LIVE TV LocalCrimeNationalInternationalPoliticsEducationTechnologyEntertainmentSportsFeature
State News

ಮುಖ್ಯ ಶಿಕ್ಷಕ ಅಮಾನತು ಹೆಂಡತಿಯವರ ದೂರಿನಿಂದ ಡಿಡಿಪಿಐ ಅಮಾನತು ಮಾಡಿ ಆದೇಶ.....

ಯಾದಗಿರಿ -

ಇಬ್ಬರು ಹೆಂಡತಿಯರಿಗೆ ಕೈಕೊಟ್ಟು ಮೂರನೇಯ ಮದುವೆಯಾಗಿದ್ದ ಸರ್ಕಾರಿ ಶಾಲೆ ಶಿಕ್ಷಕನನ್ನು ಅಮಾನತು ಮಾಡಲಾಗಿದೆ.ಹೌದು ಮತ್ತೊಬ್ಬಳನ್ನು ಮದುವೆಯಾಗಿ ಸಿಕ್ಕಿಬಿದ್ದಿರುವ ಶಿಕ್ಷಕರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.ಸೈದಾಪುರ ಹತ್ತಿರದ ನೀಲಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕ ಮೋಹನರಡ್ಡಿ ಸಂಗಾರಡ್ಡಿ ಮೂವರು ಹೆಣ್ಣುಮಕ್ಕಳ ಜೀವನದಲ್ಲಿ ಆಟವಾಡಿದ್ದಾನೆ.

1988ರಲ್ಲಿ ಸುರಪುರ ತಾಲೂಕಿನ ಬೋನಾಳ ಗ್ರಾಮದ ತಿಪ್ಪಮ್ಮಳನ್ನು 1992ರಲ್ಲಿ ವಡಗೇರಾ ತಾಲೂಕಿನ ಜೋಳ ದಡಗಿ ಗ್ರಾಮದ ದೇವಮ್ಮ ಜತೆ ಮದುವೆಯಾಗಿದ್ದಾನೆ. ಇಷ್ಟು ಸಾಲದೆಂಬಂತೆ 2007ರಲ್ಲಿ ವಿಜಯಪುರ ಜಿಲ್ಲೆಯ ತುಂಬಗಿ ಗ್ರಾಮದ ಗುರುಸಂಗಮ್ಮ ಎಂಬಾಕೆ ಕೈ ಹಿಡಿದಿ ದ್ದಾನೆ ಅಚ್ಚರಿ ಎಂದರೆ ಮೊದಲ ಇಬ್ಬರು ಹೆಂಡತಿಯರಿಗೆ ಈತ ಮೂರನೇ ಮದುವೆಯಾಗಿದ್ದು ಗೊತ್ತೇ ಇರಲಿಲ್ಲ. ಇತ್ತೀಚೆಗಷ್ಟೇ ಎರಡನೇ ಪತ್ನಿ ದೇವಮ್ಮಗೆ ಕಿರುಕುಳ ನೀಡಿ ಮನೆಯಿಂದ ಹೊರಗೆ ಹಾಕಲು ಮುಂದಾಗಿದ್ದ.

https://youtu.be/-Ddymy6HZ0U

ಆಕೆ ನ್ಯಾಯಾಲಯದ ಮೊರೆ ಹೋಗುವುದಾಗಿ ಹೇಳಿದ್ದೇ ತಡ ತಾನು ಮತ್ತೊಂದು ಮದುವೆಯಾಗಿದ್ದಾಗಿ ಬಾಯ್ಬಿಟ್ಟಿ ದ್ದಾನೆ.ಹೀಗಾಗಿ ಮೊದಲ ಇಬ್ಬರು ಪತ್ನಿಯರು ಪತಿ ಮೋಸ ಮಾಡಿದ್ದು ನ್ಯಾಯ ದೊರಕಿಸುವಂತೆ ಶಿಕ್ಷಣ ಇಲಾಖೆ ಅಧಿಕಾರಿಗಳ ಬಳಿ ಅಳಲು ತೋಡಿಕೊಂಡಿದ್ದಾರೆ. ವಿಚಾರಣೆ ನಡೆಸಿದ ಡಿಡಿಪಿಐ ಶಾಂತಗೌಡ ಪಾಟೀಲ್ ಶಿಕ್ಷಕ ಮೋಹನರೆಡ್ಡಿ ಮೂರು ಮದುವೆಯಾಗಿದ್ದನ್ನು ಖಚಿತಪಡಿ ಸಿಕೊಂಡು ಸೇವೆಯಿಂದ ಅಮಾನತುಗೊಳಿಸಿದ್ದಾರೆ.

https://youtu.be/hO_W77bcvHc

ಪತ್ನಿಯರು ಪತಿಯಿಂದಾದ ಅನ್ಯಾಯಕ್ಕೆ ನ್ಯಾಯ ದೊರಕಿ ಸಿಕೊಡುವಂತೆ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ. ನ್ಯಾಯ ಕೊಡಿಸುವಂತೆ ಇಬ್ಬರು ಪತ್ನಿಯರು ಹಾಗೂ ಅವರ ಮಕ್ಕಳು ಯಾದಗಿರಿ ಪೊಲೀಸ್ ವರಿಷ್ಠಾಧಿಕಾರಿ ವೇದಮೂರ್ತಿ ಬಳಿ ಮನವಿ ಮಾಡಿದ್ದರು. ಮಕ್ಕಳ ಭವಿಷ್ಯ ರೂಪಿಸಬೇಕಿದ್ದ ಶಿಕ್ಷಕ ಮದುವೆ ಆಗುವುದನ್ನೇ ಖಯಾಲಿ ಮಾಡಿಕೊಂಡಿದ್ದು ವರ್ತಮಾನದ ದುರಂತ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....