LIVE TV LocalCrimeNationalInternationalPoliticsEducationTechnologyEntertainmentSportsFeature
Sports News

ಇಂದಿನಿಂದ ವಿಧಾನ ಮಂಡಲ ಅಧಿವೇಶನ ಸುಧೀರ್ಘ ದಿನಗಳ ನಂತರ ನಡೆಯುತ್ತಿದೆ ಅಧಿವೇಶನ

ಬೆಂಗಳೂರು -

ಇಂದಿನಿಂದ ರಾಜ್ಯ ವಿಧಾನಮಂಡಲದ ಉಭಯ ಸದನಗಳ ಮಳೆಗಾಲದ ಅಧಿವೇಶನ ನಡೆಯಲಿದೆ ಹೌದು ಬಜೆಟ್‌ ಅಧಿವೇಶನದ ನಡೆದು ಸುದೀರ್ಘ‌ ವಿರಾಮದ ಬಳಿಕ ವಿಧಾನಮಂಡಲದ ಅಧಿವೇಶನ ನಡೆಯುತ್ತಿದ್ದು ಸಹಜವಾಗಿಯೇ ಈ ಅಧಿವೇಶನದ ಬಗೆಗೆ ರಾಜ್ಯದ ಜನರಲ್ಲಿ ಭಾರೀ ಕುತೂಹಲವಿದೆ.ರಾಜ್ಯ ಸರಕಾರದ ವಿವಿಧ ಇಲಾಖೆಗಳಲ್ಲಿ ಅಧಿಕಾರಿಗಳು ಮತ್ತು ನೌಕರರ ನೇಮಕಾತಿ ಗಾಗಿನ ಪರೀಕ್ಷೆಗಳಲ್ಲಿ ಭಾರೀ ಅಕ್ರಮಗಳು ನಡೆದು ಅನರ್ಹರು ಮತ್ತು ಪ್ರಭಾವಿಗಳು ಸರಕಾರಿ ಹುದ್ದೆಗೆ ನೇಮಕಗೊಂಡಿರುವ ಸರಣಿ ಪ್ರಕರಣಗಳು ಬಯಲಾಗಿದ್ದು ಹೀಗಾಗಿ ಈ ಬಾರಿಯ ಅಧಿವೇಶನ ಸಾಕಷ್ಟು ಪ್ರಮಾಣ ದಲ್ಲಿ ಕುತೂಹಲ ಕೆರಳಿಸಿದೆ.

ರಾಜ್ಯದಲ್ಲಿನ ಕಾನೂನು ಸುವ್ಯವಸ್ಥೆಗೆ ಭಂಗ, ಬೆಂಗಳೂರು-ಮೈಸೂರು ಹೆದ್ದಾರಿ,ಮಂಗಳೂರಿನಲ್ಲಿ ಕೈಗೆತ್ತಿಕೊಳ್ಳಲಾಗಿರುವ ಸ್ಮಾರ್ಟ್‌ಸಿಟಿ ಯೋಜನೆ ಸೃಷ್ಟಿಸಿ ರುವ ಅವಾಂತರಗಳು,ವಿವಿಧ ಜಿಲ್ಲೆಗಳಲ್ಲಿ ಪ್ರಗತಿಯಲ್ಲಿರು ವ ಹೆದ್ದಾರಿ ಕಾಮಗಾರಿಗಳ ಅವ್ಯವಸ್ಥೆ,ಪ್ರತಿ ಮಳೆಗಾಲದ ಲ್ಲಿಯೂ ನಗರಗಳಲ್ಲಿ ಕೃತಕ ಪ್ರವಾಹ ಸೃಷ್ಟಿಯಾಗುತ್ತಿ ರುವುದು ಸಹಿತ ಹತ್ತು ಹಲವು ಸಮಸ್ಯೆಗಳ ಬಗೆಗೆ ವಿಪಕ್ಷಗಳು ಸರಕಾರದ ಗಮನ ಸೆಳೆಯಲು ಸಜ್ಜಾಗಿವೆ. ರಾಜ್ಯ ಸರಕಾರದ ವಿರುದ್ಧ ಈ ಹಿಂದೆ ಕೇಳಿ ಬಂದಿದ್ದ 40 ಪರ್ಸೆಂಟ್‌ ಕಮಿಷನ್‌ ಆರೋಪ ಪದೇ ಪದೇ ಪ್ರತಿಧ್ವನಿಸು ತ್ತಿದ್ದು ಈ ಬಗ್ಗೆಯೂ ಸದನಗಳಲ್ಲಿ ವಾಕ್ಸಮರ ನಡೆಯುವ ಎಲ್ಲ ಸಾಧ್ಯತೆ ಇದೆ.

ಅಧಿವೇಶನ ಹಿನ್ನೆಲೆಯಲ್ಲಿ ಆಡಳಿತ ಮತ್ತು ವಿಪಕ್ಷ ಸದಸ್ಯರ ನಡುವೆ ಮಾತಿನ ಚಕಮಕಿ,ಸಭಾತ್ಯಾಗ,ಧರಣಿ ಇವೆಲ್ಲವೂ ಸಾಮಾನ್ಯ.ಆದರೆ ವರ್ಷಗಳುರುಳಿದಂತೆಯೇ ಇವೆಲ್ಲವೂ ಎಲ್ಲೆ ಮೀರುತ್ತಿದ್ದು ಆಡಳಿತ ಮತ್ತು ವಿಪಕ್ಷಗಳ ನಾಯಕರು ಈ ಬಗ್ಗೆ ತಲೆಕೆಡಿಸಿಕೊಳ್ಳುತ್ತಿಲ್ಲ.ಸದನದ ನಿರ್ದಿಷ್ಟ ಕಾರ್ಯ ಕಲಾಪಗಳು ನಡೆಯುವುದರ ಜೊತೆಯಲ್ಲಿ ಜನರ ಸಮಸ್ಯೆ ಬೇಡಿಕೆಗಳ ಕುರಿತಂತೆ ಶಾಸಕರು ಸದನದಲ್ಲಿ ಪ್ರಸ್ತಾವಿಸಿ ಅವುಗಳಿಗೆ ಸರಕಾರದಿಂದ ಸ್ಪಷ್ಟ ಉತ್ತರ ಬಯಸುವುದು ಸಹಜ.ಆದರೆ ಇದ್ಯಾವುದಕ್ಕೂ ಅವಕಾಶ ನೀಡದೆ ಯಾವು ದಾದರೊಂದು ವಿಷಯವನ್ನು ಮುಂದಿಟ್ಟು ಅದನ್ನು ಸುದೀರ್ಘ‌ ಕಾಲ ಎಳೆದು ಸದನದ ಕಾರ್ಯಕಲಾಪವನ್ನು ಹಾಳುಗೆಡಹುವ ಸಂಪ್ರದಾಯ ಇದೀಗ ಮಾಮೂಲು ಎಂಬಂತಾಗಿದೆ.

ಈ ಬಾರಿಯ ಅಧಿವೇಶನ 10 ದಿನಗಳಷ್ಟೇ ನಡೆಯಲಿದ್ದು ಈ ಅಲ್ಪ ಅವಧಿಯಲ್ಲಿ ಉಭಯ ಸದನಗಳಲ್ಲಿ ಮಹತ್ವದ ವಿಷಯಗಳ ಬಗೆಗೆ ಚರ್ಚೆಗಳು ನಡೆಯಬೇಕಿದೆ.ರಾಜ್ಯದ ಅಭಿವೃದ್ಧಿ,ಜನರ ಹಿತದೃಷ್ಟಿಯನ್ನುಗಮನದಲ್ಲಿರಿಸಿಕೊಂಡು ಈ ಬಾರಿಯಾದರೂ ಅಧಿವೇಶನ ಸುಸೂತ್ರವಾಗಿ ನಡೆಯಲಿ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....