲ್ಲಿ ಸರ್ಕಾರಿ ಸೇವೆಯಿಂದ ಅಮಾನತ್ತು ಮಾಡಿ ಆದೇಶ ಹೊರಡಿಸಲಾಗಿದೆ.

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ನಡೆಸುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಕಾರ್ಯವು ಪ್ರಗತಿಯಲ್ಲಿರುತ್ತದೆ. ಹೊಸನಗರ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಹುದ್ದೆ ಖಾಲಿ ಇರುವುದರಿಂದ ಸದರಿ ಹುದ್ದೆಯಲ್ಲಿ ಶ್ರೀಮತಿ ಚೇತನ, ಮುಖ್ಯ ಶಿಕ್ಷಕರು ಪ್ರಭಾರದಲ್ಲಿ ಕಾರ್ಯನಿರ್ವ ಹಿಸುತ್ತಿರುತ್ತಾರೆ. ರಂಗನಾಥ್ ಎಂ. ಕ್ಷೇತ್ರ ಸಮನ್ವಯಾಧಿ ಕಾರಿಗಳು, ಬಿ.ಆರ್.ಸಿ ಕೇಂದ್ರ, ಹೊಸನಗರ ತಾಲ್ಲೂಕು, ಶಿವಮೊಗ್ಗ ಜಿಲ್ಲೆ ಇವರನ್ನು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಕಾರ್ಯಕ್ಕೆ ನೋಡಲ್ ಅಧಿಕಾರಿಯನ್ನಾಗಿ ಉಲ್ಲೇಖ (2)ರಂತೆ ನೇಮಿಸಲಾಗಿರುತ್ತದೆ.

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ನಡೆಸುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಕಾರ್ಯದಲ್ಲಿ ಗಳಿಗೆ ಮೇಲ್ವಿಚಾರಕರ ಹಾಗೂ ಗಣತಿದಾರರ ನೇಮಕ ಮಾಡುವ ಕಾರ್ಯ ವನ್ನು ರಂಗನಾಥ್ ಎಂ. ಕ್ಷೇತ್ರ ಸಮನ್ವಯಾಧಿಕಾರಿಗಳು ಇವರಿಗೆ ನಿರ್ವಹಿಸಲು ಸೂಚಿಸಿದ್ದರೂ ಸಹ ಮೇಲಾಧಿ ಕಾರಿಗಳ ಅಧಿಕೃತ ಪೂರ್ವಾನುಮತಿಯನ್ನು ಪಡೆಯದೇ ರಜೆ ಅರ್ಜಿಯನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾ ಲಯದ ಟಪಾಲು ವಿಭಾಗಕ್ಕೆ ನೀಡಿ ತೆರಳಿದ್ದು, ದೂರ ವಾಣಿ ಕರೆಗೂ ಸ್ಪಂದಿಸದೇ ಉದ್ದಟತನದಿಂದ ವರ್ತಿಸಿ ರುವುದರಿಂದ ಸದರಿಯವರಿಗೆ ತಹಶೀಲ್ದಾರ್, ಹೊಸನಗರ ತಾಲ್ಲೂಕು ಇವರು ಉಲ್ಲೇಖ(3)ರಂತೆ ಕಾರಣ ಕೇಳಿ ತಿಳುವಳಿಕೆಯನ್ನು ಜಾರಿಗೊಳಿಸಿರುತ್ತಾರೆ.

ಸದರಿ ಸಮೀಕ್ಷೆಗೆ ಗಣತಿದಾರರಾಗಿ ಶಿಕ್ಷಕರುಗಳನ್ನು ನೇಮಕ ಮಾಡಲು ಬಾಕಿ ಇದ್ದು ರಂಗನಾಥ್ ಎಂ. ಕ್ಷೇತ್ರ ಸಮನ್ವಯಾಧಿಕಾರಿಗಳು ಇವರು ಅನಧಿಕೃತವಾಗಿ ಗೈರು ಹಾಜರಾಗಿರುವುದರಿಂದ ದಲ್ಲಿ ಶಿಕ್ಷಕರುಗಳನ್ನು ಗಣತಿದಾರರಾಗಿ ನೇಮಕ ಮಾಡಲು ಸಾಧ್ಯವಾಗಿರು ವುದಿಲ್ಲ.

ಮೇಲ್ವಿಚಾರಕರ ಹಾಗೂ ಗಣತಿದಾರರ ನೇಮಕ ಮಾಡುವಲ್ಲಿ ಹಲವು ಗೊಂದಲಗಳಾಗಿದ್ದು, ಸದರಿ ನೌಕರರು ಮೇಲಾಧಿಕಾರಿಗಳ ದೂರವಾಣಿ ಕರೆಗೂ ಸ್ಪಂದಿಸದೇ ಸರ್ಕಾರದ ಮಹತ್ವಕಾಂಕ್ಷಿ ಯೋಜನೆ ಯಾದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಕಾರ್ಯದಲ್ಲಿ ಹೊಸನಗರ ತಾಲ್ಲೂಕಿನ ಪ್ರಗತಿ ಕುಂಠಿತವಾಗಲು ನೇರವಾಗಿ ಕಾರಣರಾಗಿರುತ್ತಾರೆ

ಮತ್ತು ಕಾರಣಕೇಳಿ ತಿಳುವಳಿಕೆಗೆ 24 ಗಂಟೆಯೊಳಗೆ ಲಿಖಿತ ಸಮಜಾಯಿಷಿ ಸಲ್ಲಿಸುವಂತೆ ಸೂಚಿಸಿದ್ದರೂ ಸಹ ಸದರಿಯವರು ಯಾವುದೇ ಉತ್ತರವನ್ನು ಸಲ್ಲಿಸಿರುವುದಿಲ್ಲ. ಆದ್ದರಿಂದ ಸದರಿ ನೌಕರರ ವಿರುದ್ಧ ನಿಯಮಾನುಸಾರ ಶಿಸ್ತು ಕ್ರಮ ಕೈಗೊಳ್ಳುವಂತೆ ತಹಶೀಲ್ದಾರ್, ಹೊಸನಗರ ತಾಲ್ಲೂಕು ಇವರು ಉಲ್ಲೇಖ (4)ರಂತೆ ಪ್ರಸ್ತಾವನೆಯನ್ನು ಸಲ್ಲಿಸಿರುತ್ತಾರೆ.

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಕಾರ್ಯಗಳಿಗೆ ತೊಂದರೆಯನ್ನುಂಟು ಮಾಡಿರುವುದು ಮತ್ತು ಸರ್ಕಾರಿ ಸೇವೆಯಲ್ಲಿ ಉದ್ದಟತನದಿಂದ ವರ್ತಿಸಿ ಸರ್ಕಾರಿ ಸೇವೆಯಲ್ಲಿ ನಿರ್ಲಕ್ಷ್ಯತನ ತೋರಿರುವುದು. ಅಲ್ಲದೇ ಮೇಲಾಧಿಕಾರಿಯವರ ಆದೇಶವನ್ನು ನಿರ್ವಹಿಸದೇ ಬೇಜವಬ್ದಾರಿತನ ತೋರಿಸಿರುವ ಆರೋಪದ ಹಿನ್ನೆಲೆ ಯಲ್ಲಿ ಅಮಾನತು ಮಾಡಲಾಗಿದೆ

ಸುದ್ದಿ ಸಂತೆ ನ್ಯೂಸ್ ಬೆಂಗಳೂರು.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...