LIVE TV LocalCrimeNationalInternationalPoliticsEducationTechnologyEntertainmentSportsFeature
State News

ಕರ್ತವ್ಯ ಲೋಪ - ಶಾಲೆಯ ಮುಖ್ಯೋಪಾಧ್ಯಾಯಿನಿ ಎತ್ತಂಗಡಿ ದೂರುಗಳ ಹಿನ್ನೆಲೆಯಲ್ಲಿ ವರ್ಗಾ ವಣೆ ಮಾಡಿ ಆದೇಶ.....

HD ಕೋಟೆ -

ಸಾರ್ವಜನಿಕರ ದೂರಿನ ಹಿನ್ನೆಲೆಯಲ್ಲಿ ಹಾಗೇ ಕರ್ತವ್ಯ ಲೋಪ ಮಾಡಿದ ಆರೋಪದ ಮೇಲೆ ವಸತಿ ಶಾಲೆಯ ಮುಖ್ಯೋಪಾಧ್ಯಾಯಿನಿ ಯೊಬ್ಬರ ನ್ನು ವರ್ಗಾವಣೆ ಮಾಡಲಾಗಿದೆ.ಹೌದು ಎಚ್.ಡಿ. ಕೋಟೆ: ತಾಲ್ಲೂಕಿನ ಕೆ.ಬೆಳತೂರು ಮೊರಾರ್ಜಿ ವಸತಿ ಶಾಲೆಯ ಪ್ರಾಂಶುಪಾಲರಾದ ಶ್ರೀದೇವಿ ಅವರನ್ನು ಕರ್ತವ್ಯಲೋಪದ ಆಧಾರದ ಮೇಲೆ ಮತ್ತು ಅನೇಕ ಪೋಷಕರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಮೇಲಧಿಕಾರಿಗಳು ಕೊನೆಗೂ ವರ್ಗಾವಣೆ ಮಾಡಿದ್ದಾರೆ.

ಹುಣಸೂರು ತಾಲ್ಲೂಕಿನ ಹನಗೋಡು ಗ್ರಾಮದ ಅಂಬೇಡ್ಕರ್ ವಸತಿ ಶಾಲೆಯಲ್ಲಿ ಶಿಕ್ಷಕರಾಗಿ ಕೆಲಸ ನಿರ್ವಹಿಸುತ್ತಿದ್ದ ಶ್ರೀದೇವಿ ಅವರನ್ನು ಕಳೆದ 3. ವರ್ಷಗಳ ಹಿಂದೆ ತಾಲ್ಲೂಕಿನ ಕೆ.ಬೆಳತೂರು ಮೊರಾರ್ಜಿ ವಸತಿ ಶಾಲೆಗೆ ಪ್ರಭಾರ ಪ್ರಾಂಶುಪಾಲ ರಾಗಿ ಕರ್ನಾಟಕ ವಸತಿ ಶಾಲೆಗಳ ಶಿಕ್ಷಣ ಸಂಸ್ಥೆ ಮುಖ್ಯಸ್ಥರಾದ ಸಿದ್ದೇಶ್ವರನ್ ಅವರು ನೇಮಕ ಮಾಡಿದ್ದರು.ಅಂದಿನಿಂದ ಇಂದಿನವರೆಗೂ ಮೊರಾರ್ಜಿ ವಸತಿ ಶಾಲೆಯಲ್ಲಿ ಶ್ರೀದೇವಿ ಅವರ ಆಡಳಿತದ ಬಗ್ಗೆ ಪರ ಮತ್ತು ವಿರೋಧವಾಗಿ ಅನೇಕ ಸಂಘಟನೆಗಳು ಪ್ರತಿಭಟನೆಗಳನ್ನು ನಡೆಸಿದ್ದವು. ಜನಪ್ರತಿನಿಗಳು ಸಹಾ ಶಾಲೆಗೆ ಭೇಟಿ ನೀಡಿ ವಿಚಾರಿ ಸಿದ್ದರು. ಮೇಲಧಿಕಾರಿಗಳು ತನಿಖೆ ಕೂಡ ನಡೆಸಿ ದ್ದರು. ಇವೆಲ್ಲಾ ಅಧಿಕಾರಿಗಳಿಗೆ ದೊಡ್ಡ ತಲೆನೋ ವಾಗಿ ಪರಿಣಮಿಸಿತ್ತು.

ಕರ್ನಾಟಕ ವಸತಿ ಶಾಲೆಗಳ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರು ಶಾಲೆಯ ಸಮಗ್ರ ವರದಿ ನೀಡುವಂತೆ ಹಿಂದೆ ಇದ್ದ ಗಿರಿಜನ ಅಭಿವೃದ್ಧಿ ಯೋಜನಾ ಅಧಿಕಾರಿ ಪಿಸಿಒ ಪ್ರಕಾಶ್ ಅವರಿಗೆ ಆದೇಶಿಸಿದ್ದರು. ಅವರು ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಈಗಿನ ಪಿಸಿಒ ಅಧಿಕಾರಿ ಪ್ರಭಾ ಅವರು ತನಿಖೆ ಮಾಡಿ ಸಮಗ್ರ ವರದಿಯನ್ನು ಮೇಲಧಿಕಾರಿಗೆ ಸಲ್ಲಿಸಿದ್ದರು.

ಶ್ರೀದೇವಿ ಅವರನ್ನು ತಕ್ಷಣ ವರ್ಗಾವಣೆ ಮಾಡಿ ಮೂಲ ವೃತ್ತಿಯಾಗಿದ್ದ ಅಂಬೇಡ್ಕರ್ ವಸತಿ ಶಾಲೆಯಲ್ಲಿ ಕೆಲಸ ನಿರ್ವಹಿಸುವಂತೆ ಆದೇಶಿಸಿ ಏಕಲವ್ಯ ಶಾಲೆಯ ಮುಖ್ಯ ಶಿಕ್ಷಕರಾದ ಶ್ರೀನಿವಾಸ್ ಅವರನ್ನು ಮೊರಾರ್ಜಿ ವಸತಿ ಶಾಲೆಯ ಪ್ರಾಂಶುಪಾ ಲರಾಗಿ ಅಧಿಕಾರ ವಹಿಸಿಕೊಳ್ಳುವಂತೆ ಆದೇಶಿಸಿ ದ್ದರು.ಆದರೆ ಶ್ರೀದೇವಿ ವರ್ಗಾವಣೆಯಾಗಲು ವಿರೋಧ ವ್ಯಕ್ತಪಡಿಸಿ ಶ್ರೀನಿವಾಸ್ ಅವರಿಗೂ ಅಧಿಕಾರ ಹಸ್ತಾಂತರಿಸದೆ ಇದ್ದ ಹಿನ್ನೆಲೆಯಲ್ಲಿ ಶಾಲೆಗೆ ತೆರಳಿದ ಪಿಸಿಒ ಪ್ರಭಾ ಅವರು ದಾಖಲಾತಿ ಗಳಲ್ಲಿ ಶ್ರೀನಿವಾಸ್ ಅವರೇ ಆದೇಶದಂತೆ ಪ್ರಾಂಶು ಪಾಲರಾಗಿ ಆಡಳಿತ ನಡೆಸಲಿದ್ದಾರೆ ಎಂದು ನಮೂ ದಿಸಿದ ನಂತರ ಶ್ರೀದೇವಿ ತಮ್ಮ ಸ್ಥಾನವನ್ನು ತೆರವು ಗೊಳಿಸಿ ಶಾಲೆಯಿಂದ ಹೊರನಡೆದಿದ್ದಾರೆ.

ಪ್ರಾಂಶುಪಾಲರಾದ ಶ್ರೀದೇವಿ ಅವರ ಕರ್ತವ್ಯ ಲೋಪ, ಶೈಕ್ಷಣಿಕ ಚಟುವಟಿಕೆ ವಿಳಂಬ ಶಾಲೆಯಲ್ಲಿ ಪದೇ ಪದೇ ಅಹಿತಕರ ಘಟನೆ,ಸಿಬ್ಬಂದಿಗಳ ಬದಲಾವಣೆ ಶಾಲೆಯಲ್ಲಿ ಅಸಮರ್ಪಕ ನಿರ್ವಹಣೆ ಮುಂತಾದ ಹಲವಾರು ಸಮಸ್ಯೆಗಳು ಮೇಲ್ನೋಟಕ್ಕೆ ಕಂಡುಬಂದಿದ್ದರಿಂದ ಈ ಶಾಲೆಯಿಂದ ವರ್ಗಾವಣೆ ಮಾಡಲಾಗಿದೆ ವರ್ಗಾವಣೆ ಆದೇಶವನ್ನು ಕಟ್ಟು ನಿಟ್ಟಾಗಿ ಪಾಲಿಸಿ ಶ್ರೀದೇವಿ ಅವರು ಶಿಕ್ಷಕಿಯಾಗಿ ಅಂಬೇಡ್ಕರ್ ವಸತಿ ಶಾಲೆಯಲ್ಲಿ ಕೆಲಸ ನಿರ್ವಹಿಸ ಬೇಕೆಂದು ಸೂಚಿಸಿದ್ದೇನೆ ಎಂದು ಇಲಾಖೆಯ ಹಿರಿಯ ಅಧಿಕಾರಿಗಳು ಸೂಚಿಸಿದ್ದಾರೆ

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....