LIVE TV LocalCrimeNationalInternationalPoliticsEducationTechnologyEntertainmentSportsFeature
Sports News

ಬಿ. ಆರ್. ಅಂಬೇಡ್ಕರ್ ಆಶಯ ದಿಂದಲೇ ಸಮೃದ್ಧ ಭಾರತ ನಿರ್ಮಾಣ - ಹೆಚ್. ಸಿ. ಮಹದೇವಪ್ಪ.....

ಬೆಂಗಳೂರು -

ಶೂದ್ರ ಸಮಾಜ ಸಂಘಟನಾತ್ಮಕವಾಗಿ ಹೋರಾಟವನ್ನು ನಡೆಸಬೇಕು.ಬಿ.ಆರ್. ಅಂಬೇಡ್ಕರ್ ಮತ್ತು ಸಂವಿಧಾನದ ಆಶಯಗಳನ್ನು ಮುಂದಿಟ್ಟುಕೊಂಡು ಕೋಮುವಾದ ಮತ್ತು ಜಾತಿವಾದವನ್ನು ಹಿಮ್ಮೆಟ್ಟಿಸಿ ಸಮೃದ್ಧ ಭಾರತವನ್ನು ನಿರ್ಮಾಣ ಮಾಡಬೇಕು ಎಂದು ಮಾಜಿ ಸಚಿವ ಹೆಚ್.ಸಿ. ಮಹದೇವಪ್ಪ ಹೇಳಿದರು

ಕರ್ನಾಟಕ ರಾಜ್ಯ ಅತಿ ಹಿಂದುಳಿದ ಜಾಗೃತ ವೇದಿಕೆ ವತಿ ಯಿಂದ ಬೆಂಗಳೂರಿನ ಚಿತ್ರಕಲಾ ಪರಿಷತ್ ನಲ್ಲಿ ನಡೆದ ಭಾರತದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 131ನೇ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಜನಾಭ್ರಿಯವನ್ನು ಪಡೆಯಲು ನಮ್ಮ ದೇಶದ ಬಹುತ್ವ ಮತ್ತು ಸೌಹಾರ್ದತೆ ಯನ್ನು ನಾಶ ಮಾಡಲು ಧರ್ಮಧಾರಿತ ರಾಜಕಾರಣವನ್ನು ಬಿಜೆಪಿ ಮತ್ತು ಅದರ ಪಳೆಯುಳಿಕೆಗಳು ಪ್ರಯತ್ನಿಸುತ್ತಿವೆ ಎಂದು ಅವರು ಆರೋಪಿಸಿದ್ರು.

ಅಂಬೇಡ್ಕರ್ ಜಯಂತಿ ರಾಜಕೀಯ ಹುಟ್ಟುಹಬ್ಬದ ಆಚರಣೆಯಲ್ಲ.ಭಾರತದಲ್ಲಿ ಪ್ರತಿ ಹೋರಾಟಗಳನ್ನು ನಿರೂಪಿಸುವಂತಹ ಅತ್ಯಂತ ಮಹತ್ವದ ದಿನ.21ನೇ ಶತಮಾನ ಸವಾಲಿನಿಂದ ಕೂಡಿದೆ. ಈ ಸವಾಲು,ಭಾಷೆ, ಧರ್ಮ,ಜಾತಿಗೆ ಸೀಮಿತವಾಗಿಲ್ಲ.ಇಡೀ ಸಂವಿಧಾನಕ್ಕೆ ಸವಾಲು ಎಸೆಯುವಂತಹ ರಾಜಕೀಯ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆತಂಕ ವ್ಯಕ್ತಪಡಿಸಿದ್ರು.

ಸಂವಿಧಾನದ ಸುಖೀ ರಾಜ್ಯ ಮತ್ತು ಮೌಲ್ಯ,ಧರ್ಮ,ಜಾತಿ, ಪ್ರದೇಶಗಳಲ್ಲಿ ತಾರಾತಮ್ಯ ಮಾಡದೇ ಎಲ್ಲರಿಗೂ ಸಮಾ ನತೆ ಮತ್ತು ಸಮನಾವಕಾಶಗಳನ್ನು ಒದಗಿಸಿಕೊಟ್ಟು ಸಮ ಸಮಾಜವನ್ನು ನಿರ್ಮಾಣ ಮಾಡಬೇಕು.ಸಂವಿಧಾನ ಉಳಿದ್ರೆ ನಾವು ಉಳಿಯುತ್ತೇವೆ.ನಾವು ಉಳಿಯಬೇಕಾದ್ರೆ ಸಂವಿಧಾನ ಉಳಿಯಬೇಕು.ಹೀಗಾಗಿ ನಾವೆಲ್ಲರೂ ಒಗ್ಗಟ್ಟಿ ನಿಂದ ಹೋರಾಟ ನಡೆಸಿ ಸಂವಿಧಾನದ ರಕ್ಷಣೆಯನ್ನು ಮಾಡಬೇಕು ಎಂದು ಹೇಳಿದ್ರು.ಇದೇ ವೇಳೆ,ಕಾರ್ಯಕ್ರಮ ದಲ್ಲಿ ಭಾಗವಹಿಸಿದ್ದ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಲೇಖಕ ಚಂದ್ರ ಶೇಖರ್ ಕಂಬಾರ,ಮಠಾಧೀಶರು,ಧರ್ಮಗುರು ಗಳು,ಸಾಹಿತಿಗಳನ್ನು ಕರ್ನಾಟಕ ರಾಜ್ಯ ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ಅಧ್ಯಕ್ಷರಾದ ಎಮ್.ಸಿ. ವೇಣುಗೋಪಾಲ್ ಅವರು ಸನ್ಮಾನಿಸಿದ್ರು.

ಈ ಕಾರ್ಯಕ್ರಮದಲ್ಲಿ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಲೇಖಕ ಚಂದ್ರ ಶೇಖರ ಕಂಬಾರ, ಕರ್ನಾಟಕ ರಾಜ್ಯ ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ಅಧ್ಯಕ್ಷ ಎಮ್. ಸಿ. ವೇಣುಗೋಪಾಲ್, ಪ್ರಧಾನ ಕಾರ್ಯದರ್ಶಿ ನಾಗರಾಜ್ ಖಜಾಂಚಿ ಮಂಜುನಾಥ್, ಪ್ರಜಾವಾಣಿ ದಿನ ಪತ್ರಿಕೆಯ ಸಂಪಾದಕರಾದ ರವೀಂದ್ರ ಭಟ್,ಮಾಜಿ ಸಚಿವೆ ಬಿ.ಟಿ. ಲಲಿತಾ ನಾಯಕ್ ಸೇರಿದಂತೆ ಮಠಾಧೀಶರು, ಧರ್ಮಗು ರುಗಳು,ಸಾಹಿತಿಗಳು, ವಕೀಲರು,ಹಿಂದುಳಿದ ಸಮುದಾ ಯಗಳ ಮುಖಂಡರು ಹಾಗೂ ಕರ್ನಾಟಕ ರಾಜ್ಯ ಅತಿ ಹಿಂದುಳಿದ ವರ್ಗಗಳ ಪದಾಧಿಕಾರಿಗಳು ಭಾಗವಹಿಸಿದ್ದರು. ಡಾ. ಬಿ.ಆರ್. ಅಂಬೇಡ್ಕರ್ ಬಗ್ಗೆ ಬೆಂಗಳೂರು ವಿವಿಯ ಗಾಂಧಿ ಅಧ್ಯಯನ ಕೇಂದ್ರದ ನಿರ್ದೇಶಕರಾದ ಡಾ. ನಟರಾಜ್ ಹುಳಿಯಾರ್ ಅವರು ಉಪನ್ಯಾಸ ನೀಡಿದ್ರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....