LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಅವಳಿ ನಗರದಲ್ಲೂ ಸ್ಥಬ್ದಗೊಂಡ ಸರ್ಕಾರಿ ಬಸ್ ಗಳು – ಹೋರಾಟಕ್ಕಿಳಿಸಿದ ನೌಕರರು

ಹುಬ್ಬಳ್ಳಿ –

ಕೆಲ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಬೆಂಗಳೂರಿನಲ್ಲಿ ಹೋರಾಟ ಮಾಡುತ್ತಿರುವ ಸಾರಿಗೆ ನೌಕರರ ಪ್ರತಿಭಟನೆಗೆ ಹುಬ್ಬಳ್ಳಿ ಧಾರವಾಡದಲ್ಲೂ ಬೆಂಬಲ ವ್ಯಕ್ತವಾಗಿದೆ. ಬೆಂಗಳೂರಿನಲ್ಲಿ ಹೋರಾಟಗಾರರ ಬಂಧನ ಮತ್ತು ಹೋರಾಟಕ್ಕೇ ಸ್ಪಂದಿಸದ ಸರ್ಕಾರದ ಧೋರಣೆಯ ವಿರುದ್ದ ಹುಬ್ಬಳ್ಳಿ ಧಾರವಾಡದಲ್ಲೂ ಸಾಕಷ್ಟು ಪ್ರಮಾಣದಲ್ಲಿ ಬೆಂಬಲ ವ್ಯಕ್ತವಾಗಿದೆ.

ಬೆಳ್ಳಂ ಬೆಳಿಗ್ಗೆ ಸಾರಿಗೆ ನೌಕರರು ಹುಬ್ಬಳ್ಳಿ ಧಾರವಾಡದಲ್ಲಿ ಪ್ರತಿಭಟನೆಗೆ ಇಳಿದರು. ಕರ್ತವ್ಯದ ಮೇಲಿದ್ದ ಕರ್ತವ್ಯಕ್ಕೇ ತೆರಳಿದ ಹೋಗುತ್ತಿರುವ ಹೀಗೆ ಎಲ್ಲರೂ ದಿಢೀರನೆ ಬಸ್ ಗಳನ್ನು ಡಿಪೋ ಒಳಗೆ ಹಾಕಿ ಪ್ರತಿಭಟನೆ ಮಾಡುತ್ತಿದ್ದಾರೆ.

ನಗರದ ಹಳೇ ಬಸ್ ನಿಲ್ದಾಣದಲ್ಲಿ ಸೇರಿದ ಎಲ್ಲಾ ಚಾಲಕರು ನಿರ್ವಾಹಕರು ಬಸ್ ಗಳನ್ನು ನಿಲ್ಲಿಸಿ ಹೋರಾಟ ಮಾಡುತ್ತಿದ್ದಾರೆ. ಬೆಂಗಳೂರಿನ ಹೋರಾಟಕ್ಕೇ ಬೆಂಬಲ ನೀಡುತ್ತಾ ಬೆಂಗಳೂರಿನಲ್ಲಿ ಹೋರಾಟಗಾರರನ್ನು ಬಂಧಿಸಿರುವ ಕ್ರಮವನ್ನು ಖಂಡಿಸಿರುವ ನೌಕರರು ಕೂಡಲೇ ನಮ್ಮ ಎಲ್ಲಾ ಬೇಡಿಕೆಗಳನ್ನು ಈಡೇರಿಸುವಂತೆ ಪಟ್ಟು ಹಿಡಿದಿದ್ದಾರೆ. ಹುಬ್ಬಳ್ಳಿಯ ಎಲ್ಲಾ ಡಿಪೋ ಹಾಗೇ ಇತ್ತ ಧಾರವಾಡದಲ್ಲೂ ಕೂಡಾ ಎಲ್ಲಾ ಸಾರಿಗೆ ನೌಕರರು ಬಸ್ ನಿಲ್ಲಿಸಿ ಹೋರಾಟಕ್ಕಿಳಿದಿದ್ದಾರೆ. ಇನ್ನೂ ದಿಢೀರನೇ ಬಸ್ ಗಳ ಸಂಚಾರ ಬಂದ್ ಆಗುತ್ತಿದ್ದಂತೆ ಸಾರ್ವಜನಿಕರು ಪರದಾಡುತ್ತಿರುವ ಚಿತ್ರಣ ಕಂಡು ಬಂದಿತು. ಅವಳಿ ನಗರದಲ್ಲಿ ಸಾರ್ವಜನಿಕರ ಪರದಾಟ ಎಲ್ಲೇಡೆ ಕಂಡು ಬಂದಿತು. ಬೆಳ್ಳಂ ಬೆಳಿಗ್ಗೆ ಕಚೇರಿಗೆ ಊರಿಗೆ ಬೇರೆ ಬೇರೆ ಕೆಲಸಕ್ಕೆ ಹೋಗುವ ಪ್ರಯಾಣಿಯಕ ಪರದಾಟ ಎಲ್ಲೇಡೆ ಕಂಡು ಬಂದಿತು. ಇನ್ನೂ ಸಾರಿಗೆ ನೌಕರರ ಪ್ರತಿಭಟನೆಯ ವಿಷಯ ತಿಳಿದ ಇಲಾಖೆಯ ಹಿರಿಯ ಅಧಿಕಾರಿಗಳು ಸ್ಥಳಕ್ಕೇ ಆಗಮಿಸಿ ಪರಿಶೀಲನೆ ಮಾಡಿದರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....