LIVE TV LocalCrimeNationalInternationalPoliticsEducationTechnologyEntertainmentSportsFeature
Education News

ಶಿಕ್ಷಕರ ವರ್ಗಾವಣೆಗೆ ಗ್ರೀನ್ ಸಿಗ್ನಲ್

ಶಿಕ್ಷಕರ ವರ್ಗಾವಣೆಗೆ ಗ್ರೀನ್ ಸಿಗ್ನಲ್

ಬೆಂಗಳೂರು

ಕೊನೆಗೂ ರಾಜ್ಯ ಸರ್ಕಾರ ಶಿಕ್ಷಕರಿಗೆ ಸಂತೋಷದ ಸುದ್ದಿಯನ್ನು ನೀಡಿದೆ. ಕಳೆದ ಹಲವು ದಿನಗಳಿಂದ ನೆನೆಗುದಿಗೆ ಬಿದ್ದಿದ್ದ ವರ್ಗಾವಣೆ ಪ್ರಕ್ರಿಯೆಗೆ ಶಿಕ್ಷಣ ಇಲಾಖೆ ವೇಳಾಪಟ್ಟಿಯನ್ನು ಪ್ರಕಟ ಮಾಡಿದೆ.

ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರ ವರ್ಗಾವಣೆ ನಡೆಯಲಿದ್ದು ವೇಳಾಪಟ್ಟಿಯನ್ನು ಶಿಕ್ಷಣ ಇಲಾಖೆ ಪ್ರಕಟ ಮಾಡಿದೆ. ನವಂಬರ್ 17 ರಿಂದ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಆರಂಭವಾಗಲಿದ್ದು ಕಳೆದ ಬಹು ದಿನಗಳಿಂದ ನಿರೀಕ್ಷೆ ಮಾಡುತ್ತಾ ಕಾಯುತ್ತಿದ್ದ ಶಿಕ್ಷಕರಿಗೆ ಕೊನೆಗೂ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ.

ಇತ್ತ ವರ್ಗಾವಣೆಗೆ ಕಾಯುತ್ತಿದ್ದ ಶಿಕ್ಷಕ ಸಮುದಾಯಕ್ಕೇ ವರ್ಗಾವಣೆ ವೇಳಾಪಟ್ಟಿಯೊಂದಿಗೆ ಅಧಿಸೂಚನೆಯನ್ನು ಶಿಕ್ಷಣ ಇಲಾಖೆ ಪ್ರಕಟಿಸಿದೆ.ನವೆಂಬರ್ 11ರಂದು ಅಧಿಸೂಚನೆ ಪ್ರಕಟವಾಗಿದ್ದು, ಡಿಸೆಂಬರ್ 16 ಮತ್ತು 17ರಂದು ಪ್ರಾಥಮಿಕ ಶಾಲೆ ಹಾಗೂ 18 ಮತ್ತು 19ರಂದು ಪ್ರೌಢ ಶಾಲೆ ಶಿಕ್ಷಕರಿಗೆ ವರ್ಗಾವಣೆ ಕೌನ್ಸಿಲಿಂಗ್ ಗೆ ಪ್ರಕ್ರಿಯೆ ನಡೆಯಲಿದೆ.ಇನ್ನೂ ಇದಕ್ಕೂ ಮುನ್ನ ಮೊದಲು ಕಳೆದ ಸಾಲಿನಲ್ಲಿ ಕಡ್ಡಾಯ ಹಾಗೂ ಹೆಚ್ಚುವರಿ ಹುದ್ದೆಯಡಿ ವರ್ಗಾವಣೆಯಾದವರಿಗೆ ಈ ಬಾರಿ ಮೊದಲ ಆದ್ಯತೆ ವರ್ಗಾವಣೆಯಲ್ಲಿ ಸಿಗಲಿದೆ.

ವರ್ಗಾವಣೆಗೆ ಶಿಕ್ಷಕ ಮಿತ್ರ ಆಪ್ ನಲ್ಲಿ ನವಂಬರ್ 30 ರವರೆಗೆ ವರ್ಗಾವಣೆಯಾಗ ಬಯಸುವ ಶಿಕ್ಷಕರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಿದ ನಂತರ ಆರಂಭಗೊಳ್ಳುವ ಪ್ರಕ್ರಿಯೆಗಳಲ್ಲಿ ಮೊದಲು ಡಿ 1 ರಿಂದ 11 ರವರೆಗೆ ವರ್ಗಾವಣೆಗೆ ಬಂದ ಅರ್ಜಿಗಳ ಪರಿಶೀಲನೆಯನ್ನು ಮಾಡಿ 15 ರಂದು ಅರ್ಹ ಅನರ್ಹರ ಪಟ್ಟಿಯನ್ನು ಪ್ರಕಟಣೆ ಮಾಡಲಾಗುತ್ತದೆ. ನಂತರ 16 ರಿಂದ 23 ರವಗೆ ವರ್ಗಾವಣೆಗೆ ಆಕ್ಷೇಪಣೆಗೆ ಅವಕಾಶ ನೀಡಲಾಗಿದ್ದು 24 ರಿಂದ 29 ರವರೆಗೆ ಅನರ್ಹರಿಗೆ ಹೇಳಿಕೆ ನೀಡಲು ಅವಕಾಶವನ್ನು ಶಿಕ್ಷಣ ಇಲಾಖೆ ನೀಡಿದೆ. ಇನ್ನೂ ಡಿಸೆಂಬರ್ 31 ರಂದು ಅರ್ಹರ ಅಂತಿಮ ಪಟ್ಟಿಯನ್ನು ಪ್ರಕಟ ಮಾಡಲಿರುವ ಶಿಕ್ಷಣ ಇಲಾಖೆ ಮೊದಲು ಜಿಲ್ಲೆಯ ಒಳಗೆ ಬಳಿಕ ಜಿಲ್ಲೆಯ ಹೊರಗೆ ಆನಂತರ ವಿಭಾಗದ ಒಳಗೆ ನಂತರ ವಿಭಾಗದ ಹೊರಗಿನ ಅರ್ಜಿಗಳ ಕೌನ್ಸಲಿಂಗ್ ನಡೆಯಲಿದೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...