LIVE TV LocalCrimeNationalInternationalPoliticsEducationTechnologyEntertainmentSportsFeature
Sports News

ಮುಖ್ಯಶಿಕ್ಷಕ ಅಮಾನತು ಅಮಾನತು ಮಾಡಿ ಆದೇಶ ಮಾಡಿದ DDPI.....

ಎಚ್‌.ಡಿ.ಕೋಟೆ -

ಸ್ವಾತಂತ್ರ್ಯ ದಿನಾಚರಣೆ ಸರ್ಕಾರಿ ಶಾಲಾ ಸಮಾಂಭದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಪೊಟೊ ಇರಿಸದೇ ಗ್ರಾಮಸ್ಥರೊಡನೆ ಮಾತಿನ ವಾಗ್ಧಾಳಿ ನಡೆಸಿ ದಿನಾಚರಣೆ ನೆರವೇರಿಸಿದ ರಾಜೇಗೌಡನಹುಂಡಿ ಸರ್ಕಾರಿ ಶಾಲೆ ಮುಖ್ಯಶಿಕ್ಷಕ ಯತೀಶ್‌ ಅಮಾನತುಗೊಳಿಸಿ ಶಿಕ್ಷಣ ಇಲಾಖೆ ಜಿಲ್ಲಾ ಉಪ ನಿರ್ದೇಶಕರು ಆದೇಶ ಹೊರಡಿಸಿ ದ್ದಾರೆ.ಆ.15ರಂದು ರಾಜೇಗೌಡನಹುಂಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 75ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಗಿತ್ತು.ದಿನಾಚರಣೆ ಸಮಾರಂಭದಲ್ಲಿ ಡಾ.ಬಾಬಾ ಸಾಹೇಬ್‌ ಅಂಬೇಡ್ಕರ್‌ ಫೋಟೋ ಕಡ್ಡಾಯವಾಗಿ ಇರಬೇಕೆಂಬ ನ್ಯಾಯಾಲಯದ ಆದೇಶ ಇದ್ದರೂ ಶಾಲೆಯ ಮುಖ್ಯಶಿಕ್ಷಕ ಮತ್ತು ಶಾಲೆ ಆಡಳಿತ ಮಂಡಳಿ ನಿಯಮ ಪಾಲಿಸಿದೆ ಮಹಾತ್ಮ ಗಾಂಧೀಜಿಯವರ ಫೋಟೋ ಮಾತ್ರ ಇರಿಸಿ ಕಾರ್ಯಕ್ರಮ ನೆರವೇರಿಸಿದ್ದರು.ಕಾರ್ಯಕ್ರಮದಲ್ಲಿ ಅಂಬೇಡ್ಕರ್‌ ಫೋಟೋ ಇರಿಸಬೇಕಾದ್ದದ್ದು ಕಡ್ಡಾಯ ಎಂದು ಪಟ್ಟಣದ ಪ್ರಜ್ಞಾವಂತ ಯುವಕರು ಪ್ರಶ್ನಿಸಿದಾಗ ಮುಖ್ಯಶಿಕ್ಷಕ ಮತ್ತು ಶಾಲೆ ಆಡಳಿತ ಮಂಡಳಿ ಅಂಬೇಡ್ಕರ್‌ ಏನು ಸ್ವಾತಂತ್ರ್ಯ ಹೋರಾಟಗಾರರಲ್ಲ.ಸಂವಿಧಾನ ಬರೆದವರು ಎಂದು ಉಡಾಫೆ ಉತ್ತರ ನೀಡಿದ್ದರೆಂದು ಗ್ರಾಮಸ್ಥರು ಆರೋಪಿ ತಹಶೀಲ್ದಾರ್‌ ಸೇರಿದಂತೆ ಶಿಕ್ಷಣ ಇಲಾಖೆಗೆ ದೂರು ನೀಡಿದ್ದರು.

ದೂರಿನ ಮೇರೆಗೆ ತನಿಖೆ ನಡೆಸಿದ ಶಿಕ್ಷಣ ಇಲಾಖೆಗೆ ಸಾರ್ವಜನಿಕರ ದೂರು ಮೇಲ್ನೋಟಕ್ಕೆ ಸಾಬೀತಾದ ಹಿನ್ನೆಲೆಯಲ್ಲಿ ಜಿಲ್ಲಾ ಉಪನಿರ್ದೇಶಕರಿಗೆ ವರದಿ ನೀಡಿ ದ್ದರು.ವರದಿಯನ್ನಾಧರಿಸಿ ಉಪ ನಿರ್ದೇಶಕರು ಯತೀಶ್‌ ಅವರನ್ನು ಅಮಾನತುಗೊಳಿಸಿ ಅದೇಶಿಸಿದ್ದಾರೆ.

ಸ್ವಾತಂತ್ರ್ಯ ದಿನಾಚರಣೆಯ ಬಳಿಕ ಗ್ರಾಮದಲ್ಲಿ ಬೂದಿ ಮುಚ್ಚಿದ ಕೆಂಡದಂತೆ ಅಶಾಂತಿ ನೆಲೆಸಿದೆ ಘಟನೆಯ ಬಳಿಕ ಅಧಿಕಾರಿಗಳ ತಂಡ ತನಿಖೆಗೆ ಶಾಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ವಿಚಾರ ಇಲ್ಲಿಗೆ ಬಿಟ್ಟು ಗ್ರಾಮದ ಶಾಂತಿ ಸುವ್ಯವಸ್ಥೆಗೆ ಗ್ರಾಮಸ್ಥರು ಮನವಿ ಮಾಡಿ ಕೊಂಡಿದ್ದರು. ಆದರೂ ನಿಯಮಾನುಸಾರ ಕ್ರಮ ಕೈಗೊಂಡು ಮುಖ್ಯ ಶಿಕ್ಷಕರನ್ನು ಅಮಾನತು ಗೊಳಿಸಿದ್ದರಿಂದ ಕುಪಿತರಾದ ಗ್ರಾಮದ ಹಲವು ಮಂದಿ ಮುಖ್ಯಶಿಕ್ಷಕರನ್ನು ಶಾಲೆಯಲ್ಲಿ ಮುಂದುವರಿಸದಿದ್ದರೆ ನಮ್ಮ ಮಕ್ಕಳನ್ನು ಶಾಲೆಗೆ ಕಳಿ ಸೋಲ್ಲ ಎಂದು ಪಟ್ಟು ಹಿಡಿದು ಕಳೆದ 3-4 ದಿನಗಳ ಹಿಂದಿನಿಂದ ಮಕ್ಕಳನ್ನು ಮನೆಯಲ್ಲಿಯೇ ಇರಿಸಿಕೊಂಡಿ ದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....