LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಕಾರ್ಯಾಚರಣೆ ಯಶಸ್ವಿ ಕವಲಗೇರಿಯಲ್ಲಿ ಚಿರತೆ ಸೆರೆ ಜಿಲ್ಲಾಧಿಕಾರಿ ನಿತೀಶ್ ಪಾಟೀಲ

ಧಾರವಾಡ -

ಚಿರತೆ ಸೆರೆ ಹಿಡಿಯಲು ಅರಣ್ಯ ಇಲಾಖೆ ಇಟ್ಟಿದ
ಬೋನಿ(ಕೇಜ್)ಗೆ ನಿನ್ನೆ ತಡರಾತ್ರಿ ಚಿರತೆ ಸಿಕ್ಕಿ ಬಿದಿದ್ದು ಇಂದು ಬೆಳಿಗ್ಗೆ ಅರಣ್ಯ ಇಲಾಖೆ ಸಿಬ್ಬಂದಿ ಚಿರತೆಯನ್ನು ಸುರಕ್ಷಿತವಾಗಿ ವಶಕ್ಕೆ ಪಡೆದಿದ್ದಾರೆ ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು ಧಾರವಾಡ ತಾಲೂಕಿನ ಕವಲಗೇರಿ ಗ್ರಾಮ ವ್ಯಾಪ್ತಿಯ ಕಬ್ಬಿನ ಗದ್ದೆಗಳಲ್ಲಿ ಚಿರತೆ ವಾಸವಾಗಿತ್ತು. ಗ್ರಾಮದ ರೈತರು ಸಾಕಷ್ಟು ಪ್ರಮಾಣದಲ್ಲಿ ಕಬ್ಬು ಬೆಳೆದಿದ್ದು,ಅದು ಎತ್ತರವಾಗಿ, ದಟ್ಟವಾಗಿ ಬೆಳೆದಿದ್ದ ರಿಂದ ಚಿರತೆ ಅಡಗಿಕೊಳ್ಳಲು ಸಹಾಯಕವಾಗಿತ್ತು.

ಅರಣ್ಯ ಇಲಾಖೆಯ ಡಿಎಪ್ಓ ನೇತೃತ್ವದಲ್ಲಿ ಸುಮಾರು 60 ಕ್ಕೂ ಹೆಚ್ಚು ಅರಣ್ಯ ಇಲಾಖೆ ಸಿಬ್ಬಂದಿ,ಅಧಿಕಾರಿಗಳು ಚಿರತೆ ಕಾರ್ಯಾಚರಣೆ ಯನ್ನು ನಿರಂತರವಾಗಿ ಮತ್ತು ತೀವ್ರವಾಗಿ ಮಾಡುತ್ತಿ ದ್ದರು ಎಂದಿದ್ದಾರೆ

https://youtu.be/DtQmliB2FX4

ಕವಲಗೇರಿ ಗ್ರಾಮದ ಕಬ್ಬಿನಗದ್ದೆಗಳ ಮಧ್ಯ ಹಾಗೂ ಸುತ್ತಲೂ ಸುಮಾರು 6 ಕ್ಕೂ ಹೆಚ್ಚು ಬೋನಗಳನ್ನು ಮೌಂಸದೊಂದಿಗೆ ಇಟ್ಟಿದ್ದರು.ಬಹುಶಃ ನಿನ್ನ ತಡ ರಾತ್ರಿ ಅಥವಾ ಬೆಳಗಿನ ಜಾವ ಚಿರತೆ ಬೋನಿನಲ್ಲಿ ರುವ ಮೌಂಸ ತಿನ್ನಲು ಬಂದು ಸಿಕ್ಕಿ ಹಾಕಿ ಕೊಂಡಿದೆ.

ಚಿರತೆ ಸುರಕ್ಷಿತವಾಗಿ ಸೆರೆ ಸಿಕ್ಕಿದೆ.ಕಾರ್ಯಾಚರಣೆ ಯಶಸ್ವಿಯಾಗಿ ನಡೆಸಿದ ಡಿಎಪ್ಓ ಯಶಪಾಲ ನೇತೃತ್ವದ ಎಲ್ಲ ಅರಣ್ಯ ಇಲಾಖೆ ಅಧಿಕಾರಿ, ಸಿಬ್ಬಂದಿ ಗಳನ್ನು ಜಿಲ್ಲಾಧಿಕಾರಿ ನಿತೇಶ ಪಾಟೀಲ ಅಭಿನಂದಿಸಿ ದ್ದಾರೆ.

ಇನ್ನೂ ಕಂದಾಯ ಇಲಾಖೆ,ಗ್ರಾಮ ಪಂಚಾಯತ, ಆರೋಗ್ಯ ಇಲಾಖೆ ಸಹಕಾರ ಈ ಒಂದು ಕಾರ್ಯಾ ಚರಣೆ ಯಲ್ಲಿ ಇದೆ.ಹೌದು ಚಿರತೆ ಕಾರ್ಯಾಚರಣೆ ಯಲ್ಲಿ ಅರಣ್ಯ ಇಲಾಖೆಯೊಂದಿಗೆ ಉಪವಿಭಾಗಾಧಿ ಕಾರಿ ಡಾ.ಗೋಪಾಲಕೃಷ್ಣ ಬಿ.ತಹಶಿಲ್ದಾರಸಂತೋಷ ಬಿರಾದಾರ ನೇತೃತ್ವದಲ್ಲಿ ಕಂದಾಯ ಇಲಾಖೆ ಸಿಬ್ಬಂದಿ,ಜಿಲ್ಲಾ ಪಂಚಾಯತ ಸಿಇಓ ಡಾ‌ಸುಶೀಲಾ ಬಿ ಅವರ ಮಾರ್ಗದರ್ಶನದಲ್ಲಿ ಕನಕೂರ ಗ್ರಾಮ ಪಂಚಾಯತ ಸಿಬ್ಬಂದಿಗಳು ಕವಲಗೇರಿ ಹಾಗೂ ಸುತ್ತಲಿನ ಗ್ರಾಮಗಳಲ್ಲಿನ ಜನರಲ್ಲಿ ಚಿರತೆ ಕುರಿತು ಜಾಗೃತಿ, ಜನಪ್ರತಿನಿಧಿಗಳೊಂದಿಗೆ ಸಭೆ ಜರುಗಿಸಿ ಕಾರ್ಯಾಚರಣೆ ಯಶಸ್ವಿಗೊಳಿಸಲು ಸಹಕಾರ ಪಡೆದಿದ್ದಾರೆ.

https://youtu.be/lljpo7UJf_w

ಮತ್ತು ಚಿರತೆ ಕಾರ್ಯಾಚರಣೆಗೆ ಅಗತ್ಯವಿರುವ ಸಹಾಯವನ್ಬು ನಿರಂತರವಾಗಿ ಮಾಡಿದ್ದಾರೆ.ವಿವಿಧ ಇಲಾಖೆಗಳ ಸಹಕಾರದಿಂದ ಚಿರತೆ ಕಾರ್ಯಾಚರಣೆ ಯಶಸ್ವಿಯಾಗಿ ಪೂರ್ಣಗೊಂಡಿದೆ ಎಂದು ಜಿಲ್ಲಾಧಿಕಾರಿ ಗಳು ಹೇಳಿದರು.

ಕವಲಗೇರಿ ಗ್ರಾಮಸ್ಥರಿಗೂ ಕೃತಜ್ಞತೆ ಹೌದು ಚಿರತೆ ಕಾರ್ಯಾಚರಣೆ ಯಶ್ವಿಗೊಳಿಸಲು ಸಹಕರಿಸಿದ ಕವಲಗೇರಿ ಗ್ರಾಮಸ್ಥರಿಗೆ,ಅಲ್ಲಿನ ರೈತರಿಗೆ ಜಿಲ್ಲಾಧಿ ಕಾರಿಗಳು ಕೃತಜ್ಞತೆ ತಿಳಿಸಿದ್ದಾರೆ.

ಕಳೆದ ಕೆಲವು ದಿನಗಳಿಂದ ಹುಬ್ಬಳ್ಳಿ ನೃಪತುಂಗ ಬೆಟ್ಟ ಹಾಗೂ ಸುತ್ತಲಿನ ಪ್ರದೇಶದಲ್ಲಿ ಚಿರತೆ ಇರುವ ಕುರಿತು ಮತ್ತೆ ಯಾವುದೇ ಪುರಾವೆ, ಗುರುತುಗಳು ಕಂಡುಬಂದಿಲ್ಲ. ಅರಣ್ಯ ಇಲಾಖೆಯ ಒಂದು ತಂಡ ನೃಪತುಂಗ ಬೆಟ್ಟ, ರಾಜನಗರ ಹಾಗೂ ಸುತ್ತಲಿನ ಪ್ರದೇಶದಲ್ಲಿ ಪ್ರತಿದಿನ ನಿರತಂರವಾಗಿ ಚಿರತೆಗಾಗಿ ಕಾರ್ಯಾಚರಣೆ ಮಾಡುತ್ತಿದೆ.

ಹುಬ್ಬಳ್ಳಿ ನೃಪತುಂಗಬೆಟ್ಟ ಹಾಗೂ ಕವಲಗೇರಿ ಗ್ರಾಮದ ಕಬ್ಬಿನಗದ್ದೆಯಲ್ಲಿ ಸಿಕ್ಕಿರುವ ಚಿರತೆ ಮಲ(ಲದ್ದಿ)ವನ್ನು ಎರಡು ಒಂದೇ ಚಿರತೆಯದ್ದಾ ಅಥವಾ ಬೇರೆ ಬೇರೆ ಚಿರತೆಯದ್ದಾ ಎಂಬುವದನ್ನು ಗುರುತಿಸಲು ಡಿಎನ್ಎ ಪರೀಕ್ಷೆಗಾಗಿ ಈಗಾಗಲೇ ಹೈದ್ರಾಬಾದ್ ಪ್ರಯೋಗಾಲಯಕ್ಕೆ ಕಳಿಸಲಾಗಿದ್ದು, ಜಿಲ್ಲಾಡಳಿತ,ಅರಣ್ಯ ಇಲಾಖೆ ಈ ವರದಿ ಬರುವ ನಿರೀಕ್ಷೆಯಲ್ಲಿದೆ.

ಅಲ್ಲಿವರೆಗೂ ಸಾರ್ವಜನಿಕರು ಜಾಗೃತಿಯಿಂದ ಇದ್ದು,ಜಿಲ್ಲಾಡಳಿತ, ಅರಣ್ಯ ಇಲಾಖೆ, ಮಹಾನಗರ ಪಾಲಿಕೆ ನೀಡುವ ಸಲಹೆ,ಸೂಚನೆಗಳನ್ನು ಪಾಲಿಸು ವ ಮೂಲಕ ಚಿರತೆ ಕಾರ್ಯಾಚರಣೆಗೆ ಸಹಕಾರ ನೀಡಬೇಕು ಎಂದು ಜಿಲ್ಲಾಧಿಕಾರಿಗಳು ಮನವಿ ಮಾಡಿದ್ದಾರೆ.ಮತ್ತು ಪ್ರಯೋಗಾಲಯದ ವರದಿ ಬರುವವರೆಗೆ ಹುಬ್ಬಳ್ಳಿ ನೃಪತುಂಗ ಬೆಟ್ಟದ ಸುತ್ತಲಿನ ಪ್ರದೇಶದಲ್ಲಿ ಚಿರತೆ ಕಾರ್ಯಾಚರಣೆ ಮುಂದುವರಿಯಲಿದೆ ಎಂದು ಅವರು ತಿಳಿಸಿದ್ದಾರೆ.

ಸೆರೆ ಸಿಕ್ಕ ಚಿರತೆ ಇಂದು ಮರಳಿ ಕಾಡಿಗೆ ಹೌದು
ಕವಲಗೇರಿ ಗ್ರಾಮದ ಕಬ್ಬಿನಗದ್ದೆಯಲ್ಲಿ ಇಂದು ಬೆಳಿಗ್ಗೆ ಸೆರೆ ಹಿಡಿದಿರುವ ಚಿರತೆಯನ್ನು ಅರಣ್ಯ ಇಲಾಖೆ ಅಧಿಕಾರಿ ಮತ್ತು ಸಿಬ್ಬಂದಿಗಳು ಇಂದು ರಾತ್ರಿ ಸುರಕ್ಷಿತವಾಗಿ ಮರಳಿ ಕಾಡಿಗೆ ಬಿಡುತ್ತಾರೆ ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರು ಪ್ರಕಟಣೆಯಲ್ಲಿ ತಿಳಿಸಿದ್ದು ಇತ್ತ ಯಶಸ್ವಿಯಾಗಿ ಕಾರ್ಯಾಚರಣೆ ಮಾಡಿದ ಜಿಲ್ಲಾಡಳಿತ ಸೇರಿದಂತೆ ಅರಣ್ಯ ಇಲಾಖೆಯವರಿಗೂ ಹಾಗೂ ಸಹಕಾರ ನೀಡಿದ ಕವಲಗೇರಿ ಗ್ರಾಮಸ್ಥರಿಗೂ ಧಾರವಾಡ ಗ್ರಾಮೀಣ ಕ್ಷೇತ್ರದ ಶಾಸಕ ಅಮೃತ ದೇಸಾಯಿ ಅಭಿನಂದನೆ ಹೇಳಿದ್ದಾರೆ

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....