LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಧಾರವಾಡ ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ - ಗ್ರಾಮ ವಾಸ್ತವ್ಯಕ್ಕೆ ಸಿದ್ದಗೊಂಡಿಗೆ ವನಹಳ್ಳಿ ಗ್ರಾಮ.....

ಧಾರವಾಡ -

ರಾಜ್ಯ ಸರಕಾರದ ನಿರ್ದೇಶನದಂತೆ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮ ಮತ್ತೆ ಆರಂಭಗೊಂಡಿದ್ದು ಅಕ್ಟೋಬರ್ 16ರ ಶನಿವಾರದಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರು ಧಾರವಾಡ ತಾಲೂಕಿನ ಕನಕೂರ ಗ್ರಾಮ ಪಂಚಾಯತ ವ್ಯಾಪ್ತಿಯ ವನಹಳ್ಳಿ ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ಮಾಡಲಿದ್ದಾರೆ.

ಹೌದು ಇಂದು ಆಯೋಜಿಸಿರುವ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಾರ್ವಜನಿಕರ ಅಹವಾಲು ಸ್ವೀಕರಿಸಿ,ಸ್ಥಳದಲ್ಲಿ ಪರಿಹರಿಸಲಿದ್ದಾರೆ.ಬೆಳಿಗ್ಗೆ 9-30 ಗಂಟೆಗೆ ಕಚೇರಿಯಿಂದ ಹೊರಡುವ ಅವರು ಕನಕೂರ ಗ್ರಾಮ ಪಂಚಾಯತಿ ವ್ಯಾಪ್ತಿ ಗ್ರಾಮಗಳಾದ ಕವಲಗೇರಿ,ಚಂದನಮಟ್ಟಿ,ಕನಕೂರ, ತಲವಾಯಿ ಗ್ರಾಮಗಳ ಮಾರ್ಗವಾಗಿ ಸುಮಾರು 10-30 ಗಂಟೆಗೆ ಹೊತ್ತಿಗೆ ವನಹಳ್ಳಿ ಗ್ರಾಮ ತಲುಪಲಿದ್ದಾರೆ.

ವನಹಳ್ಳಿಯಲ್ಲಿ ಗ್ರಾಮಸ್ಥರು ಜಿಲ್ಲಾಧಿಕಾರಿಗಳನ್ನು ಸಾಂಪ್ರದಾಯಿಕವಾಗಿ ಸ್ವಾಗತಿಸಿ ವಾದ್ಯ ಮೇಳದೊಂದಿಗೆ ಎತ್ತಿನ ಬಂಡಿಯಲ್ಲಿ ಗ್ರಾಮ ಪ್ರವೇಶ ಮಾಡಿಸಲಿದ್ದಾರೆ.
ನಂತರ ಜಿಲ್ಲಾಧಿಕಾರಿಗಳು ಎಸ್.ಸಿ,ಎಸ್.ಟಿ, ಕಾಲೋನಿ, ಅಂಗನವಾಡಿ ಕೇಂದ್ರ, ಪಡಿತರ ವಿತರಣಾ ಕೇಂದ್ರಗಳಿಗೆ ಭೇಟಿ ನೀಡಿ, ಪರಿಶೀಲಿಸಲಿದ್ದಾರೆ.ವನಹಳ್ಳಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ವೇದಿಕೆ ಕಾರ್ಯಕ್ರಮ ಹಾಗೂ ಸಾರ್ವಜನಿಕರ ಅಹವಾಲು ಸ್ವೀಕಾರ ನಡೆಯಲಿದೆ.

ಕಂದಾಯ ಇಲಾಖೆ ಸಿಬ್ಬಂದಿಗಳು ಕನಕೂರ ಗ್ರಾಮ ಪಂಚಾಯತ ವ್ಯಾಪ್ತಿಯ ಐದು ಗ್ರಾಮಗಳ ಮನೆಮನೆಗೆ ಭೇಟಿ ನೀಡಿ,ಸಾರ್ವಜನಿಕರ ವಯಕ್ತಿಕ ಹಾಗೂ ಸಮುದಾಯ ಸಂಬಂಧಿಸಿದ ಅಹವಾಲುಗಳನ್ನು ಸ್ವೀಕರಿಸಿ, ಸೂಕ್ತ ಕ್ರಮಕ್ಕಾಗಿ ಸಂಬಂಧಿಸಿದ ಇಲಾಖೆಗಳಿಗೆ ರವಾನಿಸಿ ದ್ದಾರೆ. ನಾಳೆಯೂ ಸಾರ್ವಜನಿಕರ ಅಹವಾಲು ಸ್ವೀಕರಿ ಸಲು ಎರಡು ಕೌಂಟರ್ ಗಳನ್ನು ತಾಲೂಕಾ ಆಡಳಿತ ತೆರೆಯಲಿದೆ.ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಸರಕಾ ರದ ವಿವಿಧ ಇಲಾಖೆಗಳ ಸವಲತ್ತುಗಳನ್ನು ಅರ್ಹ ಪಲಾನು ಭವಿಗಳಿಗೆ ಜಿಲ್ಲಾಧಿಕಾರಿಗಳು ಜನಪ್ರತಿನಿಧಿಗಳೊಂದಿಗೆ ವಿತರಿಸಲಿದ್ದಾರೆ.ಉಪವಿಭಾಗಾಧಿಕಾರಿ ಡಾ.ಗೋಪಾಲಕೃಷ್ಣ ಬಿ. ತಹಶಿಲ್ದಾರ ಡಾ.ಸಂತೋಷ ಬಿರಾದಾರ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಪಾಲ್ಗೋಳ್ಳಲಿದ್ದಾರೆ.

ಇನ್ನೂ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮದ ಅಂಗವಾಗಿ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯದಂತೆ ಜಿಲ್ಲೆಯ ಎಲ್ಲ ತಾಲೂಕುಗಳಲ್ಲೂ ಆಯಾ ತಹಶಿಲ್ದಾರರು ಗ್ರಾಮ ವಾಸ್ತವ್ಯ ಮಾಡಲಿದ್ದಾರೆ.

ಅಕ್ಟೋಬರ್ 16 ಶನಿವಾರದಂದು ಹುಬ್ಬಳ್ಳಿ ಗ್ರಾಮೀಣ ತಹಶಿಲ್ದಾರ ಪ್ರಕಾಶ ನಾಶಿ,ತಾಲೂಕಿನ ಚನ್ನಾಪೂರ ಗ್ರಾಮದಲ್ಲಿ ಹುಬ್ಬಳ್ಳಿ ನಗರ ತಹಶಿಲ್ದಾರ ಶಶಿಧರ ಮಾಡ್ಯಾಳ ಉಣಕಲ್ ಗ್ರಾಮದಲ್ಲಿ, ಕುಂದಗೋಳ‌ ತಹಶಿಲ್ದಾರ ಅಶೋಕ ಶಿಗ್ಗಾಂವಿ ತಾಲ್ಲೂಕಿನ ರಾಮಪೂರ ಗ್ರಾಮದಲ್ಲಿ, ನವಲಗುಂದ ತಹಶಿಲ್ದಾರ ನವೀನ ಹುಲ್ಲೂರ ತಾಲ್ಲೂಕಿನ ಪಡೆಸೂರ ಗ್ರಾಮದಲ್ಲಿ, ಅಣ್ಣಿಗೇರಿ ತಹಶಿಲ್ದಾರ ಮಂಜುನಾಥ ಅಮಾಸಿ ತಾಲ್ಲೂಕಿನ ಭಧ್ರಾಪೂರ ಗ್ರಾಮದಲ್ಲಿ,ಕಲಘಟಗಿ ತಹಶಿಲ್ದಾರ ಯಲ್ಲಪ್ಪ ಗೊಣ್ಣನ್ನವರ ತಾಲ್ಲೂಕಿನ ಅರೇಬಸವನಕೊಪ್ಪ ಗ್ರಾಮದಲ್ಲಿ ಹಾಗೂ ಅಳ್ನಾವರ ತಹಶಿಲ್ದಾರ ಮಾಧವ ಗಿತ್ತೆ ತಾಲ್ಲೂಕಿನ ಅಂಬೋಳ್ಳಿ ಗ್ರಾಮದಲ್ಲಿ ವಾಸ್ತವ್ಯ ಮಾಡಲಿದ್ದಾರೆ.

ಗ್ರಾಮ ವಾಸ್ತವ್ಯ ದಿನದಂದು ಆಯಾ ತಾಲ್ಲೂಕಿನ ತಹಶೀಲ್ದಾರರೊಂದಿಗೆ ಎಲ್ಲ ಇಲಾಖೆಯ ತಾಲ್ಲೂಕು ಮಟ್ಟದ ಅಧಿಕಾರಿಗಳು ತಮ್ಮ ಇಲಾಖೆಗೆ ಸಂಬಂಧಿಸಿದ ಯೋಜನೆ ಹಾಗೂ ಅಗತ್ಯ ಮಾಹಿತಿಯೊಂದಿಗೆ ಖುದ್ದಾಗಿ ಹಾಜರಿದ್ದು ಸಾರ್ವಜನಿಕ ಅಹವಾಲು ಬೇಡಿಕೆಗಳಿಗೆ ಸ್ಥಳದಲ್ಲಿಯೇ ಕಾರ್ಯಸೂಚಿಗಳ ಅನ್ವಯ ಕ್ರಮಗಳನ್ನು ಪೂರ್ಣಗೊಳಿಸಿ ಫಲಾನುಭವಿಗಳಿಗೆ ಪರಿಹಾರ ನೀಡಲು ಕ್ರಮವಹಿಸಲು ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರು ಆದೇಶಿಸಿದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....