LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಎರಡು ದಿನ ಸಿಬಿಐ ವಶಕ್ಕೆ - ಚಂದ್ರಶೇಖರ ಇಂಡಿ

ಧಾರವಾಡ - ಯೋಗಿಶಗೌಡ ಕೊಲೆ ಪ್ರಕರಣದಲ್ಲಿ ಬಂಧನವಾಗಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಸೋದರ ಮಾವ ಚಂದ್ರಶೇಖರ ಇಂಡಿ ಅವರನ್ನು ಎರಡು ದಿನಗಳ ಸಿಬಿಐ ಕಸ್ಟಡಿಗೆ ನೀಡಲಾಗಿದೆ. ಸಿಬಿಐನಿಂದ ಬಂಧನವಾಗಿ ನಿನ್ನೆ ಅಷ್ಟೇ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದ ಚಂದ್ರಶೇಖರ ಇಂಡಿ ಅವರನ್ನು ಸಿಬಿಐ ವಶಕ್ಕೆ ನ್ಯಾಯಾಲಯ ನೀಡಿದೆ. ಎರಡು ದಿನ ಸಿಬಿಐ ಕಸ್ಟಡಿಗೆ ನೀಡಿ ಧಾರವಾಡ ಮೂರನೇ ಹೆಚ್ಚವರಿ ಸೆಷನ್ಸ್ ನ್ಯಾಯಲಯ ಆದೇಶ ಹೊರಡಿಸಿದೆ.

ಕಳೆದ ಡಿಸೆಂಬರ್ 13 ರಂದು ಸಿಬಿಐ ಅಧಿಕಾರಿಗಳು ಅಕ್ರಮ ಶಸ್ತ್ರಾಸ್ತ್ರ ಸಾಗಟ ಆರೋಪದ ಮೇಲೆ ಚಂದ್ರಶೇಖರ ಇಂಡಿ ಅವರನ್ನು ವಿಜಯಪುರದಲ್ಲಿ ಬಂಧನ ಮಾಡಿದ್ದರು. ಬಳಿಕ ಅಂದೇ ತಡ ರಾತ್ರಿ ಅವರನ್ನು ಧಾರವಾಡ ಉಪನಗರ ಠಾಣೆಗೆ ಕರೆದುಕೊಂಡು ಬಂದಿದ್ದರು. ಅಲ್ಲದೆ ಡಿಸೆಂಬರ್ 14 ರಂದು ಹಲವು ಗಂಟೆಗಳ‌ ಕಾಲ ಸಿಬಿಐ ಅಧಿಕಾರಿಗಳು ಚಂದ್ರಶೇಖರ ಇಂಡಿವರನ್ನು ವಿಚಾರಣೆ ನಡೆಸಿದರು. ಬಳಿಕ ಮಧ್ಯಾಹ್ನದ ನಂತರ ಇವರನ್ನು ಧಾರವಾಡ ಜಿಲ್ಲಾ ನ್ಯಾಯಾಲಯ ಸಂಕಿರ್ಣ ಆವರದಲ್ಲಿರುವ ಮೂರನೇ ಹೆಚ್ಚುವರಿ ಸೆಷನ್ ನ್ಯಾಯಾಲಯಕ್ಕೆ ಹಾಜರು ಮಾಡಲಾಗಿತ್ತು. ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿದ ನ್ಯಾಯಾಧೀಶರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಹೋರಡಿಸಿದರು.

ಒಂದು ರಾತ್ರಿ ಕಳೆದು ಸಂಜೆಯಾಗುತ್ತಲೆ ಮತ್ತೆ ಇಂದು ಇಂಡಿಯವರನ್ನು, ಸಿಬಿಐ ಅಧಿಕಾರಿಗಳು ಹೆಚ್ಚಿನ ವಿಚಾರಣೆಗಾಗಿ ವಶಕ್ಕೆ ತೆಗೆದುಕೊಂಡರು. ಕಸ್ಟಡಿ ಕೇಳಿರುವ ಕುರಿತು ವಿಚಾರಣೆ ಮಾಡಿದ ನ್ಯಾಯಾಧೀಶರು ಎರಡು ದಿನಗಳ ಕಾಲ ಸಿಬಿಐ ಕಸ್ಟಡಿಗೆ ನೀಡಿ ಆದೇಶ ಹೋರಡಿಸಿದ್ದಾರೆ. ಡಿಸೆಂಬರ್ 17 ಸಂಜೆ 5 ಗಂಟೆಯ ಒಳಗೆ ಇಂಡಿಯವರನ್ನು ಮತ್ತೆ ನ್ಯಾಯಾಲಯಕ್ಕೆ ಹಾಜರು ಪಡಿಸಲು ಸಿಬಿಐ ಅಧಿಕಾರಿಗಳಿಗೆ ನ್ಯಾಯಾಧೀಶರು ಸೂಚನೆ ನೀಡಿದ್ದಾರೆ. ಈಗಾಗಲೇ ಚಂದ್ರಶೇಖರ ಇಂಡಿಯವರನ್ನು ಈ ಹಿಂದೆ ಹಲವು ಬಾರಿ ಸಿಬಿಐ ಅಧಿಕಾರಿಗಳು ವಿಚಾರಣೆ ನಡೆಸಿದ್ದು. ಬಂಧನದ ನಂತರ ಇದೇ ಮೊದಲ ಬಾರಿಗೆ ಕಸ್ಟಡಿಗೆ ಸಿಬಿಐ ಅಧಿಕಾರಿಗಳು ತೆಗೆದುಕೊಂಡಿದ್ದಾರೆ. ಈಗ ಮತ್ತೆ ಎರಡು ದಿನ ಸಿಬಿಐ ತಂಡ ಚಂದ್ರಶೇಖರ ಇಂಡಿಯವರಿಗೆ ಡ್ರಿಲ್ ಮಾಡಲಿದ್ದು, ಪ್ರಮುಖವಾಗಿ ಅಕ್ರಮ ಶಸ್ತ್ರಾಸ್ತ್ರಗಳು ಕುರಿತು ವಿಚಾರಣೆ ನಡೆಸಲ್ಲಿದ್ದಾರೆ ಎಂದು ಹೇಳಲಾಗುತ್ತಿದೆ. ಅಕ್ರಮ ಶಸ್ತ್ರಾಸ್ತ್ರ ಗಳನ್ನು ಯಾವ ಉದೇಶದಿಂದ ಸಾಗಾಟ ಮಾಡಿದ್ದೀರಿ…? ಇದರ ಹಿಂದೆ ಇರುವ ಉದ್ದೇಶವೇನು..? ಯಾರು ಯಾವಾಗ ನಿಮ್ಮಗೆ ಇವುಗಳನ್ನು ತಲುಪಿಸಿದ್ದು…? ನೀವು ಯಾವ ರೀತಿಯಾಗಿ ಇವುಗಳನ್ನು ಧಾರವಾಡಕ್ಕೆ ತಲುಪಿಸಿದ್ದು..? ಯಾರ ಕೈಗೆ ಇವುಗಳನ್ನು ನೀಡಿದ್ದೀರಿ ..? ಎಂಬ ಪ್ರಶ್ನೆಗಳನ್ನು ಸಿಬಿಐ ಅಧಿಕಾರಿಗಳು ಮಾಜಿ ಸಚಿವ ಸೋದರ ಮಾವನಿಗೆ ಕೇಳಬಹುದು ಎನ್ನಲಾಗುತ್ತಿದೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....