LIVE TV LocalCrimeNationalInternationalPoliticsEducationTechnologyEntertainmentSportsFeature
State News

CM ಬಳಿ ಕಣ್ಣೀರಿಟ್ಟಿದ್ದ ಸರ್ಕಾರಿ ಶಾಲೆಯ ವಿದ್ಯಾರ್ಥಿನಿ ಟಾಫರ್ ಶೈಕ್ಷಣಿಕ ಸಮಸ್ಯೆಗಳ ಬಗ್ಗೆ ಮುಖ್ಯಮಂತ್ರಿ ಬಳಿ ಹೇಳಿ ಕೊಂಡಿದ್ದ ವಾಣಿ.....

ಯಲ್ಲಾಪುರ -

ಹೌದು ಶಿರಸಿ ಯ ಯಲ್ಲಾಪೂರ ತಾಲೂಕಿನ ಕಳಚೆ ಕುಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಓದುತ್ತಿದ್ದ ವಾಣಿ ಗಜಾನನ ಭಟ್ಟ SSLC ಪರೀಕ್ಷೆಯಲ್ಲಿ ಗ್ರಾಮೀಣ ಭಾಗದ ಮಾದರಿ ಫಲಿತಾಂಶಕ್ಕೆ ಸಾಕ್ಷಿಯಾಗಿದ್ದಾಳೆ.ಹಲವು ಸಂಕಷ್ಟ ಗಳ ನಡುವೆಯೂ 625 ರಲ್ಲಿ 620 ಅಂಕ ಪಡೆದಿದ್ದಾಳೆ.

ಕನ್ನಡ ಮಾಧ್ಯಮವನ್ನೇ ಆಯ್ಕೆ ಮಾಡಿಕೊಂಡು ಕನ್ನಡ ಭಾಷೆಗೆ 125,ಇಂಗ್ಲೀಷ್ ಭಾಷೆಗೆ 99,ಹಿಂದಿ ಭಾಷೆಗೆ 100 ಗಣಿತ 96,ವಿಜ್ಞಾನ ವಿಷಯಕ್ಕೆ100,ಸಮಾಜ ವಿಜ್ಞಾನ 100 ಅಂಕ ಗಳಿಸುವ ಮೂಲಕ ಕಳಚೆ ಸರ್ಕಾರಿ ಪ್ರೌಢಶಾಲೆಗೆ ಕೀರ್ತಿ ತಂದಿದ್ದಾಳೆ.ಕಳೆದ ಮಳೆಗಾಲದ ಅತಿವೃಷ್ಠಿಯಿಂದ ಕಳಚೆ ಗ್ರಾಮವು ಗುಡ್ಡ ಕುಸಿತವಾಗಿ ತಿಂಗಳುಗಟ್ಟಲೆ ಪ್ರೌಢಶಾಲೆಯು ಸ್ಥಗಿತವಾದರೂ ಎದೆಗುಂದದೇ ಆನ್ ಲೈನ್ ಕ್ಲಾಸ್ ನಲ್ಲಿ ಪರಿಶ್ರಮ ಪಟ್ಟು ಓದಿದ ಪರಿಣಾಮ ಈ ಫಲಿತಾಂಶ ನನಗೆ ಒಲಿದಿದೆ ಎಂದು ಹೆಮ್ಮೆಯಿಂದ ಹೇಳಿ ಕೊಂಡಿದ್ದಾರೆ.ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಯವರು ಮುಖ್ಯ ಮಂತ್ರಿಯಾಗಿ ಅಧಿಕಾರವಹಿಸಿಕೊಂಡ ತಕ್ಷಣ ಕಳಚೆಗೆ ಬಂದಾಗ ಕಳಚೆಯ ಭೂಕುಸಿತದಿಂದ ತನಗಾದ ಶೈಕ್ಷಣಿಕ ತೊಂದರೆಯನ್ನು ಕಣ್ಣೀರು ಹಾಕಿ ಅವರ ಬಳಿ ವಿವರಿಸಿದಾಗ ಬೆನ್ನುತಟ್ಟಿ ಧೈರ್ಯ ತುಂಬಿದ್ದರು. ಎಂದು ಆಕೆ ಕಳೆದ ಮಳೆಗಾಲದ ಕಳಚೆ ಭೂಕುಸಿತದ ಅವಘಡವನ್ನು ನೆನಪಿಸಿಕೊಂಡಿದ್ದಾಳೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....