LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಸರಕಾರಿ ನೌಕರರ ಕರ್ತವ್ಯಕ್ಕೆ ತೊಂದರೆ ಆದರೆ ಸಹಿಸಲಾರೆವು ಜಂಟಿ ಸಮಾಲೋಚನ ಸಭೆಯಲ್ಲಿ ನೌಕರರ ಅಹವಾಲು ಕುರಿತು ಗಂಭೀರವಾಗಿ ಚರ್ಚೆ ಮಾಡಿ ಸಮಸ್ಯೆ ಆಲಿಸಿದ ಅಧ್ಯಕ್ಷ ಎಸ್ ಎಫ್ ಸಿದ್ದನಗೌಡರ.....

ಧಾರವಾಡ -

ಇತ್ತಿಚಿನ ದಿನಗಳಲ್ಲಿ ರಾಜ್ಯ ಸರಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿಪಡಿಸುವ,ಹಲ್ಲೆ,ದಬ್ಬಾಳಿಕೆ ಮಾಡುತ್ತಿರುವ ಘಟನೆ ಗಳು ರಾಜ್ಯದಲ್ಲಿ ನಡೆಯುತ್ತಿದ್ದು ಅವು ಧಾರವಾಡ ಜಿಲ್ಲೆ ಯಲ್ಲಿಯೂ ಮರುಕಳಿಸುತ್ತಿವೆ.ಇಂತಹ ಘಟನೆಗಳನ್ನು‌ ನೌಕರ ಸಂಘ ಸಹಿಸುವುದಿಲ್ಲ ಗಂಭೀರವಾದ ಪ್ರತಿಕ್ರಿಯೆ ತೋರಿಸಲಾಗುತ್ತದೆ ಎಂದು ಸರಕಾರಿ ನೌಕರ ಸಂಘದ ಜಿಲ್ಲಾಧ್ಯಕ್ಷ ಎಸ್.ಎಫ್.ಸಿದ್ದನಗೌಡರ ಹೇಳಿದರು.

ಜಿಲ್ಲಾ ಸರಕಾರಿ ನೌಕರ ಸಂಘದ ಸಭಾಭವನದಲ್ಲಿ ಜರುಗಿದ ಜಿಲ್ಲಾ ಕಾರ್ಯಕಾರಿಣಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಸರಕಾರಿ ನೌಕರರ ಹಿತಾಸಕ್ತಿ ಕಾಪಡಲು ಸಂಘ ಬದ್ದವಾಗಿದೆ.ಅನಾಮಧೇಯ, ಅನಧಿ ಕೃತ ವ್ಯಕ್ತಿಗಳು ಸರಕಾರಿ ಕಚೇರಿಗಳಿಗೆ ಬಂದು ನೌಕರರ ಮೇಲೆ ದಬ್ಬಾಳಿಕೆ ಮಾಡುತ್ತಿರುವ ಮತ್ತು ಸರಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸುತ್ತಿರುವ ಬಗ್ಗೆ ನೌಕರರಿಂದ ಅಹವಾಲು ಬಂದಿವೆ. ಸಂಘವು ಈ ಕುರಿತು ಗಂಭೀರವಾಗಿ ಚರ್ಚಿಸಿ, ಪ್ರತಿಭಟಿಸಲು ನಿರ್ಧರಿಸಿದೆ. ಸಂಭಂದಿಸಿದ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು ನೌಕರರ ಅಹ ವಾಲುಗಳಿಗೆ ತಕ್ಷಣ ಸ್ಪಂದಿಸಬೇಕು ಎಂದರು.

ಎಲ್ಲ ಸರಕಾರಿ ನೌಕರ ಸಮಸ್ಯೆ, ಅಹವಾಲುಗಳನ್ನು ಆಲಿಸಲು ಸರಕಾರವು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನೌಕರ ಸಂಘದ ಪ್ರತಿನಿಧಿಗಳು ಜಿಲ್ಲಾ ಮಟ್ಟದ ಅಧಿಕಾರಿ ಗಳ ಜಂಟಿ ಸಮಿತಿ ರಚಿಸಿ ಆದೇಶಿಸಿದೆ.

ಬರುವ ಜುಲೈ 18 ರಂದು ಜಿಲ್ಲಾ ಜಂಟಿ ಸಮಾಲೋಚನೆ ಸಮಿತಿ ಸಭೆ ನಿಗದಿಯಾಗಿದೆ.ಜಿಲ್ಲೆಯ ನೌಕರರು ತಮ್ಮ ದೂರುಗಳಿದ್ದಲ್ಲಿ ಜಿಲ್ಲಾ ಸಂಘದ ಕಚೇರಿಗೆ ಅಥವಾ ಜಿಲ್ಲಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು.ಇಲಾಖೆ ಮಟ್ಟದ ಸಮಸ್ಯೆಗಳನ್ನು ಸಲ್ಲಿಸಬೇಕು.ಮತ್ತು ಎಷ್ಟೊ ಸಂದರ್ಭ ದಲ್ಲಿ ನೌಕರರು ಕಚೇರಿ ಕೇಲಸದಲ್ಲಿ ಅಧಿಕಾರಿಗಳಿಂದ ಕಿರುಕುಳ ಅನುಭವಿಸುತ್ತಿರುತ್ತಾರೆ.ಅಂತಹ ವಯಕ್ತಿಕ ಸಮಸ್ಯೆಗಳಿದ್ದಲ್ಲಿ ನೌಕರರು ಸಂಘದ ಕಚೇರಿಗೆ ನೇರವಾಗಿ ಸಲ್ಲಿಸಬೇಕು.ಸಂಘದ ಅಧ್ಯಕ್ಷರ,ಪ್ರಧಾನ ಕಾರ್ಯದರ್ಶಿ ಗಳೊಂದಿಗೆ ಮುಕ್ತವಾಗಿ ತಮ್ಮ ಅಭಿಪ್ರಾಯ ಹಂಚಿಕೊಳ್ಳ ಬೇಕು.ಈ ಕುರಿತು ಜಂಟಿ ಸಭೆಯಲ್ಲಿ ಚರ್ಚಿಸಲಾಗುವುದು. ಸರಕಾರಿ ನೌಕರರು ಯಾವುದೇ ವ್ಯಕ್ತಿ ಅಧಿಕಾರಿಗಳಿಗೆ ಹೆದರದೆ ಮುಕ್ತವಾಗಿ ತಮ್ಮ ಅನಿಸಿಕೆ ಸಮಸ್ಯೆಗಳನ್ನು ಸಂಘದ ಕಚೇರಿಗೆ ಜುಲೈ 15 ರೊಳಗೆ ಸಲ್ಲಿಸಬೇಕು ಎಂದು ಅವರು ತಿಳಿಸಿದರು.

ನೌಕರ ಸಂಘದ ಪದಾಧಿಕಾರಿಗಳು ತಮ್ಮ ಇಲಾಖೆ ಸಿಬ್ಬಂದಿಗಳ ನೋವು, ಸಮಸ್ಯೆಗಳಿಗೆ ಸ್ಪಂದಿಸಬೇಕು. ಜಿಲ್ಲಾ ಘಟಕ ನೌಕರ ಬೆಂಬಲಕ್ಕಿದೆ ಎಂದು ಅಧ್ಯಕ್ಷ ಎಸ್.ಎಫ್.ಸಿದ್ದನಗೌಡರ ತಿಳಿಸಿದರು.

ಎಸ್.ಎಸ್.ಎಲ್.ಸಿ.ಮತ್ತು ದ್ವೀತಿಯ ಪಿಯುಸಿ ಪರೀಕ್ಷೆ ಯಲ್ಲಿ ಹೆಚ್ಚು ಅಂಕ ಗಳಿಸಿದ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಮಾಡಲು ಸಿದ್ದತೆ ಮಾಡಿಕೊಳ್ಳ ಲಾಗುತ್ತಿದೆ.ಅರ್ಹರು ಅರ್ಜಿ ಸಲ್ಲಿಸಬೇಕು.ಮತ್ತು ಇದೇ ಸಂದರ್ಭದಲ್ಲಿ ಪ್ರಸಕ್ತ ಸಾಲಿನ ನೌಕರ ಸಂಘದ ಜಿಲ್ಲಾ ಸದಸ್ಯರ ಸರ್ವ ಸಾಧರಣ ಸಭೆ ಸಹ ಜರುಗಿಸಲಾಗುವುದು ಎಂದು ಅವರು ತಿಳಿಸಿದರು.

ಸಭೆಯಲ್ಲಿ ಸರಕಾರಿ ನೌಕರರಿಗೆ ಜಾರಿಯಾಗಿರುವ ಆರೋಗ್ಯ ಸಂಜೀವಿನಿ ಯೋಜನೆ, ಎನ್.ಪಿ.ಎಸ್ ಪಿಂಚಣಿ ಯೋಜನೆ, ಸರಕಾರಿ ಕಾರ್ಯಕ್ರಮಗಳಿಗೆ ಸಂಘದ ಪದಾಧಿಕಾರಿಗಳ ನಿಯೋಜನೆ ಕುರಿತು ಗಂಭೀರ ಚರ್ಚೆ ಮಾಡಲಾಯಿತು.

ಸಂಘದ ಪದಾಧಿಕಾರಿಗಳಾದ ಡಾ.ಸುರೇಶ ಹಿರೇಮಠ, ಕೆ.ಶ್ರೀಧರ, ಮಲ್ಲಿಕಾರ್ಜುನ ಸೊಲಗಿ, ಫಿರೋಜ ಎಫ್. ಗುಡೆನಕಟ್ಟಿ, ರವಿಕುಮಾರ, ಆರ್.ಎಂ.ಕಂಟೆಪ್ಪಗೌಡರ, ರಾಜೇಶ ಕೊನರಡ್ಡಿ ಹಾಗೂ ಇತರ ಪದಾಧಿಕಾರಿಗಳು ಚರ್ಚೆಯಲ್ಲಿ ಭಾಗವಹಿಸಿದ್ದರು.

ಸಂಘದ ಪ್ರಧಾನ ಕಾರ್ಯದರ್ಶಿ ಎಸ್.ಜಿ. ಸುಬ್ಬಾಪುರ ಮಠ ಸ್ವಾಗತಿಸಿ,ಸಭೆಯಲ್ಲಿ ಹಿಂದಿನ ಸಭೆಯ ಠರಾವು ಮಂಡಿಸಿದರು.

ಗೌರವಾಧ್ಯಕ್ಷ ರಮೇಶ ಲಿಂಗದಾಳ ಅವರು ಈಚೆಗೆ ನಿಧನರಾದ ಸಂಘದ ಸಿಪಾಯಿ ಚನ್ನಪ್ಪ ಅವರ ಕುರಿತು ಮಾತನಾಡಿ, ಶೃಂಧಾಜಲಿ ಸಲ್ಲಿಸಿದರು.

ರಾಜ್ಯ ಪರಿಷತ್ ಸದಸ್ಯ ದೇವಿದಾಸ ಶಾಂತಿಕರ ಪ್ರಾಸ್ತಾವಿಕ ವಾಗಿ ಮಾತನಾಡಿದರು.ಖಜಾಂಚಿ ರಾಜಶೇಖರ ಬಾಣದ ಸಂಘದ ಅಡಿಟ್ ವರದಿ ಮಂಡಿಸಿದರು.ಕಾರ್ಯದರ್ಶಿ ಮಂಜುನಾಥ ಯಡಹಳ್ಳಿ ವಂದಿಸಿ ಸಭೆ ನಿರೂಪಿಸಿದರು.

ಜಿಲ್ಲೆಯ ಸುಮಾರು 30 ಕ್ಕೂ ಹೆಚ್ಚು ಇಲಾಖೆಗಳ ಸಂಘದ ಪ್ರತಿನಿಧಿಗಳು ಕಾರ್ಯಕಾರಿ ಸಮಿತಿ ಸಭೆಯಲ್ಲಿ ಭಾಗವಹಿ ಸಿದ್ದರು.


Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...