ಸಿರಿವಾರ -
ಸರ್ಕಾರಿ ನೌಕರನ ಮೇಲೆ ಹಲ್ಲೆ ಮಾಡಿದ ವಿಚಾರ ಕುರಿತು ಸಿರಿವಾರದಲ್ಲಿ ಸರ್ಕಾರಿ ನೌಕರರು ಪ್ರತಿಭಟನೆ ಮಾಡಿದರು ಕವಿತಾಳದ ಕಾಲುವೆ ಗೇಟ್ ಬಳಿ ಕರ್ತವ್ಯ ನಿರ್ವಹಿಸುತ್ತಿದ್ದ ನೀರಾವರಿ ಇಲಾಖೆ ಜೆಇ ಹನುಮಂತ ನಾಯಕ ಅವರ ಮೇಲೆ ಕೆಲ ಗ್ರಾಮಸ್ಥರು ದೈಹಿಕ ಹಲ್ಲೆ ನಡೆಸಿ ಅವಾಚ್ಯ ಶಬ್ದಗ ಳಿಂದ ನಿಂದಿಸಿದ್ದು, ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಪದಾಧಿಕಾರಿಗಳು ತಹಶೀಲ್ದಾರ್ ಅಶೋಕ ಪವಾರ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಸರ್ಕಾರದ ಆದೇಶದಂತೆ ಕರ್ತವ್ಯ ನಿರ್ವಹಿಸುತ್ತಿದ್ದ ಜೆಇ ಹಾಗೂ ಅವರ ಜೊತೆಗಿದ್ದ ಮಹಿಳಾ ಸಿಬ್ಬಂದಿ ಸೇರಿದಂತೆ ಇತರ ಸಿಬ್ಬಂದಿಗೆ ಕರ್ತವ್ಯಕ್ಕೆ ಅಡ್ಡಿಪಡಿಸಿ ನಿಂದನೆ ಮಾಡಲಾಗಿದ್ದು ಇದು ಖಂಡನೀಯವಾಗಿದೆ. ಹಲ್ಲೆ ನಡೆಸಿ ಮಾನಸಿಕ ಮತ್ತು ದೈಹಿಕ ಹಿಂಸೆ ನೀಡಿ ದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು
ಮುಂದಿನ ದಿನಗಳಲ್ಲಿ ಇಂತಹ ಘಟನೆ ಮರುಕಳಿಸ ದಂತೆ ಜೆಇಗೆ ಸೂಕ್ತ ಭದ್ರತೆ ಒದಗಿಸಬೇಕು ಎಂದು ಮನವಿಯಲ್ಲಿ ಕೋರಲಾಗಿದೆ.ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಆರೀಫ್ ಮಿಯಾ, ಲಕ್ಷ್ಮಣ ಯಾದವ್, ಪ್ರದೀಪ್ ಕುಮಾರ್, ಯೇಸುಮಿತ್ರ, ಮೌನೇಶ ಹಿರೆಹಣಗಿ, ಶ್ರೀನಾಥ್, ದೇವರಾಜ, ವಾಹಿದ್, ನೀರಾವರಿ ಇಲಾಖೆಯ ಇಇ ಕೋದಂಡರಾಮ ಸೇರಿದಂತೆ ಸರ್ಕಾರಿ ನೌಕರರು, ಉಪನ್ಯಾಸಕರು, ಶಿಕ್ಷಕರು ಇದ್ದರು.
ಸುದ್ದಿ ಸಂತೆ ನ್ಯೂಸ್ ಸಿರಿವಾರ.....