LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಕೋವಿಶಿಲ್ಡ್ ಲಸಿಕೆ ಪಡೆದ ಜಿಲ್ಲಾಧಿಕಾರಿ ನಿತೇಶ ಪಾಟೀಲ

ಧಾರವಾಡ -

ಧಾರವಾಡ ಜಿಲ್ಲಾಧಿಕಾರಿ ನಿತೀಶ್ ಪಾಟೀಲ್ ನಗರದ ಜಿಲ್ಲಾಸ್ಪತ್ರೆಯಲ್ಲಿ ಕೋವಿಶೀಲ್ಡ್ ಲಸಿಕೆ ಪಡೆದರು‌. ನಂತರ ಮಾತನಾಡಿದ ಅವರು ಜಿಲ್ಲೆಯಲ್ಲಿ ಮೊದಲ ಹಂತದಲ್ಲಿ ಲಸಿಕೆ ಪಡೆಯಲು ನೋಂದಣಿ ಮಾಡಿಕೊಂಡಿದ್ದ 28750 ಆರೋಗ್ಯ ಕಾರ್ಯಕರ್ತರ ಪೈಕಿ ಇದುವರೆಗೆ 14191 ಜನ ಮೊದಲ ಡೋಸ್, 4156 ಜನ ಎರಡನೇ ಡೋಸ್ ಲಸಿಕೆ ಪಡೆದಿದ್ದಾರೆ.ಇದೀಗ ಮಹಾನಗರಪಾಲಿಕೆ, ಸ್ಥಳೀಯಸಂಸ್ಥೆಗಳು,ಕಂದಾಯ,ಗ್ರಾಮೀಣಾಭಿವೃದ್ಧಿ ಇಲಾಖೆಯ 8775 ಜನ ನೋಂದಣಿ ಮಾಡಿಕೊಂಡಿ ದ್ದಾರೆ.ಈವರೆಗೆ 3292 ಜನ ಅಂದರೆ ಶೇ.37.5 ರಷ್ಟು ಲಸಿಕೆ ಪಡೆದಿದ್ದಾರೆ.ಉಳಿದವರೂ ಕೂಡ ನಿಗದಿತ ದಿನಗಳಂದು ಹತ್ತಿರದ ಲಸಿಕಾ ಕೇಂದ್ರಗಳಲ್ಲಿ ಲಸಿಕೆ ಪಡೆಯಬೇಕು ಎಂದರು.

ಈಗಾಗಲೇ ಲಸಿಕೆ ನೋಂದಣಿಯಾಗಿ ಅನೇಕ ಬಾರಿ ಎಸ್‍ಎಂಎಸ್ ಮತ್ತಿತರ ಮಾಹಿತಿ ಬಂದಿದ್ದರೂ ಕೂಡ ಲಸಿಕೆ ಪಡೆಯಲು ಸಾಧ್ಯವಾಗದಿರುವವರಿಗೆ ಫೆ.22,23 ಹಾಗೂ 24 ರಂದು ಮಾಪ್ ಅಪ್ ಅಭಿಯಾನದ ಮೂಲಕ ಮುಕ್ತ ಅವಕಾಶ ಕಲ್ಪಿಸಲಾಗಿದೆ.

ಈ ಮೂರು ದಿನಗಳಲ್ಲಿ ಅವರು ಯಾವುದೇ ಸಂದೇಶಗಳು ಬಾರದಿದ್ದರೂ ನೇರವಾಗಿ ಲಸಿಕಾ ಕೇಂದ್ರಕ್ಕೆ ತೆರಳಿ ಕೋವಿಶೀಲ್ಡ್ ಲಸಿಕೆ ಪಡೆಯಬಹುದು. ಕೊರೊನಾ ವೈರಾಣು ನಿರ್ಮೂಲನೆಯಾಗಿಲ್ಲ ,ಸಾರ್ವಜನಿಕರು ಮುಂಜಾಗ್ರತಾ ಕ್ರಮಗಳನ್ನು ನಿರ್ಲಕ್ಷಿಸದೇ ಕಡ್ಡಾಯವಾಗಿ ಪಾಲಿಸಬೇಕು ಎಂದು ಮನವಿ ಮಾಡಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಯಶವಂತ್ ಮದೀನಕರ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಸ್.ಕೆ.ಮಾನಕರ್,ಜಿಲ್ಲಾ ಆರ್.ಸಿ.ಹೆಚ್.ಅಧಿಕಾರಿ ಡಾ.ಎಸ್.ಎಂ.ಹೊನಕೇರಿ ಮತ್ತಿತರರು ಇದ್ದರು.


Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...