ಬೀದರ್:
ಕಳೆದ 33 ವರ್ಷಗಳಿಂದ ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿ ಸಧ್ಯ ಮುಖ್ಯಶಿಕ್ಷಕ ರಾಗಿದ್ದ ಬೀದರ್ ತಾಲ್ಲೂಕಿನ ಯರನಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ಬಾಲಾಜಿ ಬಿರಾದಾರ ನಿವೃತ್ತರಾಗಿದ್ದಾರೆ ಹುದ್ದೆಯಿಂದ ನಿವೃತ್ತಿ ಹೊಂದಿದ ಬಾಲಾಜಿ ಬಿರಾದಾರ ಅವರನ್ನು ಶಾಲೆ ಯಲ್ಲಿ ಹೃದಯಸ್ಪರ್ಶಿಯಾಗಿ ಸನ್ಮಾನಿಸಿ ಬೀಳ್ಕೊಡ ಲಾಯಿತು
ಪೂಜ್ಯರು, ಸಂಘ ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಶಿಕ್ಷಕರು ಶಾಲು ಹೊದಿಸಿ, ಮೈಸೂರು ಪೇಟ ತೊಡಿಸಿ, ಸ್ಮರಣಿಕೆ ನೀಡಿ ಗೌರವಿಸಿದರು.32 ವರ್ಷ ಶಿಕ್ಷಕ, ಸಮೂಹ ಸಂಪನ್ಮೂಲ ವ್ಯಕ್ತಿ ಹಾಗೂ ಮುಖ್ಯಶಿಕ್ಷಕ ನಾಗಿ ಸಲ್ಲಿಸಿದ ಸೇವೆ ತೃಪ್ತಿ ತಂದಿದೆ. ಸೇವಾ ಅವಧಿ ಯಲ್ಲಿ ವಿದ್ಯಾರ್ಥಿಗಳು,ಪಾಲಕರು ಹಾಗೂ ಗ್ರಾಮಸ್ಥರು ತೋರಿದ ಪ್ರೀತಿ ಹಾಗೂ ವಿಶ್ವಾಸವನ್ನು ಜೀವನದಲ್ಲಿ ಎಂದೂ ಮರೆಯಲಾರೆ ಎಂದು ಬಾಲಾಜಿ ಬಿರಾದಾರ ನುಡಿದರು.
ಬಾಲಾಜಿ ಬಿರಾದಾರ ಅವರ ಸರಳತೆ, ಸೌಜನ್ಯತೆ, ಸಮಾಜ ಹಾಗೂ ವಿದ್ಯಾರ್ಥಿಗಳ ಪರ ಕಾಳಜಿಯನ್ನು ಸಾನಿಧ್ಯ ವಹಿಸಿದ್ದ ಭಾಲ್ಕಿ ಹಿರೇಮಠ ಸಂಸ್ಥಾನದ ಗುರುಬಸವ ಪಟ್ಟದ್ದೇವರು ಶ್ಲಾಘಿಸಿದರು.SDMC ಅಧ್ಯಕ್ಷ ಓಂಕಾರ ಅಧ್ಯಕ್ಷತೆ ವಹಿಸಿದ್ದರು. ಡಯಟ್ ಉಪ ನಿರ್ದೇಶಕ (ಅಭಿವೃದ್ಧಿ) ಎಂ.ಡಿ. ಗುಲ್ಶನ್, ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಸೋಮಶೇಖರ ಬಿರಾದಾರ ಚಿದ್ರಿ, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ ಚನಶೆಟ್ಟಿ,
ಬೀದರ್ ಮಹಾನಗರ ಪಾಲಿಕೆ ಸದಸ್ಯ ಶಶಿಧರ ಹೊಸಳ್ಳಿ, ಕ್ಷೇತ್ರ ಶಿಕ್ಷಣಾಧಿಕಾರಿ ಮದರ್ ಖಾನ್ ಪಠಾಣ್, ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಪ್ರಭುಲಿಂಗ ತೂಗಾವೆ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರವೀಂದ್ರ ರೆಡ್ಡಿ ಮಾಲಿಪಾಟೀಲ, ಖಜಾಂಚಿ ಅಶೋಕ ಪಾಟೀಲ, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಗೌರವ ಕೋಶಾಧ್ಯಕ್ಷ ಶಿವಶಂಕರ ಟೋಕರೆ, ಸಹಾಯಕ ಅಕ್ಷರ ದಾಸೋಹ ಯೋಜನಾಧಿಕಾರಿ ಝಾಕೀರ್ ಹುಸೇನ್, ಕ್ಷೇತ್ರ ಸಮನ್ವಯಾಧಿಕಾರಿ ಕುಶಾಲರಾವ್ ಯರನಳ್ಳೆ,
ನ್ಯಾಯವಾದಿ ಪೀರಪ್ಪ ಔರಾದೆ, ಸರ್ಕಾರಿ ಪ್ರೌಢಶಾಲೆ ಮುಖ್ಯಶಿಕ್ಷಕ ಮಚ್ಚೇಂದ್ರನಾಥ ಗಾಯಕವಾಡ್, ಜನವಾಡ ಠಾಣೆ ಪಿಎಸ್ಐ ಬಾಷುಮಿಯಾ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಘಟಕದ ಗೌರವಾಧ್ಯಕ್ಷ ಪಂಡಿತ, ಅಧ್ಯಕ್ಷ ರಾಮಶೆಟ್ಟಿ ಕೆಂಚಾ, ಪ್ರಧಾನ ಕಾರ್ಯದರ್ಶಿ ದತ್ತಾತ್ರಿ ಸ್ವಾಮಿ, ರಾಜು ಸಾಗರ್, ಸೋಮಶೇಖರ, ಸೂರ್ಯಕಾಂತ, ಎಂ.ಡಿ. ಖಾಲಿದ್, ಎಂ.ಡಿ. ಲತೀಫ್, ಕ್ಷೇತ್ರ ಸಂಪನ್ಮೂಲ ವ್ಯಕ್ತಿಗಳಾದ ತಾನಾಜಿ ಕಾರಬಾರಿ, ಅಶೋಕ್, ಮಹೇಶ ಬಚ್ಚಣ ಇದ್ದರು.
ಸುದ್ದಿ ಸಂತೆ ನ್ಯೂಸ್ ಬೀದರ್.....