LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಹಾವೇರಿಯಲ್ಲಿ ಕಿಡ್ನಾಪ್ ಮಾಡಿದ್ರು ಹುಬ್ಬಳ್ಳಿಯಲ್ಲಿ ಬಿಟ್ಟು ಹೋದ್ರು

ಹುಬ್ಬಳ್ಳಿ -

ಹಾವೇರಿಯಲ್ಲಿ ಬಾಲಕನೊಬ್ಬನನ್ನು ಕಿಡ್ನಾಪ್ ಮಾಡಿಕೊಂಡು ಬಂದು ಹುಬ್ಬಳ್ಳಿಯಲ್ಲಿ ಬಿಟ್ಟು ಹೋಗಿರುವ ಪ್ರಕರಣವೊಂದು ಬೆಳಕಿಗೆ ಬಂದಿದೆ. ನಿನ್ನೇ ಮಧ್ಯರಾತ್ರಿ ಈ ಒಂದು ಘಟನೆ ನಡೆದಿದೆ. ಮಧ್ಯಾಹ್ನ ಹಾವೇರಿಯಿಂದ ಬಾಲಕನನ್ನು ಅಪಹರಣ ಮಾಡಿಕೊಂಡು ಬಂದಿದ್ದಾರೆ. ನಂತರ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಬಂದು ಬಿಟ್ಟು ಹೋಗಿದ್ದಾರೆ.

ಅಪಹರಣಗೊಳಗಾಗಿದ್ದ ಬಾಲಕ

ಈ ಒಂದು ಘಟನೆಯಿಂದ ದೊಡ್ಡದೊಂದು ಅವಘಡ ತಪ್ಪಿದಂತಾಗಿದೆ. ಹಾವೇರಿಯಲ್ಲಿ ಮೊದಲು ಬಾಲಕನಿಗೆ ಪ್ರಜ್ಞೆ ತಪ್ಪುವಂತೆ ಮಾಡಿದ್ದಾರೆ. ಪ್ರಜ್ಞೆ ತಪ್ಪುತ್ತಿದ್ದಂತೆ ಹಾವೇರಿಯಿಂದ ಅಪಹರಣ ಮಾಡಿಕೊಂಡು ಬಂದು ಹುಬ್ಬಳ್ಳಿಯ ಹಳೇ ಬಸ್ ನಿಲ್ದಾಣದಲ್ಲಿ ಬಿಟ್ಟು ಪರಾರಿಯಾಗಿದ್ದಾರೆ.ತಡರಾತ್ರಿ ಹುಬ್ಬಳ್ಳಿಯ ಹಳೇ ಬಸ್ ನಿಲ್ದಾಣದಲ್ಲಿ ಹುಡುಗ ಅಳುತ್ತಾ ಕುಳಿತುಕೊಂಡಿದ್ದನು. ಈ ಘಟನೆ ಕುರಿತು ಬಾಲಕ ಏನು ಹೇಳಿದ್ದಾನೆ ನೀವೆ ಕೇಳಿ

ನಗರದ ಹಳೇ ಬಸ್ ನಿಲ್ದಾಣದಲ್ಲಿ ಅಳುತ್ತಾ ಕುಳಿತಿದ್ದ ಬಾಲಕನನ್ನು ನೋಡಿದ ಸ್ಥಳೀಯ ವಾಹಿನಿಯ ರಿಪೋರ್ಟರ್ ವೆಂಕಟೇಶ್ ಕೂಡಲೇ ಬಾಲಕನನ್ನು ವಿಚಾರಣೆ ಮಾಡಿ ಸಂಪೂರ್ಣವಾದ ಮಾಹಿತಿಯನ್ನು ಪಡೆದುಕೊಂಡು ಕೂಡಲೇ ಉಪನಗರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.ಮಾಹಿತಿ ತಲುಪುತ್ತಿದ್ದಂತೆ ಕೂಡಲೇ ಸ್ಥಳಕ್ಕೇ ಬಂದ ಉಪ ನಗರ ಪೊಲೀಸ್ ಠಾಣೆ ಮುಖ್ಯ ಪೇದೆ ರವಿ ಹೂಗಾರ ಅಳುತ್ತಾ ಕುಳಿತಿದ್ದ ಬಾಲಕನನ್ನು ನೋಡಿ ಅವನಿಂದ ಪೋಷಕರ ಹೆಸರು ಪೊನ್ ನಂಬರ್ ತಗೆದುಕೊಂಡು ಮಧ್ಯರಾತ್ರಿಯೇ ಸಂಪರ್ಕ ಮಾಡಿದ್ದಾರೆ.ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೇ ಆಗಮಿಸಿದ ಉಪನಗರ ಪೊಲೀಸ್ ಠಾಣೆಯ ಮುಖ್ಯ ಪೇದೆ ರವಿ ಹುಗಾರ ಬಾಲಕನನ್ನು ವಿಚಾರಿಸಿ ಕೂಡಲೇ ಅವನ ತಂದೆಯನ್ನು ಸಂಪರ್ಕ ಮಾಡಿ ಕರೆಯಿಸಿಕೊಂಡಿದ್ದಾರೆ.

ಮಧ್ಯರಾತ್ರಿಯೇ ಇದೇಲ್ಲ ಕೆಲಸವಾಗಿದ್ದು ತಂದೆಯನ್ನು ಕರೆಯಿಸಿಕೊಂಡ ಪೇದೆ ರವಿ ಹೂಗಾರ ಬಾಲಕನನ್ನು ತಂದೆಗೆ ಒಪ್ಪಿಸಿದ್ದಾರೆ.ಮಗನ ಹುಡುಕಾಟದಲ್ಲಿದ್ದ ಕುಟುಂಬಕ್ಕೇ ಬಾಲಕನನ್ನು ಒಪ್ಪಿಸಿ ಮಾನವಿಯತೆ ಮೆರೆದಿದ್ದಾರೆ ಇಬ್ಬರು. ಮಧ್ಯರಾತ್ರಿ ಮಹಾನ್ ಕೆಲಸ ಮಾಡಿದ್ದಕ್ಕೇ ಪೊಲೀಸ್ ಪೇದೆ ರವಿ ಮತ್ತು ರಿಪೋರ್ಟರ್ ವೆಂಕಟೇಶ ನಿಗೆ ಸಾರ್ವಜನಿಕರಿಂದಲೂ ಮೆಚ್ಚುಗೆ ವ್ಯಕ್ತವಾಗಿದ್ದು ಮಧ್ಯರಾತ್ರಿಯೇ ಪಾಲಕರ ಮಡಿಲು ಸೇರಿದ ಬಾಲಕನನ್ನು ಪೋಷಕರಿಗೆ ಒಪ್ಪಿಸಿದ ಪೊಲೀಸರು ನಿಟ್ಟಿಸಿರು ಬಿಟ್ಟಿದ್ದಾರೆ.

ಇನ್ನೂ ಇತ್ತ ಅಪಹರಣ ಮಾಡಿಕೊಂಡು ಬಂದು ಹುಬ್ಬಳ್ಳಿಯಲ್ಲಿ ಬಿಟ್ಟು ಹೋದವರಿಗಾಗಿ ಹುಡುಕಾಟ ಮಾಡುತ್ತಿರುವ ಉಪನಗರ ಪೊಲೀಸರು ಹಾವೇರಿಯಿಂದ ಅಪಹರಣ ಮಾಡಿಕೊಂಡು ಬಂದು ಹುಬ್ಬಳ್ಳಿಯಲ್ಲಿ ಯಾಕೇ ಬಿಟ್ಟು ಹೋದ್ರು ಎಂಬ ಪ್ರಶ್ನೆಗೆ ಉತ್ತರ ಹುಡುಕುತ್ತಿದ್ದಾರೆ.ಸಧ್ಯ ಬಾಲಕನ ಮತ್ತು ಅವರ ಪೋಸಕರಿಂದ ಪೊಲೀಸರು ಸಂಪೂರ್ಣವಾದ ಮಾಹಿತಿಯನ್ನು ಪಡೆದುಕೊಂಡಿದ್ದು ಅಪಹರಣ ಮಾಡಿಕೊಂಡು ಬಂದವರಿಗಾಗಿ ಹುಡುಕಾಟ ಆರಂಭಿಸಿದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...