LIVE TV LocalCrimeNationalInternationalPoliticsEducationTechnologyEntertainmentSportsFeature
Local News

BEO ನೇತೃತ್ವದಲ್ಲಿ ಮಕ್ಕಳ ಮನೆ ಮನೆಗೆ ತೆರಳಿ ಮಾಹಿತಿ.....

ಸವದತ್ತಿ -

ಶಿಕ್ಷಣ ನಿಂತ ನೀರಲ್ಲ ಅದು ಹರಿಯುವ ಪ್ರವಾಹ ವಿದ್ದಂತೆ ಕೋವಿಡ್ ಸಮಯದಲ್ಲಿ ಮುಖಾಮುಖಿ ಶಿಕ್ಷಣಕ್ಕೆ ತೊಂದರೆಯಾಗಿದೆ ಆದರೂ ಕೂಡ ಶಿಕ್ಷಕರು ಮಕ್ಕಳ ಮೊಬೈಲ್ ಸಂಖ್ಯೆಗಳನ್ನು ಪಡೆದು ಅವರ ಜೊತೆಯಲ್ಲಿ ಮಾತನಾಡುತ್ತ ನೀಡಬೇಕಾದ ಮಾಹಿತಿಗಳನ್ನು ಹೇಳುತ್ತಿರುವರು ಅಷ್ಟೇ ಅಲ್ಲ ದೂರದರ್ಶನದಲ್ಲಿ ಚಂದನವಾಹಿನಿಯಲ್ಲಿ ಪಾಠಗಳು ಪ್ರಸಾರವಾಗುತ್ತಿವೆ

ಅಭ್ಯಾಸದ ಹಾಳೆ ಗಳನ್ನು ಪಾಲಕರ ಮೂಲಕ ತಲುಪಿಸಿ ಮನೆಯಲ್ಲಿ ಮಕ್ಕಳಿಗೆ ಕಲಿಕಾ ಪ್ರಕ್ರಿಯೆ ಸುಗಮವಾಗಿ ಜರುಗುವಂತೆ ಕ್ರಮ ಕೈಗೊಳ್ಳುತ್ತಿರುವ ಇಂದಿನ ಸಂದರ್ಭದಲ್ಲಿ ಸವದತ್ತಿ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಅರ್ಜುನ್ ಕಂಬೋಜಿ ಕರೀಕಟ್ಟಿ ಗ್ರಾಮದ ಮಕ್ಕಳ ಮನೆಗಳಿಗೆ ತೆರಳಿ ಕೋವಿಡ್ ನಿಯಮಗಳನ್ನು ತಾವೂ ಪಾಲಿಸುವ ಜೊತೆಗೆ ಮಕ್ಕಳು ಪಾಲಕರು ಪಾಲಿಸುವಂತೆ ತಿಳಿಸುವ ಜೊತೆಗೆ ಮಕ್ಕಳಿಗೆ ಪ್ರೋತ್ಸಾಹ ನೀಡುತ್ತಿರುವ ಚಟುವಟಿಕೆಗಳು ಜರುಗುತ್ತಿವೆ.

ಇತ್ತೀಚಿಗೆ ಕರಿಕಟ್ಟಿ ಗ್ರಾಮದಲ್ಲಿ ಹಲವು ಮನೆಗಳಿಗೆ ತೆರಳಿ ಮಕ್ಕಳಿಗೆ ಪೋಷಕರಿಗೆ ಶಾಲೆಗಳಲ್ಲಿ ಎಲ್ಲ ಶಿಕ್ಷಕರಿಗೆ ಕಲಿಕಾ ಪ್ರಕ್ರಿಯೆ ಕುರಿತು ಸಂವಾದ ನಡೆಸಿದರು ಮಕ್ಕಳು ಈ ಸಂದರ್ಭದಲ್ಲಿ ತಾವು ತಮ್ಮ ಶಿಕ್ಷಕರು ನೀಡಿದ ಮಾಹಿತಿ ಅಭ್ಯಾಸದ ಹಾಳೆಗಳನ್ನು ತೋರಿಸಿ ಕಲಿಕಾ ಪ್ರಕ್ರಿಯೆಯಲ್ಲಿ ತೊಡಗಿರುವುದನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ತೋರಿಸಿದರು

ಇದರಿಂದ ಸಂತಸಗೊಂಡ ಕ್ಷೇತ್ರಶಿಕ್ಷಣಾಧಿಕಾರಿಗಳು ಮಕ್ಕಳನ್ನು ಅಭಿನಂದಿಸುತ್ತ ಚೆನ್ನಾಗಿ ಓದು ಬರಹ ಚಟುವಟಿಕೆಗಳಲ್ಲಿ ತೊಡಗುವಂತೆ ಜೊತೆಗೆ ಶಾರೀರಿಕ ಆರೋಗ್ಯವನ್ನು ಕಾಪಾಡಿಕೊಂಡು ಕೋವಿಡ್ ರೋಗದಿಂದ ರಕ್ಷಿಸುವಂತೆ ಕೈ ಕಾಲು ಗಳನ್ನು ತೊಳೆದುಕೊಂಡು ಸ್ವಚ್ಛತೆ ಕಾಯ್ದು ಕೊಳ್ಳಲು ಸುರಕ್ಷಿತ ಅಂತರವನ್ನು ಪಾಲಿಸುವಂತೆ ತಿಳಿಸಿದರು

ದೈಹಿಕ ಶಿಕ್ಷಣಾಧಿಕಾರಿ ವೈ.ಎಂ.ಸಿಂಧೆ ಈ ಸಂದರ್ಭ ದಲ್ಲಿ ಪರಿಸರ ಸ್ವಚ್ಛತೆ ಕುರಿತು ಪಾಲಕರಿಗೆ ವಿದ್ಯಾರ್ಥಿ ಗಳಿಗೆ ತಿಳಿಸಿದರು

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....