LIVE TV LocalCrimeNationalInternationalPoliticsEducationTechnologyEntertainmentSportsFeature
State News

'ಚಿನ್ನಮ್ಮ' ಇಂದೇ ಬಿಡುಗಡೆ - ನಾಲ್ಕು ವರ್ಷಗಳ ನಂತರ ಬಿಡುಗಡೆ

ಬೆಂಗಳೂರು -

ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ನಾಲ್ಕು ವರ್ಷಗಳ ಕಾಲ ಜೈಲು ಶಿಕ್ಷೆ ಪೂರ್ಣಗೊಳಿಸಿರುವ ತಮಿಳು ನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಆಪ್ತೆ ಶಶಿಕಲಾ ಇಂದು ಜೈಲಿನಿಂದ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ.

ಕೋವಿಡ್-19 ಸೋಂಕಿಗೆ ತುತ್ತಾಗಿರುವ ಶಶಿಕಲಾ ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿ ದ್ದಾರೆ. ನ್ಯಾಯಾಂಗ ಬಂಧನದಿಂದ ಬಿಡುಗಡೆಗಾಗಿ ಆಸ್ಪತ್ರೆಯಲ್ಲಿ ಅವರ ಸಹಿಯನ್ನು ಜೈಲು ಅಧಿಕಾರಿ ಗಳು ಔಪಚಾರಿಕವಾಗಿ ಪಡೆಯಲಿದ್ದಾರೆ ಎಂದು ಮೂಲಗಳು ಹೇಳಿವೆ.

ಸೋಂಕಿನ ಬಗ್ಗೆ ತಿಳಿಯಲು ವಿಕ್ಟೋರಿಯಾ ಆಸ್ಪತ್ರೆ ವೈದ್ಯರು ಇಂದು ಶಶಿಕಲಾ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆ ನಡೆಸಲಿದ್ದಾರೆ. ಜನವರಿ 30 ರಂದು ಮತ್ತೊಂದು ಪರೀಕ್ಷೆ ನಡೆಯಲಿದೆ. ಎರಡೂ ಪರೀಕ್ಷೆಯಲ್ಲೂ ನೆಗೆಟಿವ್ ವರದಿ ಬಂದರೆ ಆಕೆ ಯನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗು ತ್ತದೆ.ಜೈಲಿನಲ್ಲಿ ಸೋಂಕು ತಗುಲಿರುವ ಬಗ್ಗೆ ಶಶಿಕಲಾ ಕಳವಳ ವ್ಯಕ್ತಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ರಾಜಕೀಯ ಎದುರಾಳಿ ಇರುವ ಪ್ರಭಾವಿ ನಾಯಕಿಯಾಗಿರುವುದರಿಂದ ಸರ್ಕಾರ ಶಶಿಕಲಾಗೆ ಝಡ್ ಪ್ಲಸ್ ಭದ್ರತೆ ನೀಡುವಂತೆ ಆಕೆಯ ಪರ ವಕೀಲರು ಕೇಳಿದ್ದಾರೆ. ಶಶಿಕಲಾ ಆಸ್ಪತ್ರೆಗೆ ದಾಖಲಾಗುವ ಮುನ್ನ ಹಾಗೂ ದಾಖಲಾದ ನಂತರ ನಡೆದ ಘಟನೆಗಳ ಬಗ್ಗೆ ಅವರು ಪ್ರಶ್ನಿಸಿದ್ದಾರೆ.

ಶಶಿಕಲಾ ಅವರನ್ನು ಅಪಾರ ಬೆಂಬಲಿಗರೊಂದಿಗೆ ಬೆಂಗಳೂರಿನಿಂದ ಚೆನ್ನೈಗೆ ಕರೆದುಕೊಂಡು ಹೋಗಲು ಅವರ ಸಂಬಂಧಿ ಹಾಗೂ ಸ್ವತಂತ್ರ ಶಾಸಕ ಟಿಟಿವಿ ದಿನಕರನ್ ನೇತೃತ್ವದಲ್ಲಿನ ಎಎಂಕೆ ಪಕ್ಷದ ಕಾರ್ಯಕರ್ತರು ಹಾಗೂ ಅವರ ಸಂಬಂಧಿಕರನ್ನೊಳಗೊಂಡಂತೆ ಸುಮಾರು 1 ಸಾವಿರ ಜನರು ಬರಲಿದ್ದಾರೆ ಎಂದು ಮೂಲಗಳು ತಿಳಿಸಿದ್ದು ಶಶಿಕಲಾ ಅವರು ಇಂದೇ ಬಿಡುಗಡೆಯಾಗಲಿದ್ದಾರೆನಾ ಅಥವಾ ಆಸ್ಪತ್ರೆಯಲ್ಲಿ ಇನ್ನೂ ಇರಲಿದ್ದಾರೆನಾ ಎಂಬುದನ್ನು ಕಾದು ನೋಡಬೇಕು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸಿಗಲಿದೆ ಸ್ಥಾನ CM ಭರವಸೆ - ಸಚಿವ ಸ್ಥಾನ ನಿರೀಕ್ಷೆ ಯಲ್ಲಿದ್ದ ಮಹಿಳೆಯರಿಗೆ ಗುಡ್ ನ್ಯೂಸ್ ನೀಡಿದ ನಾಡ ದೊರೆ.....ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....