ಬೆಂಗಳೂರು -
ರಾಜ್ಯ ಸರ್ಕಾರಿ ನೌಕರರಿಗೆ ಶಿಕ್ಷಕರ ದಿನಾಚರಣೆಯ ಶುಭ ಸಂದರ್ಭದಲ್ಲಿ ಶುಭ ಸುದ್ದಿಯೊಂದನ್ನು ರಾಜ್ಯದ ಉಪ ಮುಖ್ಯಮಂತ್ರಿ ಪರಮೇಶ್ವರ ನೀಡಿದ್ದಾರೆ ಹೌದು ಬಹು ದಿನಗಳಿಂದ ರಾಜ್ಯದ ಸಮಸ್ತ ಸರ್ಕಾರಿ ನೌಕರ ರು ಕಾಯುತ್ತಿದ್ದ ಮತ್ತು ಬಹು ಬೇಡಿಕೆಯಾಗಿದ್ದ ಹಳೆ ಪಿಂಚಣಿ ಯೋಜನೆ ಜಾರಿಗೆ ಬರಲಿದೆ ಇದನ್ನು ಉಪ ಮುಖ್ಯಮಂತ್ರಿ ಪರಮೇಶ್ವರಹಂಚಿಕೊಂಡಿದ್ದಾರೆ.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಪಕ್ಷದ ಪ್ರಣಾಳಿಕೆ ರಚನಾ ಸಮಿತಿ ಅಧ್ಯಕ್ಷನಾಗಿದ್ದ ಸಂದರ್ಭ ದಲ್ಲಿ ಸರ್ಕಾರಿ ನೌಕರರ ಕೂಗಿಗೆ ಕಿವಿಗೊಟ್ಟು, ಮುಂದೆ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಹಳೆ ಪಿಂಚಣಿ ವ್ಯವಸ್ಥೆಯನ್ನು ಜಾರಿ ಮಾಡುವುದಾಗಿ ಪಕ್ಷದ ಪ್ರಣಾಳಿ ಕೆಯಲ್ಲಿ ಭರವಸೆ ನೀಡಿದ್ದೆವು ಈಗ ಆ ಬೇಡಿಕೆ ಈಡೇರುವ ಕಾಲ ಸಮೀಪಿಸುತ್ತಿದೆ.
ಹಳೆ ಪಿಂಚಣಿ ವ್ಯವಸ್ಥೆಯನ್ನು ಮರು ಜಾರಿ ಮಾಡ ಬೇಕೆಂಬ ನಿರ್ಧಾರಕ್ಕೆ ರಾಜ್ಯ ಸರ್ಕಾರ ಬಂದಿದ್ದು, ಶೀಘ್ರದಲ್ಲೇ ಈ ಸಂಬಂಧ ಅಧಿಕೃತ ಆದೇಶವೂ ಹೊರಬೀಳಲಿದೆ ಜನರು ಮತ್ತು ಸರ್ಕಾರದ ನಡುವೆ ಕೊಂಡಿಯಂತೆ ಕಾರ್ಯನಿರ್ವಹಿಸುವ ಸರ್ಕಾರಿ ನೌಕರರ ಹಿತಕಾಯಲು ನಾವು ಸದಾ ಬದ್ಧರಿದ್ದೇವೆ ಎಂದಿದ್ದಾರೆ ಇದರೊಂದಿಗೆ ರಾಜ್ಯದ ಸಮಸ್ತ ಸರ್ಕಾರಿ ನೌಕರರಿಗೆ ಶುಭ ಸುದ್ದಿಯನ್ನು ನೀಡಿದ್ದಾರೆ
ಸುದ್ದಿ ಸಂತೆ ನ್ಯೂಸ್ ಬೆಂಗಳೂರು.....