ಬೆಂಗಳೂರು -
ಈದ್ ಮಿಲಾದ್ ಹಿನ್ನಲೆಯಲ್ಲಿ ಆಗಸ್ಟ್.26 ರಂದು ರಾಜ್ಯಾಧ್ಯಂತ 'ಸಾರ್ವತ್ರಿಕ ರಜೆ' ಘೋಷಣೆ ಮಾಡ ಲಾಗಿದೆ ಹೌದು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಈದ್ ಮಿಲಾದ್ ಹಬ್ಬದ ಸಾರ್ವತ್ರಿಕ ರಜೆಯನ್ನು ದಿನಾಂಕ: 26.08.2026ರ ಬದಲಾಗಿ ದಿನಾಂಕ: 25.08.2026ರಂದೇ ಘೋಷಿಸಲು ಆಯಾ ಜಿಲ್ಲಾಧಿಕಾರಿಗಳಿಗೆ ರಾಜ್ಯ ಸರ್ಕಾರ ಅಧಿಕೃತ ನಿರ್ದೇಶನ ನೀಡಿದೆ.
ರಾಜ್ಯ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (DPAR) ಈ ಹಿಂದೆ ಹೊರಡಿಸಿದ್ದ ಅಧಿಸೂಚನೆಯಲ್ಲಿ ಆಗಸ್ಟ್ 26ರಂದು ರಾಜ್ಯಾದ್ಯಂತ ಈದ್ ಮಿಲಾದ್ ಸಾರ್ವತ್ರಿಕ ರಜೆ ಘೋಷಿಸಲಾಗಿತ್ತು. ಆದರೆ ಸ್ಥಳೀಯವಾಗಿ ಚಂದ್ರದರ್ಶನದ ಆಧಾರದ ಮೇಲೆ ಹಬ್ಬ ಆಚರಿಸುವ ಹಿನ್ನೆಲೆಯಲ್ಲಿ, ರಜಾ ದಿನ ವನ್ನು ಆಗಸ್ಟ್ 25ಕ್ಕೆ ಬದಲಾಯಿಸುವಂತೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾಧಿಕಾರಿಗಳು ಸರ್ಕಾರಕ್ಕೆ ಪತ್ರ ಬರೆದು ಪ್ರಸ್ತಾವನೆ ಸಲ್ಲಿಸಿದ್ದರು.

ಜಿಲ್ಲಾಧಿಕಾರಿಗಳ ಕೋರಿಕೆಯನ್ನು ಪರಿಗಣಿಸಿರುವ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಗಳು, "ಸ್ಥಳೀಯ ಪರಿಸ್ಥಿತಿಗಳಿಗನುಸಾರವಾಗಿ ಆಗಸ್ಟ್ 26ರ ಬದಲಿಗೆ ಆಗಸ್ಟ್ 25ರಂದು ಸಾರ್ವತ್ರಿಕ ರಜೆ ಘೋಷಿಸುವ ಕುರಿತು ಜಿಲ್ಲಾಧಿಕಾರಿಗಳ ಹಂತದಲ್ಲೇ ನಿಯಮಾ ನುಸಾರ ಸೂಕ್ತ ತೀರ್ಮಾನ ಕೈಗೊಳ್ಳಬೇಕು," ಎಂದು ಉಭಯ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಸ್ಪಷ್ಟ ಸೂಚನೆ ರವಾನಿಸಿದ್ದಾರೆ.
ಇದರೊಂದಿಗೆ ಕರಾವಳಿ ಭಾಗದಲ್ಲಿ ಆಗಸ್ಟ್ 25 ರಂದೇ ಸರ್ಕಾರಿ ಕಚೇರಿಗಳು, ಶಾಲೆ-ಕಾಲೇಜುಗಳಿಗೆ ಈದ್ ಮಿಲಾದ್ ರಜೆ ದೊರೆಯುವುದು ಖಚಿತವಾಗಿದೆ
ಸುದ್ದಿ ಸಂತೆ ನ್ಯೂಸ್ ಬೆಂಗಳೂರು.....