LIVE TV LocalCrimeNationalInternationalPoliticsEducationTechnologyEntertainmentSportsFeature
State News

ಪೊಲೀಸರ ಹೆಸರಿನಲ್ಲಿ ಸುಲಿಗೆ ನಕಲಿ ಪೊಲೀಸಪ್ಪನ ಬಂಧನ

ಬೆಂಗಳೂರು -

ಪೊಲೀಸರ ಹೆಸರಿನಲ್ಲಿ ಕಂಡ ಕಂಡವರ ಸುಲಿಗೆ ಮಾಡುತ್ತಿದ್ದ ನಕಲಿ ಪೊಲೀಸ್ ನನ್ನು ಪೊಲೀಸರು ಬಂಧಿಸಿದ್ದಾರೆ‌. ಹೌದು ಇಂಥದೊಂದು ಪ್ರಕರಣ ಬೆಂಗಳೂರಿನಲ್ಲಿ ನಡೆದಿದೆ. ಪೊಲೀಸ್ ಆಗುವ ಕನಸು ಕಂಡ ಯುವಕ ಪರೀಕ್ಷೆ ಬರೆದರೂ ಉತ್ತೀರ್ಣನಾಗದೇ ಪೊಲೀಸ್ ಸಮವಸ್ತ್ರದಲ್ಲಿ ಸುಲಿಗೆಗೆ ಇಳಿದು ಜೈಲುಪಾಲಾಗಿದ್ದಾನೆ. ಈ ನಕಲಿ ಪೊಲೀಸ್ ನನ್ನು ಬಾಗಲಗುಂಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ.ಮೂಲತಃ ಕೊಪ್ಪಳ ಮೂಲದವನಾದ ಬಾಗಲಗುಂಟೆ ನಿವಾಸಿ ಕೀರಪ್ಪ ಬಂಧಿತ ನಕಲಿ ಪೊಲೀಸ್ ನಾಗಿದ್ದಾನೆ.

ಈತ ಪೊಲೀಸ್ ಕಾನ್‌ಸ್ಟೇಬಲ್ ಆಗಬೇಕೆಂಬ ಆಸೆ ಇಟ್ಟುಕೊಂಡು ಶಿಕ್ಷಣ ಮುಗಿಸಿ ಪರೀಕ್ಷೆ ಬರೆದಿದ್ದ. ಆದರೆ, ಈತ ಪರೀಕ್ಷೆಯಲ್ಲಿ ಉತ್ತೀರ್ಣನಾಗಿರಲಿಲ್ಲ. ಆದರೆ, ಈತನ ಪಾಲಕರು ಮಗ ಪೊಲೀಸ್ ಆಗಿ ಸಮಾಜ ಸೇವೆ ಮಾಡಬೇಕು ಎಂಬ ಕನಸು ಕಂಡಿದ್ದರು. ಇತ್ತ ಪರೀಕ್ಷೆಯಲ್ಲಿ ಅನುತ್ತೀರ್ಣನಾದ ವಿಚಾರ ಮನೆಯಲ್ಲಿ ತಿಳಿಸಲು ಮುಜುಗರಗೊಂಡ ಕೀರಪ್ಪ, ತಾನು ಪೊಲೀಸ್ ಸಶಸ್ತ್ರ ಮೀಸಲು ಪಡೆಯ ಕಾನ್‌ಸ್ಟೇಬಲ್ ಆಗಿ ಆಯ್ಕೆಯಾಗಿ ರುವುದಾಗಿ ಮನೆಯಲ್ಲಿ ಸುಳ್ಳು ಹೇಳಿದ್ದನಂತೆ.

ಕಳೆದ 2 ತಿಂಗಳ ಹಿಂದೆ ಪೊಲೀಸ್ ಧಿರಿಸನ್ನು ಧರಿಸಿ ಬೆಂಗಳೂರಿನ ಕೆ.ಪಿ.ಅಗ್ರಹಾರದಲ್ಲಿ ತನ್ನದೇ ಪಲ್ಸರ್ ಬೈಕ್‌ನಲ್ಲಿ ಓಡಾಡುತ್ತಿದ್ದ. ತಾನು ವಾಸವಿದ್ದ ಬಾಡಿಗೆ ಮನೆಯ ಮಾಲೀಕನಿಗೂ ಪೊಲೀಸ್ ಕಾನ್‌ಸ್ಟೇಬಲ್ ಎಂದು ನಂಬಿಸಿದ್ದ. ಜೀವನ ನಿರ್ವಹಣೆಗಾಗಿ ಬೆಳಗ್ಗೆ ಪಿಜಿಗಳು, ಸಣ್ಣ ಅಂಗಡಿ ಮಾಲೀಕರು ಹಾಗೂ ಆಮಾಯಕರನ್ನು ಗುರುತಿಸಿ ಪೊಲೀಸರ ಹೆಸರಿನಲ್ಲಿ ಸುಲಿಗೆ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಟಿ.ದಾಸರಹಳ್ಳಿ ನಿವಾಸಿ ಸುರೇಶ್ ಜಾಲಹಳ್ಳಿ ಕ್ರಾಸ್ ಬಳಿ ಪುರುಷರ ಪಿ.ಜಿ ನಡೆಸುತ್ತಿದ್ದು, ಇಲ್ಲಿ 25 ಮಂದಿ ವಾಸಿಸುತ್ತಿದ್ದಾರೆ. ಪ್ರತಿ ತಿಂಗಳು ಒಬ್ಬರಿಂದ 5 ಸಾವಿರ ರೂ. ಪಡೆಯುತ್ತಿದ್ದರು. ಎಲ್ಲ ಕಾನೂನು ನಿಯಮಗಳನ್ನು ಪಾಲಿಸಿಯೇ ಪಿ.ಜಿ. ನಡೆಸಲಾಗುತ್ತಿತ್ತು. ಜ. 26ರಂದು ರಾತ್ರಿ ಸುರೇಶ್ ಪಿಜಿಯ ಕೆಲಸ ಮುಗಿಸಿ ಮನೆಗೆ ಹೋಗಲು ಮುಂದಾದ ವೇಳೆ ಪಲ್ಸರ್ ಬೈಕ್‌ನಲ್ಲಿ ಪೊಲೀಸ್ ಸೋಗಿನಲ್ಲಿ ಇವರ ಬಳಿ ಬಂದ ಆರೋಪಿ ಕೀರಪ್ಪ ಪೊಲೀಸ್ ಎಂದು ಪರಿಚಯಿಸಿಕೊಂಡಿದ್ದ. ನಿಮ್ಮ ಪಿಜಿಯಲ್ಲಿ ಏನೇನು ಕೆಲಸ ಮಾಡುತ್ತಿದ್ದೀರಾ ಎಂಬುದು ನನಗೆ ಗೊತ್ತಿದೆ. ನನಗೆ ಮಾಮೂಲಿ ಕೊಡದಿದ್ದರೆ ಪಿಜಿಯಲ್ಲಿ ಅಕ್ರಮ ದಂಧೆ ನಡೆಯುತ್ತಿದೆ ಎಂದು ಸುಳ್ಳು ದೂರು ದಾಖಲಸಿಕೊಂಡು ಜೈಲಿಗೆ ಹಾಕಿಸುತ್ತೇನೆ. ನಿನ್ನ ಪಿಜಿಯನ್ನು ಮುಚ್ಚಿಸಿ ನಿನ್ನ ಪತ್ನಿ ಮತ್ತು ಮಕ್ಕಳನ್ನು ಬೀದಿ ಪಾಲು ಮಾಡುತ್ತೇನೆ' ಎಂದು ಹೆದರಿಸಿದ್ದ.

ಪಿಜಿಯಲ್ಲಿದ್ದವರು ಆಗತಾನೇ ಕೊಟ್ಟಿದ್ದ 10 ಸಾವಿರ ರೂ.ಗಳನ್ನು ಸುರೇಶ್ ಅವರಿಂದ ಕಸಿದುಕೊಂಡ ಕೀರಪ್ಪ, ಅಲ್ಲಿಂದ ಪರಾರಿಯಾಗಿದ್ದ. ಈತ ನಿಜವಾದ ಪೊಲೀಸ್ ಇರಬಹುದು ಎಂದು ಭಾವಿಸಿದ್ದ ಸುರೇಶ್ ಆರಂಭದಲ್ಲಿ ಈ ಬಗ್ಗೆ ಪೊಲೀಸರಿಗೆ ದೂರು ನೀಡಲು ಹಿಂದೇಟು ಹಾಕಿದ್ದರು.

ಇದಾದ ಬಳಿಕ ಕುಟುಂಬಸ್ಥರ ಜೊತೆ ಚರ್ಚಿಸಿ, ಅವರ ಸಲಹೆ ಮೇರೆಗೆ ಬಾಗಲಗುಂಟೆ ಪೊಲೀಸರಿಗೆ ದೂರು ನೀಡಿದ್ದರು.ಈ ಬಗ್ಗೆ ಎಫ್ಐಆರ್ ದಾಖಲಿಸಿ ಕೊಂಡ ಬಾಗಲಗುಂಟೆ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಿದಾದ ಸತ್ಯ ಬೆಳಕಿಗೆ ಬಂದಿದೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...