LIVE TV LocalCrimeNationalInternationalPoliticsEducationTechnologyEntertainmentSportsFeature
State News

PST ಶಿಕ್ಷಕರ ಅನ್ಯಾಯದ ವಿರುದ್ದ ಸಿಡಿದೆದ್ದ ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ - ರಾಷ್ಟ್ರೀಯ ಅಧ್ಯಕ್ಷ ಡಾ.ಲತಾ.ಎಸ್.ಮುಳ್ಳೂರ ತಗೆದುಕೊಡರು ಗಟ್ಟಿ ನಿರ್ಧಾರ......

ಧಾರವಾಡ -

ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ(ರಿ) ರಾಜ್ಯಘಟಕ- ಧಾರವಾಡ ವತಿಯಿಂದ ರಾಜ್ಯದ ಪಿಎಸ್ ಟಿ ಶಿಕ್ಷಕರ ಸಮಸ್ಯೆ ಕುರಿತು ಗಟ್ಟಿ ಯಾದ ನಿರ್ಧಾರ ವನ್ನು ತಗೆದುಕೊಳ್ಳಲಾಗಿದೆ ಹೌದು ಅಂಚೆ ಪತ್ರ ಚಳುವಳಿ ಮತ್ತುಭಿ ತ್ತಿ ಪತ್ರ ಪ್ರದರ್ಶನದ ಚಳುವಳಿಗೆ ಸಿದ್ಧತೆಯನ್ನು ಮಾಡಿ ಕೊಳ್ಳಲಾಗಿದೆ.

ರಾಜ್ಯದ ಸೇವಾನಿರತ ಸರ್ಕಾರಿ ಪ್ರಾಥಮಿಕ ಪದವೀಧರ (ಪಿ‌ ಎಸ್ ಟಿ) ಶಿಕ್ಷಕ ಶಿಕ್ಷಕಿಯರಿ ಗಾಗಿರುವ ಅನ್ಯಾಯದ ಬಗ್ಗೆ ಸರ್ಕಾರದ ಗಮನ ಸೆಳೆಯಲು* ರಾಜ್ಯಾದ್ಯಂತ ಅಂಚೆ ಪತ್ರ ಚಳುವಳಿ ಹಾಗೂ ಭಿತ್ತಿ ಪತ್ರ ಪ್ರದರ್ಶನ ಚಳುವಳಿ ಹಮ್ಮಿ ಕೊಳ್ಳಲು ಸಿದ್ದತೆ ನಡೆಸಿದೆ.

ಶಾಲಾ ಶಿಕ್ಷಕರ ನೇಮಕಾತಿ ನಿಯಮಾವಳಿಗೆ ಸಂಬಂಧಿಸಿದಂತೆ 2017 ರಲ್ಲಿ ಜಾರಿಗೆ ಬಂದ ಹೊಸ ಸಿ ಅಂಡ್ ಆರ್ ನಿಯಮದಲ್ಲಿ (ಜಿ ಪಿ.ಟಿ 6-8ನೇ ತರಗತಿ ) ಪದವೀಧರ ಪ್ರಾಥಮಿಕ ಶಿಕ್ಷಕರು ಎಂಬ ಹೊಸ ವೃಂದವನ್ನು ಸೃಷ್ಟಿ ಮಾಡಿ ಹೊಸ ನೇಮಕಾತಿ ಮಾಡುತ್ತಿರುವುದರಿಂದ ಹಾಲಿ ಸರ್ಕಾರಿ ಶಾಲೆಗಳಲ್ಲಿ ಪದವಿಯನ್ನು ಹೊಂದಿ ರುವ ಸೇವಾನಿರತ ಶಿಕ್ಷಕರನ್ನು ಕಡೆಗಣಿಸಿರುವು ದಲ್ಲದೇ

1-8 ನೇ ತರಗತಿಗೆ ನೇಮಕಗೊಂಡು ಬೋಧಿ ಸುತಿದ್ದ ಅವರಿಗೆ 1-5 ನೇ ತರಗತಿಗೆ ಸೀಮಿತ ಮಾಡಿ ಹಿಂಬಡ್ತಿ ನೀಡಿದಂತಾಗಿದೆ.ಹೊಸ ವೃಂದವಾದ ಜಿಪಿಟಿ ಶಿಕ್ಷಕರಿಗೆ ಇರುವಂತೆಯೇ ಸರಿಸಮಾನ ವಿದ್ಯಾರ್ಹತೆ ಪಿ ಎಸ್ ಟಿ ಶಿಕ್ಷಕರೂ ಹೊಂದಿರುವುದಲ್ಲದೆ, ಬಹಳಷ್ಟು ಸೇವಾ‌ ಅನು ಭವ ಕೂಡ ಇದೆ. ಆದರೂ

ಅವರನ್ನು 1-5 ನೇ ತರಗತಿಗೆ ಸೀಮಿತ ಮಾಡಿ ಹಿಂಬಡ್ತಿ ಮಾಡಿರುವುದು ಬಹು ದೊಡ್ಡ ಅನ್ಯಾಯವಾಗಿದೆ.ಈ ಸಮಸ್ಯೆಯನ್ನು ಸರಿಪಡಿಸಿ ಅವರಿಗೆ ಸೂಕ್ತ ನ್ಯಾಯ ಒದಗಿಸುವಂತೆ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಯ ಸೇವಾನಿರತ ಮತ್ತು ಪದವಿಯನ್ನು ಪಡೆದಿರುವ ಪಿ.ಎಸ್.ಟಿ ಶಿಕ್ಷಕ ಶಿಕ್ಷಕಿಯರ ಪರವಾಗಿ ನಮ್ಮ ಸಂಘಟನೆಯ ಪ್ರತೀ

ಜಿಲ್ಲೆ ಪ್ರತೀ ತಾಲ್ಲೂಕು ಘಟಕಗಳಿಂದ
ರಾಜ್ಯದ ಮುಖ್ಯಮಂತ್ರಿಗಳಿಗೆ, ಶಾಲಾ ಶಿಕ್ಷಣ ಸಚಿವರಿಗೆ ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಮನವಿ ಪತ್ರವನ್ನು ರಿಜಿಸ್ಟರ್
ಅಂಚೆ ಮೂಲಕ ರವಾನಿಸುವ ಮೂಲಕ ಹಾಗೂ ಅಯಾಯ ತಾಲ್ಲೂಕು ವಿಧಾನಸಭಾ ಕ್ಷೇತ್ರದ ಶಾಸಕರುಗಳಿಗೂ ಸಹಾ ಮನವಿ ಪತ್ರ ಸಲ್ಲಿಸುವ ಮೂಲಕ ಸರ್ಕಾರದ ಗಮನ ಸೆಳೆಯಲು ಅಂಚೆ ಪತ್ರ ಚಳುವಳಿಯನ್ನು ರಾಜ್ಯಾದ್ಯಂತ ಹಮ್ಮಿ ಕೊಳ್ಳಲಾಗುವುದು

ಎಂದು ಡಾ.ಲತಾ.ಎಸ್. ಮುಳ್ಳೂರ ರಾಷ್ಟ್ರೀಯ ಅಧ್ಯಕ್ಷರು ಸಾವಿತ್ರಿಬಾಯಿ ಫುಲೆ ರಾಷ್ಟ್ರೀಯ ಶಿಕ್ಷಕಿಯರ ಫೆಡರೇಶನ್ (ರಿ)ನವದೆಹಲಿ ಹಾಗೂ ಸಂಸ್ಥಾಪಕ ರಾಜ್ಯಾಧ್ಯಕ್ಷರು ಕರ್ನಾಟಕ ಸಾವಿತ್ರಿ ಬಾಯಿ ಫುಲೆ ಶಿಕ್ಷಕಿಯರ ಸಂಘ(ರಿ)ರಾಜ್ಯ ಘಟಕ ಧಾರವಾಡರವರು ತಿಳಿಸಿದ್ದಾರೆ.

ಅಲ್ಲದೇ ಇದರ ಸಂಬಂಧ ಭಿತ್ತಿ ಪತ್ರ ಚಳುವಳಿ ಕೂಡ ಹಮ್ಮಿಕೊಳ್ಳಲಾಗುತ್ತಿದ್ದು, ತಮಗಾಗಿರುವ ಅನ್ಯಾಯವನ್ನು ಅರ್ಥೈಸುವಂತ ಒಂದು ಭಿತ್ತಿ ಪತ್ರ ಪ್ರದರ್ಶನ ಮಾಡುವ ಮೂಲಕ ಅದರ ಪೋಟೊ ತೆಗೆದು ಮಾನ್ಯ ಮುಖ್ಯಮಂತ್ರಿಗಳ , ಶಿಕ್ಷಣ ಸಚಿವರುಗಳ ಮತ್ತು ಸ್ಥಳೀಯ ಶಾಸಕ ರುಗಳ ಫೇಸ್ಬುಕ್,ಟ್ವಿಟರ್,ಎಕ್ಸ್ ,ಮೊದಲಾದ ಸಾಮಾಜಿಕ ಅಪ್ಲಿಕೇಶನ್ಗಳಲ್ಲಿ ಟ್ಯಾಗ್ ಮಾಡುವ ಮೂಲಕ ಸರ್ಕಾರದ ಗಮನ ಸೆಳೆಯುವ ಯೋಚನೆ ಕೂಡ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಧಾರವಾಡ.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....