LIVE TV LocalCrimeNationalInternationalPoliticsEducationTechnologyEntertainmentSportsFeature
State News

ದಸರಾ ರಜೆಯ ಮಾರ್ಗಸೂಚಿ ಬಿಡುಗಡೆ - ದಸರಾ ರಜೆಯ ಹೊಸದೊಂದು ಮಾಹಿತಿ.....

ಬೆಂಗಳೂರು -

ದಸರಾ ಹಬ್ಬದ ಆಚರಣೆಯ ಸಿಧದತೆಯ ನಡುವೆ ಸಾಂಸ್ಕೃತಿ ನಗರಿ ಮೈಸೂರಿನಲ್ಲಿ 2024ರ ದಸರಾ ಮಹೋತ್ಸವಕ್ಕೆ ಅಕ್ಟೋಬರ್ 3ರಂದು ಚಾಲನೆ ದೊರೆಯಲಿದೆ ಅಕ್ಟೋಬರ್ 12ರ ಶನಿವಾರ ವಿಶ್ವವಿಖ್ಯಾತ ಜಂಬೂ ಸವಾರಿ ನಡೆಯಲಿದ್ದು ದಸರಾಗೆ ತೆರೆ ಬೀಳಲಿದೆ.ಇನ್ನೂ ಇತ್ತ ರಾಜ್ಯದ ಸರ್ಕಾರಿ ಶಾಲೆಗಳ ದಸರಾ ರಜೆಗಳ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.

ಅಕ್ಟೋಬರ್ 3ರಿಂದ ಅಕ್ಟೋಬರ್ 20ರ ತನಕ ರಾಜ್ಯದ ಸರ್ಕಾರಿ ಶಾಲೆಗಳಿಗೆ ದಸರಾ ರಜೆಗಳು ಇರುತ್ತದೆ ಅಕ್ಟೋಬರ್ 21ರಿಂದಲೇ ತರಗತಿಗಳು ಪುನಃ ಆರಂಭವಾಗುತ್ತದೆ ಎಂದು ಶಿಕ್ಷಣ ಇಲಾಖೆಯ ಅಧಿಕಾರಿಗಳು ಹೇಳಿದ್ದಾರೆ. ಅಕ್ಟೋಬರ್‌ 2ರಂದು ಗಾಂಧಿ ಜಯಂತಿ ಆಚರಣೆ ಬಳಿಕ ದಸರಾ ರಜೆಗಳು ಆರಂಭವಾಗಲಿದೆ.

ಕರ್ನಾಟಕದ ಎಲ್ಲಾ ಸರ್ಕಾರಿ ಶಾಲೆಗಳು, ಅನುದಾನಿತ ಮತ್ತು ಅನುದಾನ ರಹಿತ ಖಾಸಗಿ ಶಾಲೆಗಳಿಗೆ ದಸರಾ ರಜೆ ಇರುತ್ತದೆ ಅಕ್ಟೋಬರ್ 20ರ ತನಕ ದಸರಾ ರಜೆ ಇರಲಿದ್ದು ಅಕ್ಟೋಬರ್ 21ರ ಸೋಮವಾರ ರಜೆ ಮುಗಿದು, ತರಗತಿಗಳು ಆರಂಭವಾಗುತ್ತದೆ.ಶಿಕ್ಷಣ ಇಲಾಖೆ ಪ್ರತಿ ಶೈಕ್ಷಣಿಕ ವರ್ಷದ ಆರಂಭದಲ್ಲಿಯೇ ಶಾಲೆಗಳ ದಸರಾ ರಜೆ ವೇಳಾಪಟ್ಟಿಯನ್ನು ಪ್ರಕಟಿಸುತ್ತದೆ.

ದಸರಾ ಹತ್ತಿರವಾಗಿರುವುದರಿಂದ ಮತ್ತೊಮ್ಮೆ ದಸರಾ ರಜೆ ಕುರಿತು ಪೋಷಕರಿಗೆ, ಶಾಲೆಗಳಿಗೆ ಮಾಹಿತಿಯನ್ನು ನೀಡಲಾಗಿದೆ.ದಸರಾ ರಜೆ ಸಂದರ್ಭದಲ್ಲಿ ಶಿಕ್ಷಕರು, ವಿದ್ಯಾರ್ಥಿಗಳು ಪ್ರವಾಸ ಕೈಗೊಳ್ಳುತ್ತಾರೆ. ಆದ್ದರಿಂದ ವಿವಿಧ ದಸರಾ ಪ್ಯಾಕೇಜ್‌ಗಳನ್ನು ಸಹ ಘೋಷಣೆ ಮಾಡಲಾಗು ತ್ತದೆ. ಆದ್ದರಿಂದ ದಸರಾ ರಜೆಯ ದಿನಾಂಕ ತಿಳಿದುಕೊಳ್ಳಲು ಪೋಷಕರು, ವಿದ್ಯಾರ್ಥಿಗಳು ಕಾದು ಕುಳಿತಿರುತ್ತಾರೆ.

ದಸರಾ ರಜೆಗಳು ಮುಗಿಯುತ್ತಿದ್ದಂತೆಯೇ ಅರ್ಧ ವಾರ್ಷಿಕ ಪರೀಕ್ಷೆಗಳು ನಡೆಯುತ್ತವೆ.ಕೆಲವು ವರ್ಷ ಮೊದಲು ಘೋಷಣೆ ಮಾಡಿದ ಶೈಕ್ಷಣಿಕ ವೇಳಾಪಟ್ಟಿಯಲ್ಲಿ ಕೆಲವು ಬದಲಾವಣೆಗಳನ್ನು ಮಾಡಿ ದಸರಾ ರಜೆಯನ್ನು ಕಡಿತ ಮಾಡಿರು ವುದು ಸಹ ಇದೆ. ಆದರೆ ಈ ಬಾರಿ ಯಾವುದೇ ಬದಲಾವಣೆ ಇಲ್ಲ. ಮೊದಲು ನಿಗದಿ ಮಾಡಿದಂತೆ ದಸರಾ ರಜೆಗಳು ಇರಲಿವೆ. ಇದರಿಂದ ವಿದ್ಯಾರ್ಥಿ ಗಳು, ಶಿಕ್ಷಕರು ಸಂತಸಗೊಂಡಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು......

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...