LIVE TV LocalCrimeNationalInternationalPoliticsEducationTechnologyEntertainmentSportsFeature
State News

ಇಬ್ಬರೂ ಶಾಸಕರು ಉಚ್ಚಾಟನೆ ಇಬ್ಬರೂ ಶಾಸಕ ರಿಗೆ ಬಿಸಿ ಮುಟ್ಟಿಸಿದ ಸಮಿತಿ ಸಭೆ.....

ಬೆಂಗಳೂರು -

ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಜೂನ್‌ 10ರಂದು ನಡೆದ ಚುನಾವಣೆಯಲ್ಲಿ ಪಕ್ಷದ ವಿಪ್‌ ಉಲ್ಲಂಘಿಸಿ ಅಡ್ಡ ಮತದಾನ ಮಾಡಿದ ಆರೋಪದ ಮೇಲೆ ಶಾಸಕರಾದ ಎಸ್‌.ಆರ್‌. ಶ್ರೀನಿವಾಸ್‌ (ಗುಬ್ಬಿ) ಮತ್ತು ಕೆ. ಶ್ರೀನಿವಾಸ ಗೌಡ ಅವರನ್ನು ಜೆಡಿಎಸ್‌ನಿಂದ ಉಚ್ಛಾಟನೆ ಮಾಡಲಾ ಗಿದೆ.ಇಬ್ಬರೂ ಶಾಸಕರನ್ನು ಪಕ್ಷದಿಂದ ಉಚ್ಛಾಟನೆ ಮಾಡಲು ಶಾಸಕ ಬಂಡೆಪ್ಪ ಕಾಶೆಂಪುರ ಅಧ್ಯಕ್ಷತೆಯಲ್ಲಿ ನಡೆದ ಜೆಡಿಎಸ್‌ ರಾಜ್ಯ ಘಟಕದ ಪ್ರಮುಖರ ಸಮಿತಿ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿತ್ತು.ಈ ನಿರ್ಣಯಕ್ಕೆ ಪೂರಕವಾಗಿ ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷ ಸಿ.ಎಂ. ಇಬ್ರಾಹಿಂ ಆದೇಶ ಹೊರಡಿಸಿದ್ದಾರೆ.

ರಾಜ್ಯಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಡಿ. ಕುಪೇಂದ್ರ ರೆಡ್ಡಿ ಅವರಿಗೆ ಮತ ಚಲಾಯಿಸಬೇಕೆಂಬ ವಿಪ್‌ ಅನ್ನು ಇಬ್ಬರೂ ಉಲ್ಲಂಘಿಸಿದ್ದಾರೆ.ಗುಬ್ಬಿ ಶ್ರೀನಿವಾಸ್‌ ಅವರು ತಮ್ಮ ಪ್ರಥಮ ಪ್ರಾಶಸ್ತ್ಯದ ಮತವನ್ನು ಬಿಜೆಪಿ ಅಭ್ಯರ್ಥಿ ಲಹರ್‌ ಸಿಂಗ್‌ ಅವರಿಗೆ ಮತ್ತು ದ್ವಿತೀಯ ಪ್ರಾಶಸ್ತ್ಯದ ಮತವನ್ನು ಕಾಂಗ್ರೆಸ್‌ ಅಭ್ಯರ್ಥಿ ಮನ್ಸೂರ್‌ ಅಲಿ ಖಾನ್‌ ಅವರಿಗೆ ನೀಡಿದ್ದರು.ಕೆ.ಶ್ರೀನಿವಾಸ ಗೌಡ ತಮ್ಮ ಪ್ರಥಮ ಪ್ರಾಶಸ್ತ್ಯದ ಮತವನ್ನು ಕಾಂಗ್ರೆಸ್‌ ಅಭ್ಯರ್ಥಿ ಮನ್ಸೂರ್‌ ಅಲಿ ಖಾನ್‌ಗೆ ಹಾಗೂ ದ್ವಿತೀಯ ಪ್ರಾಶಸ್ತ್ಯದ ಮತವನ್ನು ಬಿಜೆ‍ಪಿಯ ಲಹರ್‌ ಸಿಂಗ್‌ ಅವರಿಗೆ ನೀಡಿದ್ದರು ಎಂಬುದಾಗಿ ಜೆಡಿಎಸ್‌ ಮತಗಟ್ಟೆ ಏಜೆಂಟ್‌ ಎಚ್‌.ಡಿ. ರೇವಣ್ಣ ವರದಿ ನೀಡಿದ್ದಾರೆ ಎಂಬ ಉಲ್ಲೇಖ ಉಚ್ಛಾಟನೆ ಆದೇಶದಲ್ಲಿದೆ.ಪಕ್ಷಾಂತರ ನಿಷೇಧ ಕಾಯ್ದೆ ಅಡಿಯಲ್ಲಿ ಇಬ್ಬರೂ ಶಾಸಕರನ್ನು ಅನರ್ಹಗೊಳಿಸುವಂತೆ ವಿಧಾನಸಭೆಯ ಅಧ್ಯಕ್ಷರಿಗೆ ದೂರು ನೀಡಲು ನಿರ್ಣಯ ಕೈಗೊಳ್ಳಲಾಗಿದೆ. ಎರಡು ದಿನಗಳೊಳಗೆ ದೂರು ಸಲ್ಲಿಸುತ್ತೇವೆ' ಎಂದು ಬಂಡೆಪ್ಪ ಕಾಶೆಂಪುರ ಸುದ್ದಿಗಾರರಿಗೆ ತಿಳಿಸಿದರು.ಪಕ್ಷಾಂತರ ನಿಷೇಧ ಕಾಯ್ದೆ ಅಡಿಯಲ್ಲಿ ಇಬ್ಬರೂ ಶಾಸಕರನ್ನು ಅನರ್ಹಗೊಳಿಸುವಂತೆ ವಿಧಾನ ಸಭೆಯ ಅಧ್ಯಕ್ಷರಿಗೆ ದೂರು ನೀಡಲು ನಿರ್ಣಯ ಕೈಗೊಳ್ಳ ಲಾಗಿದೆ. ಎರಡು ದಿನಗಳೊಳಗೆ ದೂರು ಸಲ್ಲಿಸುತ್ತೇವೆ' ಎಂದು ಬಂಡೆಪ್ಪ ಕಾಶೆಂಪುರ ಸುದ್ದಿಗಾರರಿಗೆ ತಿಳಿಸಿದರು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ. ದೇವೇಗೌಡ, ಶಾಸಕ ಎಚ್‌.ಡಿ. ರೇವಣ್ಣ ಸೇರಿದಂತೆ ಹಲವು ನಾಯಕರು ಪ್ರಮುಖರ ಸಮಿತಿ ಸಭೆಯಲ್ಲಿ ಪಾಲ್ಗೊಂಡಿದ್ದರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....