LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಆದರ್ಶ ಬಾಲಿಕಿಯರ ಪ್ರೌಢ ಶಾಲೆಯಲ್ಲಿ ಶಿಕ್ಷಕರಾದ ಧಾರವಾಡ ಸಂಚಾರಿ ಪೊಲೀಸರು

ಧಾರವಾಡ -

ರಸ್ತೆ ಸುರಕ್ಷತಾ ಸಪ್ತಾಹದ ಹಿನ್ನಲೆಯಲ್ಲಿ ಧಾರವಾಡ ಸಂಚಾರಿ ಪೊಲೀಸರು ದಿನಕ್ಕೊಂದು ಹೊಸ ಪ್ರಯೋಗ ಹೊಸದಾದ ಕಾರ್ಯಗಳ ಮೂಲಕ ರಸ್ತೆ ಸುರಕ್ಷತಾ ಕುರಿತಂತೆ ಸಾರ್ವಜನಿಕರಿಗೆ ತಿಳುವಳಿಕೆ ಮೂಡಿಸುತ್ತಿದ್ದಾರೆ.

ಹೌದು ಈಗಾಗಲೇ ಕಳೆದ ಹದಿನೈದು ದಿನಗಳಿಂದ ಧಾರವಾಡ ಸಂಚಾರಿ ಪೊಲೀಸ್ ಠಾಣೆ ಇನಸ್ಪೇಕ್ಟರ್ ಮಲಗೌಡ ನಾಯ್ಕರ್ ಅವರ ಮಾರ್ಗದರ್ಶನದಲ್ಲಿ ಸಂಚಾರಿ ಪೊಲೀಸ್ ಠಾಣೆಯ ಸಿಬ್ಬಂದಿಗಳು ಸಾಕಷ್ಟು ಕಾರ್ಯಕ್ರಮಗಳನ್ನು ಮಾಡುತ್ತಿದ್ದಾರೆ.

ಇವೆಲ್ಲದರ ನಡುವೆ ಇದರೊಂದಿಗೆ ನಗರದ ಆದರ್ಶ ಬಾಲಕಿಯರ ಪ್ರೌಢ ಶಾಲೆಯಲ್ಲಿ ನಡೆಯುತ್ತಿರುವ ಕೌಶಲ್ಯ ತರಭೇತಿ ಶಿಬಿರವನ್ನು ಉಪಯೋಗ ಮಾಡಿಕೊಂಡು ತರಬೇತಿ ಕಾರ್ಯಾಕ್ರಮಕ್ಕೆ ಬಂದ ಶಿಕ್ಷಕ ಬಳಗಕ್ಕೆ ರಸ್ತೆ ಸುರಕ್ಷತೆ ಕುರಿತು ಪಾಠ ಮಾಡಿದರು.

ಸುರಕ್ಷತೆ ಕುರಿತಂತೆ ಮಾಹಿತಿ ನೀಡಿದರು. ಶಿಕ್ಷಕರಿಗೆ ಕೆಲ ಕಾಲ ಧಾರವಾಡ ಸಂಚಾರಿ ಪೊಲೀಸರು ಶಿಕ್ಷಕರಾಗಿ ರಸ್ತೆಗಳ ನಿಯಮಗಳ ಕುರಿತಂತೆ ಪಾಠ ಮಾಡುತ್ತಾ ಸಮಗ್ರವಾದ ಮಾಹಿತಿಯನ್ನು ನೀಡಿದರು.

ಶಿಕ್ಷಕರು ಕೇವಲ ಪಾಠ ಮಾಡೊದು ಅಲ್ಲದೇ ರಸ್ತೆಯಲ್ಲಿ ನಮ್ಮ ಪಾತ್ರ ಏನು ಹೇಗೆ ಸಂಚಾರಿ ನಿಯಮಗಳನ್ನು ಪಾಲಿಸಬೇಕು ವಾಹನಗಳಲ್ಲಿ ಹೋಗುವಾಗ ಹೇಗಿರಬೇಕು ಎಂಬುದರ ಬಗ್ಗೆ ತಿಳಿಸಿಕೊಟ್ಟರು.

ಹೇಗೆಲ್ಲಾ ಪ್ರಯಾಣಿಸಬೇಕು ಏನೇಲ್ಲಾ ದಾಖಲೆಗಳನ್ನು ತಗೆದುಕೊಂಡು ಹೋಗಬೇಕು ಎಂಬ ಕುರಿತಂತೆ ಸಂಚಾರಿ ಪೊಲೀಸ್ ಠಾಣೆಯ ಸಿಬ್ಬಂದಿಗಳು ಮಾಹಿತಿ ನೀಡಿದರು.

ಈ ಒಂದು ಕಾರ್ಯಕ್ರಮದಲ್ಲಿ ಮುಖ್ಯವಾಗಿ ASI ಪೊಲೀಸ್ ಅಧಿಕಾರಿಗಳಾದ ಸೀತಾ ಕಟಗಿ,ಎಮ್ ಎಸ್ ಕರಿಗನ್ನವರ, ಸಿಬ್ಬಂದಿಗಳಾದ ಬಸಯ್ಯ ಎಸ್ ಜಿ,ಲಿಂಗರಾಜ ನಾಯಕ,ಸೇರಿದಂತೆ ಹಲವರು ಉಪಸ್ಥಿತರಿದ್ದರು.ಒಟ್ಟಾರೆ ಬಿಡುವಿಲ್ಲದ ಕರ್ತವ್ಯದ ನಡುವೆ ಧಾರವಾಡ ಸಂಚಾರಿ ಪೊಲೀಸರು ಒಂದು ಒಳ್ಳೆಯ ಸಾಮಾಜಿಕ ಕಾರ್ಯ ಮಾಡಿದರು.

ಇನ್ನೂ ಇಷ್ಟೆಲ್ಲಾ ಪಾಠ ಮಾಡಿದ ಸಂಚಾರಿ ಪೊಲೀಸ್ ಅಧಿಕಾರಿಗಳೊಂದಿಗೆ ಪಾಠ ಕೇಳಿದ ಶಿಕ್ಷಕರು ಒಂದು ಸೆಲ್ಪಿ ಪೊಟೊ ತಗೆದುಕೊಂಡು ನೆನಪಿನ ಬುತ್ತಿಯೊಂದಿಗೆ ನಗು ನಗುತ್ತಾ ಧನ್ಯವಾದಗಳನ್ನು ಹೇಳಿ ಹೊರಟರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...