LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಹನ್ನೊಂದು ಗಂಟೆಗೆ ಮಾಜಿ ಸಚಿವ ವಿನಯ ಕುಲಕರ್ಣಿ ಬಿಡುಗಡೆ.....

ಹುಬ್ಬಳ್ಳಿ -

ಮಾಜಿ ಸಚಿವ ವಿನಯ ಕುಲಕರ್ಣಿ ಇಂದು ಬಿಡುಗಡೆಯಾಗಲಿದ್ದಾರೆ.ಜಾಮೀನು ಸಿಕ್ಕರು ಕೂಡಾ ಆ ಒಂದು ಪ್ರತಿ ಬಾರದ ಹಿನ್ನೆಲೆಯಲ್ಲಿ ಬೆಳಗಾವಿ ಯ ಹಿಂಡಲಗಾ ಜೈಲಿನಲ್ಲಿದ್ದ ಅವರು ಇಂದು ಬೆಳಿಗ್ಗೆ ಬಿಡುಗಡೆಯಾಗಲಿದ್ದಾರೆ.ಹನ್ನೊಂದು ಗಂಟೆಗೆ ಹೊರಗೆ ಅವರು ಬರಲಿದ್ದಾರೆ.

ಧಾರವಾಡದ ಹೆಬ್ಬಳ್ಳಿ ಜಿಲ್ಲಾ ಪಂಚಾಯತ ಸದಸ್ಯ ಯೊಗೀಶಗೌಡ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ವಿನಯ ಕುಲಕರ್ಣಿ ಅವರು ಕಳೆದ ಒಂಬತ್ತು ತಿಂಗಳಿನಿಂದ ಬೆಳಗಾವಿ ಯ ಹಿಂಡಲಗಾ ಕಾರಾಗೃಹದಲ್ಲಿದ್ದಾರೆ.ಮೊನ್ನೆ ಅಷ್ಟೇ ಸಾಕ್ಷ್ಯ ನಾಶ ಪ್ರಕರಣದಲ್ಲಿ ಜಾಮೀನು ಸಿಕ್ಕಿದೆ.ಜಾಮೀನು ಸಿಕ್ಕರು ಜಾಮೀನು ಪ್ರತಿ ಬಾರದ ಹಿನ್ನೆಲೆಯಲ್ಲಿ ಬಿಡುಗಡೆ ಯಾಗಿರಲಿಲ್ಲ. ಬೆಳಿಗ್ಗೆ ಜಾಮೀನು ಪ್ರತಿ ಬಂದ ಕೂಡಲೇ ಹನ್ನೊಂದು ಗಂಟೆಗೆ ಬಿಡುಗಡೆ ಆಗಲಿ ದ್ದಾರೆ.

ಹಿಂಡಲಗಾ ಕಾರಾಗೃಹದಿಂದ ಬಿಡುಗಡೆ ಆಗಲಿದ್ದು ಅವರನ್ನು ಬರಮಾಡಿಕೊಳ್ಳಲು ಧಾರವಾಡ ದಿಂದ ಸಾಕಷ್ಟು ಪ್ರಮಾಣದಲ್ಲಿ ಕೈ ಪಕ್ಷದ ಕಾರ್ಯಕರ್ತರು ಅಭಿಮಾನಿಗಳು ಆಪ್ತರು ಕುಟುಂಬದವರು ತೆರಳಲಿ ದ್ದಾರೆ.ಇನ್ನೂ ಪ್ರಮುಖವಾಗಿ ಬಿಡುಗಡೆಯಾದರೂ ಧಾರವಾಡ ಜಿಲ್ಲೆಗೆ ಬಾರದಂತೆ ನ್ಯಾಯಾಲಯ ಸೂಚನೆ ನೀಡಿದೆ.

ಬಿಡುಗಡೆ ನಂತರ ಬೆಂಗಳೂರು ಇಲ್ಲವೇ ಸವದತ್ತಿ ಯಲ್ಲಿ ವಾಸ್ತವ್ಯಕ್ಕೆ ವ್ಯವಸ್ಥೆಯನ್ನು ಕುಟುಂಬದವರು ಮಾಡಿದ್ದಾರೆ.ಒಂಬತ್ತು ತಿಂಗಳ ನಂತರ ಹೊರಗೆ ಬರುತ್ತಿದ್ದು ಬರಮಾಡಿಕೊಳ್ಳಲು ಧಾರವಾಡದಿಂದ ಸಾವಿರಕ್ಕೂ ಹೆಚ್ಚು ಕೈ ಪಕ್ಷದ ಕಾರ್ಯಕರ್ತರು ಮುಖಂಡರು ಬೆಳಗಾವಿ ಗೆ ತೆರಳುತ್ತಿದ್ದಾರೆ.

ಅದ್ದೂರಿಯಾಗಿ ಬರಮಾಡಿಕೊಳ್ಳಲು ಸಿದ್ದರಾದ ಕೈ ಪಡೆಯು ವಿಜಯೋತ್ಸವ ಮಾಡಲಿದ್ದಾರೆ. ಮಾಧ್ಯಮ ವಕ್ತಾರ ಆನಂದ್ ಸಿಂಗನಾಥ್ ಮಾಹಿತಿ ನೀಡಿದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....