ಬೆಂಗಳೂರು -
26 ರಂದು ಬೆಂಗಳೂರಿನಲ್ಲಿ ‘ಗುರು ವಂದನೆ ಹೃದಯಾಭಿವಂದನೆ’ ಕಾರ್ಯಕ್ರಮಹೌದುಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ (ರಿ), ಬೆಂಗಳೂರು ವತಿಯಿಂದ ರಾಜ್ಯದ ನೂತನ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಉಪ ಮುಖ್ಯಮಂತ್ರಿ ಡಾ ಪರಮೇಶ್ವರ ಅವರಿಗೆ ಗೌರವ ಸಮರ್ಪಿಸುವ ಉದ್ದೇಶದಿಂದ ‘ಗುರು ವಂದನೆ–ಹೃದಯಾಭಿವಂದನೆ’ ಕಾರ್ಯಕ್ರಮವನ್ನು ಸೆಪ್ಟೆಂಬರ್ 26ರಂದು ಬೆಂಗಳೂರಿನಲ್ಲಿ ಆಯೋಜಿಸಲಾಗಿದೆ.
ನೂತನ ಮುಖ್ಯಮಂತ್ರಿ ಸೇರಿದಂತೆ ಇತರರಿಗೆ ಗೌರವಿ ಸುವ ನಿಟ್ಟಿನಲ್ಲಿ ಸಂಘಟನೆ ಯಿಂದ ಈ ಒಂದು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ಕಾರ್ಯಕ್ರಮದಲ್ಲಿ ಶಿಕ್ಷಕರ ಸಂಘದ ಪದಾಧಿಕಾರಿಗಳು, ಪ್ರಮುಖ ಗಣ್ಯರು ಹಾಗೂ ಶಿಕ್ಷಕರ ಸಮುದಾಯದ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ.ಕಾರ್ಯಕ್ರಮದಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಶಿಕ್ಷಕರು ಹಾಗೂ ಸಂಘದ ಪ್ರಮುಖರು ಪಾಲ್ಗೊಳ್ಳುವ ನಿರೀಕ್ಷೆಯಿದ್ದು
ಶಿಕ್ಷಕರ ಸೇವೆ ಮಾಡುತ್ತಾ ಸ್ಮರಿಸುವ ಜೊತೆಗೆ ಅವರ ಸಮಸ್ಯೆಗಳು ಮತ್ತು ಶೈಕ್ಷಣಿಕ ಕ್ಷೇತ್ರದ ಪ್ರಗತಿ ಕುರಿತು ಚರ್ಚೆಯೊಂದಿಗೆ ಕೆಲವೊಂದಿಷ್ಟು ಬೇಡಿಕೆ ಗಳ ಕುರಿತು ಈ ಒಂದು ವೇದಿಕೆಯ ಮೂಲಕ ರಾಜ್ಯದ ಮುಖ್ಯಮಂತ್ರಿ ಉಪ ಮುಖ್ಯಮಂತ್ರಿ ಸೇರಿದಂತೆ ಹಲವು ಗಣ್ಯರಿಗೆ ಮನವಿ ಸಲ್ಲಿಸುವ ಯೋಚನೆ ಇದೆ
ಶಿಕ್ಷಕರ ಗೌರವ ಮತ್ತು ಸಂಘಟನಾ ಬಲವನ್ನು ಪ್ರತಿಬಿಂಬಿಸುವ ಈ ಕಾರ್ಯಕ್ರಮಕ್ಕೆ ಶಿಕ್ಷಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಸಂಘದ ವತಿಯಿಂದ ಸಂಘದ ರಾಜ್ಯಾಧ್ಯಕ್ಷ ಚಂದ್ರಶೇಖರ ನುಗ್ಗಲಿ ಮನವಿ ಮಾಡಿದ್ದಾರೆ
ಸುದ್ದಿ ಸಂತೆ ನ್ಯೂಸ್ ಬೆಂಗಳೂರು......