LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಪಾಲಿಕೆ ಚುನಾವಣೆ – ಸಂಜೆ ಹೊರ ಬೀಳಲಿದೆ ಭವಿಷ್ಯ

ಬೆಂಗಳೂರು -

ಮಹಾನಗರ ಪಾಲಿಕೆಗೆ ಚುನಾವಣೆ ನಡೆಸುವ ಸಂಬಂಧ ಹೈಕೋರ್ಟ್‌ನಲ್ಲಿ ವಿಚಾರಣೆ ಅಂತಿಮವಾಗಿದೆ. ಬೆಂಗಳೂರಿನ ಹೈಕೊರ್ಟ್ ನಲ್ಲಿ ಈಗಾಗಲೇ ನಡೆದ ವಿಚಾರಣೆಯಲ್ಲಿ ರಾಜ್ಯ ಸರ್ಕಾರ ,ಚುನಾವಣಾ ಆಯೋಗ,ಅರ್ಜಿದಾರರು ಹೀಗೆ ಮೂವರ ಪರವಾಗಿ ನ್ಯಾಯವಾದಿಗಳಿಂದ ನ್ಯಾಯಾಧೀಶರು ವಾದ ಪ್ರತಿವಾದವನ್ನು ಆಲಿಸಿದ್ರು. ಈ ಹಿಂದೆ ಅಂದರೆ ಶುಕ್ರವಾರ ವಿಚಾರಣೆ ಮಾಡಿದ ವಿಭಾಗೀಯ ಪೀಠದ ನ್ಯಾಯಾಧೀಶರು ಇಂದು ಸಂಜೆ ಆದೇಶವನ್ನು ಪ್ರಕಟಿಸಲಿದ್ದಾರೆ.

ಈಗಾಗಲೇ ವಿಭಾಗೀಯ ಪೀಠದಲ್ಲಿ ವಿಚಾರಣೆ ಮಾಡಿದ ನ್ಯಾಯಮೂರ್ತಿಗಳು ಮತ್ತೆ ಚುನಾವಣಾ ಆಯೋಗ ಮತ್ತು ರಾಜ್ಯ ಸರ್ಕಾರದ ಪರ ವಕೀಲರಿಂದ ವಾದವನ್ನು ಆಲಿಸಿದ್ರು. ಅರ್ಜಿಯನ್ನು ವಿಚಾರಣೆಗೆ ಮುಂದೂಡಿದ್ದರು. ಮತ್ತೆ ಅರ್ಜಿಯನ್ನು ವಿಚಾರಣೆ ಮಾಡಿ ವಿಭಾಗೀಯ ಪೀಠದ ನ್ಯಾಯಮೂರ್ತಿಗಳು ವಾದ ಪ್ರತಿವಾದವನ್ನು ಆಲಿಸಿ ಇವತ್ತು ಆದೇಶವನ್ನು ಕಾಯ್ದಿರಿಸಿದ್ರು. ಈಗಾಗಲೇ ವಾದ ಪ್ರತಿವಾದವನ್ನು ಆಲಿಸಿರುವ ನ್ಯಾಯಮೂರ್ತಿಗಳು ಬಹುತೇಕವಾಗಿ ಇಂದೇ ಸಂಜೆ ಅಂತಿಮ ತೀರ್ಪನ್ನು ಪ್ರಕಟಿಸಲಿದ್ದಾರೆ .

ಇಂದು ನ್ಯಾಯಮೂರ್ತಿಗಳು ಈ ಒಂದು ಆದೇಶವನ್ನು ಸಂಜೆ ನಾಲ್ಕು ಘಂಟೆಗೆ ಆದೇಶವನ್ನು ನೀಡಲಿದ್ದಾರೆ. ಚುನಾವಣಾ ಆಯೋಗದ ಪರವಾಗಿ ಹಾಜರಾದ ನ್ಯಾಯವಾದಿಗಳು 82 ವಾರ್ಡ ಗಳಿಗೆ ಚುನಾವಣೆ ಮಾಡೋಣಾ,ಬೇರೆ ಮಾಡೋದಾದ್ರೆ ಮತ್ತೆ ಮೀಸಲಾತಿ ಮಾಡಿದರೆ ತುಂಬಾ ತಡವಾಗುತ್ತದೆ ಅಲ್ಲದೇ ಇದರೊಂದಿಗೆ ಮತ್ತೊಂದು ಸಮಸ್ಯೆಯಾಗುತ್ತದೆ ಎಂದಿದ್ದಾರೆ. ಅಲ್ಲದೇ ಈಗಾಗಲೇ ತಡವಾಗಿದ್ದು ಮತ್ತೆ ವಿಳಂಬವಾಗುತ್ತದೆ ಎಂದು ಹೇಳಿದರು. ಇನ್ನೂ ರಾಜ್ಯ ಸರ್ಕಾರದ ಪರವಾಗಿ ಎಜಿ ಫಣೀಂದ್ರ ಅವರು ಹಾಜರಾಗಿದ್ದರು.ಇನ್ನೂ ಇತ್ತ ಚುನಾವಣೆ ವಿಳಂಬ ಕುರಿತಂತೆ ಹುಬ್ಬಳ್ಳಿಯ ಕಾಂಗ್ರೇಸ್ ಪಕ್ಷದ ಮುಖಂಡ ನಾಗರಾಜ ಗೌರಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಇವರ ಪರವಾಗಿ ಎಸ್ ಪಿ ಶಂಕರ್ ನ್ಯಾಯವಾದಿಗಳು ಹಾಜರಾಗಿ ವಾದವನ್ನು ಮಂಡಿಸಿದ್ರು.ಒಟ್ಟಾರೆ ಈಗಾಗಲೇ ಮೂವರು ನ್ಯಾಯವಾದಿಗಳಿಂದ ವಾದ ಪ್ರತಿವಾದವನ್ನು ಆಲಿಸಿರುವ ವಿಭಾಗೀಯ ಪೀಠದ ನ್ಯಾಯಮೂರ್ತಿಗಳು ಇಂದು ಚುನಾವಣೆ ಮಾಡುವ ಕುರಿತಂತೆ ಗ್ರೀನ್ ಸಿಗ್ನಲ್ ಅಂತಿಮ ತೀರ್ಪನ್ನು ಸಂಜೆ ಪ್ರಕಟ ಮಾಡಲಿದ್ದಾರೆ.ಇನ್ನೂ ನ್ಯಾಯಾಲಯದ ಆದೇಶದ ಯಾವಾಗ ಎನ್ನುತ್ತಾ ಹುಬ್ಬಳ್ಳಿ ಧಾರವಾಡ ಜನತೆ ಕುತೂಹಲದಿಂದ ಕಾಯತಾ ಇದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....