LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಧಾರವಾಡದಲ್ಲಿನ ಕಳ್ಳತನ ಪ್ರಕರಣ - ಶಾಸಕ ಅಮೃತ ದೇಸಾಯಿ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ......

ಧಾರವಾಡ -

ಧಾರವಾಡದಲ್ಲಿ ನಡೆಯುತ್ತಿರುವ ಕಳ್ಳತನ ಪ್ರಕರಣಗಳನ್ನು ಧಾರವಾಡ ಗ್ರಾಮೀಣ ಕ್ಷೇತ್ರದ ಶಾಸಕ ಅಮೃತ ದೇಸಾಯಿ ಗಂಭೀರವಾಗಿ ತಗೆದುಕೊಂಡಿದ್ದಾರೆ. ನಗರದಲ್ಲಿ ಹೆಚ್ಚಾಗುತ್ತಿರುವ ಕಳ್ಳತನ ಪ್ರಕರಣ ಕುರಿತು ಗೃಹ ಕಚೇರಿಯಲ್ಲಿ ನಗರದ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ಮಾಡಿದರು.

ಶಾಸಕರ ಗೃಹ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಧಾರವಾಡ ಉಪವಿಭಾಗದ ಎಸಿಪಿ ಅಧಿಕಾರಿ ಅನುಷಾ,ಉಪನಗರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಪ್ರಮೋದ್ ಯಲಿಗಾರ,ಶಹರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಸಂಗಮೇಶ ದಿಡಿಗಿನಾಳ ಅವರೊಂದಿಗೆ ಸಭೆ ಮಾಡಿದರು .

ಒಂದು ಘಂಟೆಗಳ ಗೃಹ ಕಚೇರಿಯಲ್ಲಿ ನಡೆದ ಸಭೆಸಭೆ ಮಾಡಿದ ಶಾಸಕರು ನಗರದಲ್ಲಿ ಹೆಚ್ಚಾಗುತ್ತಿರುವ ಕಳ್ಳತನ ಪ್ರಕರಣ ಕುರಿತು ಯಾವ ಯಾವ ಕ್ರಮಗಳನ್ನು ಕೈಗೊಂಡಿದ್ದಿರಿ ಎಂಬ ಕುರಿತು ಮಾಹಿತಿ ಪಡೆದುಕೊಂಡರು.

ಯಾವುದೇ ಕಾರಣಕ್ಕೂ ಕಳ್ಳತನ ಪ್ರಕರಣಗಳ ಕುರಿತು ಸುಮ್ಮನೆ ಇರಬೇಡಿ,ನಗರದಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಇಂಥಹ ಘಟನೆಗಳಿಂದ ತಪ್ಪು ಸಂದೇಶ ಹೋಗುತ್ತಿದೆ ಸರಿಯಾಗಿ ಕಟ್ಟು ನಿಟ್ಟಾಗಿ ನಿಯಂತ್ರಣ ಮಾಡಿ ಎಂದು ಸೂಚಿಸಿದರು.

ರಾತ್ರಿ ವೇಳೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್ ಭದ್ರತೆಯನ್ನು ಹೆಚ್ಚಿಸಿ ಎಲ್ಲೇಡೆ ಕಣ್ಗಾವಲು ಇರಲಿ ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಮಾಡಬೇಡಿ ಜೊತೆಯಲ್ಲಿ ಜನರೊಂದಿಗೆ ಸೂಕ್ತವಾದ ಸಹಕಾರ ತಗೆದುಕೊಂಡು ನಿಯಂತ್ರಣ ಮಾಡಿ ಎಂದು ಸೂಚಿದರು‌.

ಈ ಒಂದು ಸಭೆಯಲ್ಲಿ ಮೂರು ಪೊಲೀಸ್ ಠಾಣೆಗಳ ಇನ್ಸ್ಪೆಕ್ಟರ್ ,ಎಸಿಪಿ ಮತ್ತು ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯರ ಸುನೀಲ ಮೊರೆ,ಶಾಸಕರ ಆಪ್ತ ಕಾರ್ಯದರ್ಶಿ ಪ್ರಕಾಶ ಕಟ್ಟಿ , ಭೀಮಾಶಂಕರ,ಮಂಜುನಾಥ ಹಿರೇಮಠ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....