LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಗ್ರಾಮ ಪಂಚಾಯತ ಚುನಾವಣೆ – ನವಲಗುಂದದಲ್ಲಿ ತರಬೇತಿ ಕಾರ್ಯಕ್ರಮ

ನವಲಗುಂದ -

2ನೇ ಹಂತದಲ್ಲಿ ನಡೆಯಲಿರುವ ಗ್ರಾಮ ಪಂಚಾಯತ ಚುನಾವಣೆಗೆ ಧಾರವಾಡ ಜಿಲ್ಲೆಯ ನವಲಗುಂದದಲ್ಲಿ ತರಭೇತಿ ಕಾರ್ಯಕ್ರಮ ನಡೆಯಿತು. ತಾಲೂಕಿನ ಗ್ರಾಮ ಪಂಚಾಯತ್ ಚುನಾವಣೆಗಳ ಚುನಾವಣಾಧಿಕಾರಿಗಳು ಮತ್ತು ಸಹಾಯಕ ಚುನಾವಣಾಧಿಕಾರಿಗಳಿಗೆ ನವಲಗುಂದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ 2ನೇ ಹಂತದ ತರಬೇತಿ ಜರುಗಿತು.

ನೋಡಲ್ ಅಧಿಕಾರಿಯಾಗಿರುವ ಆಹಾರ ಇಲಾಖೆಯ ಜಂಟಿನಿರ್ದೇಶಕ ಸದಾಶಿವ ಮರ್ಜಿ ಅವರು ಮಾದರಿ ನೀತಿ ಸಂಹಿತೆ, ಕೋವಿಡ್ ನಿಯಂತ್ರಣ ಕ್ರಮಗಳ ಪಾಲನೆ, ಮಸ್ಟರಿಂಗ್ ಮತ್ತು ಡಿಮಸ್ಟರಿಂಗ್ ಕಾರ್ಯ, ಮತ ಎಣಿಕೆ ಮೊದಲಾದ ಕಾರ್ಯಗಳ ಕುರಿತು ಮಾಹಿತಿ ನೀಡಿದರು. ತಹಶೀಲ್ದಾರ ನವೀನ್ ಹುಲ್ಲೂರ ಮಾತನಾಡಿ, ತಾಲೂಕಿನಲ್ಲಿ 91 ಮತಗಟ್ಟೆಗಳನ್ನು ಸ್ಥಾಪಿಸಲಾಗುತ್ತಿದೆ ಎಂದರು.

32769 ಪುರುಷ, 30983 ಮಹಿಳೆ, ಇತರೆ 1 ಸೇರಿ 63753 ಮತದಾರರಿದ್ದಾರೆ. ಇವರಲ್ಲಿ 14 ಪುರುಷ ಮತ್ತು 258 ಮಹಿಳಾ ಸೇವಾ ಮತದಾರರಿದ್ದಾರೆ. 72 ಸಾಮಾನ್ಯ ಮತಗಟ್ಟೆಗಳು, 8 ಸೂಕ್ಷ್ಮ, 11 ಅತೀಸೂಕ್ಷ್ಮ ಮತಗಟ್ಟೆಗಳನ್ನು ಗುರುತಿಸಲಾಗಿದೆ. ಚುನಾವಣೆ ಕರ್ತವ್ಯಕ್ಕೆ ನಿಯೋಜನೆ ಮಾಡಿರುವ ಎಲ್ಲ ಚುನಾವಣಾಧಿಕಾರಿಗಳು ಮತ್ತು ಸಹಾಯಕ ಚುನಾವಣಾಧಿಕಾರಿಗಳು ಸಮರ್ಪಕವಾಗಿ ಕರ್ತವ್ಯ ನಿರ್ವಹಿಸಬೇಕು ಎಂದರು.

ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಕಾಂಬಳೆ, ಕ್ಷೇತ್ರ ಶಿಕ್ಷಣಾಧಿಕಾರಿ ಗಿರೀಶ್ ಪದಕಿ, ಪೊಲೀಸ್ ಇನ್ಸ್ಪೇಕ್ಟರ್ ಚಂದ್ರಶೇಖರ್ ಮಠಪತಿ ಸೇರಿದಂತೆ ಹಲವು ಅಧಿಕಾರಿಗಳು ಸಿಬ್ಬಂದಿ ವರ್ಗದವರು ಮತ್ತಿತರರು ತರಭೇತಿ ಕಾರ್ಯಾಕ್ರಮದಲ್ಲಿ ಪಾಲ್ಗೊಂಡಿದ್ದರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....