LIVE TV LocalCrimeNationalInternationalPoliticsEducationTechnologyEntertainmentSportsFeature
Sports News

ಸರ್ಕಾರಿ ಶಾಲೆಗಳಿಗೆ ಮೂಲಭೂತ ಸೌಕರ್ಯ ಒದಗಿಸಿ - ಹೊರಬಿತ್ತು ಸುತ್ತೋಲೆ....

ಬೆಂಗಳೂರು -

ಗ್ರಾಮ ಪಂಚಾಯಿತಿಗಳು ಸಾರ್ವಜನಿಕ ಕಟ್ಟಡ ಮತ್ತು ಆಸ್ತಿ ದುರಸ್ತಿ ನಿರ್ವಹಣೆ ಜೊತೆಗೆ ಶಾಲೆಗಳಲ್ಲಿ ಮೂಲ ಸೌಲಭ್ಯ ಒದಗಿಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸೂಚಿಸಿದೆ.ಹೌದು ಈ ಸಂಬಂಧ ಸುತ್ತೋಲೆ ಹೊರಡಿಸಿರುವ ಇಲಾಖೆಯು 14 ಮತ್ತು 15ನೆ ಹಣಕಾಸು ಆಯೋಗದ ಅನುದಾನವನ್ನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಶಾಲೆಗಳಲ್ಲಿ ಮೂಲ ಸೌಕರ್ಯ ಒದಗಿಸುವಂತೆ ಸೂಚಿಸಲಾಗಿದೆ

ಶಾಲಾ ಕಟ್ಟಡಗಳನ್ನು ನಿರ್ವಹಿಸುವುದು ಶುದ್ಧ ಕುಡಿಯುವ ನೀರು ಒದಗಿಸುವುದು ಬಾಲಕ-ಬಾಲಕಿಯರಿಗೆ ಶೌಚಾಲಯ ಒದಗಿಸುವುದು,ವಿಶೇಷ ಚೇತನ ಸ್ನೇಹಿ ಶೌಚಾಲಯ ನಿರ್ಮಾಣ ಸ್ಯಾನಿಟರಿ ಪ್ಯಾಡ್ ಮಾರಾಟ ಯಂತ್ರಗಳನ್ನು ಒದಗಿಸುವುದು ಬಿಸಿಯೂಟದ ಯೋಜನೆಗೆ ಅಡುಗೆ ಕೋಣೆ ನಿರ್ಮಾಣ ಮಾಡಲು ಅನುದಾನ ಬಳಸಿಕೊಳ್ಳುವಂತೆ ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಕ್ರಿಯಾತ್ಮಕ ವಿದ್ಯುತ್ ಪೂರೈಕೆ ವ್ಯವಸ್ಥೆ, ಭಾರತ್ ನೆಟ್ ವೈ-ಫೈ ಸೌಲಭ್ಯಗಳು‌ ಕೊಠಡಿಗಳ ಕಿಟಕಿ-ಬಾಗಿಲುಗಳ ದುರಸ್ತಿ ಆಟದ ಮೈದಾನ ನಿರ್ಮಾಣ ಮಳೆ ನೀರು ಹಿಡಿಯಿರಿ ಎಂಬ ಆಂದೋಲನದಂತೆ ಶಾಲಾ ಕಟ್ಟಡಗಳಲ್ಲಿ ಮಳೆ ನೀರು ಸುಗ್ಗಿ ವಿನ್ಯಾಸಗಳನ್ನು ನಿರ್ಮಿಸಲು ಸೂಚಿಸಲಾಗಿದೆ.

ಗ್ರಾಮ ಪಂಚಾಯತಿ ಗಳೊಂದಿಗೆ ಶಾಲಾ ಉಸ್ತುವಾರಿ ಸಮಿತಿಯು ಕೈ ಜೋಡಿಸಿ ಗ್ರಾಮ ಶಿಕ್ಷಣ ಸಮಿತಿ ಸಹಯೋಗದೊಂದಿಗೆ ಮಧ್ಯದಲ್ಲಿ ಶಾಲೆ ಬಿಡುವ ಮಕ್ಕಳ ಪ್ರಮಾಣವನ್ನು ಶೂನ್ಯಕ್ಕಿಳಿಸುವುದು ತರಗತಿಯಲ್ಲಿ ಶೇ.100 ರಷ್ಟು ವಿದ್ಯಾರ್ಥಿಗಳ ಹಾಜರಾತಿಗೆ ಒತ್ತು ಕೊಡುವುದು‌ ಸಾಕ್ಷರತೆಗೆ ಆದ್ಯತೆ ನೀಡುವುದು ಗ್ರಾಪಂ ಶಿಕ್ಷಣ ಕಾರ್ಯಪಡೆ ಮೂಲಕ ಬಿಸಿಯೂಟ ನೀಡಲು ಬೆಂಬಲ ವ್ಯಕ್ತಪಡಿಸುವುದು‌ ಎಲ್ಲ ವಿದ್ಯಾರ್ಥಿಗಳಿಗೆ ವಾರ್ಷಿಕ ಆರೋಗ್ಯ ತಪಾಸಣೆಯನ್ನು ಆರೋಗ್ಯ ಇಲಾಖೆ ಸಹಕಾರದೊಂದಿಗೆ ಆಯೋಜಿಸುವಂತೆ ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಹಣಕಾಸು ಆಯೋಗದ ಅನುದಾನವನ್ನು ಗ್ರಾಮ ಪಂಚಾಯತಗಳು ಬಳಸಿಕೊಂಡು ಪಂಚಾಯಿತಿ ಕಟ್ಟಡ ಸಾರ್ವಜನಿಕ ಕಟ್ಟಡ ಮತ್ತು ಆಸ್ತಿಗಳ ದುರಸ್ತಿ ಕಾರ್ಯ ಕೈಗೊಳ್ಳಬಹುದಾಗಿದೆ ಎಂದು ಸೂಚಿಸಲಾಗಿದೆ

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...