LIVE TV LocalCrimeNationalInternationalPoliticsEducationTechnologyEntertainmentSportsFeature
International News

ಹೈಟೆಕ್ ವೇಶ್ಯಾವಾಟಿಕೆ ಜಾಲ ಪತ್ತೆ ಇಬ್ಬರು ನಟ ‌ನಟಿ ಸೇರಿ ಐವರ ಬಂಧನ - ಪೊಲೀಸರ ಭರ್ಜರಿ ಕಾರ್ಯಾಚರಣೆ.....

ಮಹಾರಾಷ್ಟ್ರ -

ಮಹಾರಾಷ್ಟ್ರದ ಥಾಣೆ ನಗರದಲ್ಲಿ ವೇಶ್ಯಾವಾಟಿಕೆ ಅಡ್ಡೆ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿ ಐವರು ಆರೋಪಿಗಳನ್ನು ಬಂಧಿಸಿದ್ದಾರೆ.ಥಾಣೆ ಇಲ್ಲಿನ ಗುನ್ಹೆ ಯುನಿಟ್ -1ರ ಸಿಸಿಬಿ ತಂಡವು ಹೈ ಪ್ರೊಫೈಲ್ ಸೆಕ್ಸ್ ದಂಧೆಯನ್ನು ಬಯಲಿಗೆಳೆದಿದ್ದು, ಇಬ್ಬರು ತಮಿಳು ನಟಿಯರು ಸೇರಿದಂತೆ ಐವರನ್ನು ಬಂಧಿಸಿದೆ.ಇಬ್ಬರು ತಮಿಳು ನಟಿಯರು ಮುಂಬೈನ ಸೆಕ್ಸ್ ರಾಕೆಟ್ ಏಜೆಂಟ್ ಜೊತೆ ಸಂಪರ್ಕದಲ್ಲಿದ್ದರು. ಆ ಏಜೆಂಟ್ ಮೂಲಕ ವೇಶ್ಯಾವಾಟಿಕೆಗಾಗಿ ಥಾಣೆಗೆ ಬಂದಿದ್ದರು.

ಇಬ್ಬರು ನಟಿಯರು ಏಜೆಂಟರಿಂದ 2 ಲಕ್ಷ ರೂ. ಬೇಡಿಕೆಯಿಟ್ಟಿದ್ದರು.ಕೊನೆಗೆ 1, 80,000 ರೂ.ಗೆ ಡೀಲ್ ಕುದುರಿಸಿದ್ದರು‌.ಏಜೆಂಟ್ ಜೊತೆ ಡೀಲ್ ಮಾಡಿಕೊಂಡ ಬಳಿಕ ಇಬ್ಬರು ಥಾಣೆಯ ಪಚ್ಪಖಡಿ ಯಲ್ಲಿರುವ ನಟರಾಜ್ ಸೊಸೈಟಿಯ ಫ್ಲ್ಯಾಟ್ ಗೆ ನಿಗದಿತ ಸಮಯಕ್ಕೆ ಬಂದಿದ್ದರು.

ಈ ಬಗ್ಗೆ ಖಚಿತ ಮಾಹಿತಿ ಆಧರಿಸಿ ಪೊಲೀಸರು ಫ್ಲ್ಯಾಟ್ ಮೇಲೆ ದಾಳಿ ನಡೆಸಿದ್ದು ಇಬ್ಬರು ನಟಿ ಯರು,ಫ್ಲ್ಯಾಟ್ ಮಾಲೀಕ,ಓರ್ವ ಪುರುಷ ಮತ್ತು ಓರ್ವ ಮಹಿಳಾ ಏಜೆಂಟರನ್ನು ಬಂಧಿಸಿದ್ದಾರೆ‌

ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದಾರೆ.ಬಂಧಿತ ಇಬ್ಬರು ನಟಿಯರು ಪ್ರಮುಖ ತಮಿಳು ಚಿತ್ರಗಳಲ್ಲಿ ನಟಿಸಿದ್ದಾರೆ.ಜೊತೆಗೆ ಬಾಲಿವುಡ್‌ ನ ಹಲವು ಚಿತ್ರ ಗಳಲ್ಲಿ ಸಣ್ಣ ಪುಟ್ಟ ಪಾತ್ರಗಳನ್ನು ಮಾಡಿದ್ದಾರೆ.

ಟಿವಿ ಧಾರವಾಹಿಗಳಲ್ಲೂ ಕಾಣಿಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತ ಐವರ ಮೊಬೈಲ್ ಫೋನ್ ಗಳನ್ನು ಪೊಲೀಸರು ವಶಪಡಿ ಸಿಕೊಂಡಿದ್ದು ಅದರಲ್ಲಿ ಹಲವು ನಟಿಯರ ಫೋಟೋಗಳು ಕಂಡು ಬಂದಿವೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....