LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಚುನಾವಣೆಯ ಮತದಾನದ ಮಾಹಿತಿ.....

ಹುಬ್ಬಳ್ಳಿ ಧಾರವಾಡ -

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಸಾರ್ವತ್ರಿಕ ಚುನಾವಣೆಗೆ ಶೇ.53.81 ರಷ್ಟು ಮತದಾನ - ಜಿಲ್ಲಾಧಿಕಾರಿ ನಿತೇಶ ಪಾಟೀಲ

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಸಾರ್ವತ್ರಿಕ ಚುನಾವಣೆಗಾಗಿ ಇಂದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಶಾಂತಿ ಯುತವಾಗಿ ಮತದಾನ ಜರುಗಿತು.ಒಟ್ಟು8,18,096 ಮತದಾರರ ಪೈಕಿ 4,40,251 ಮತದಾರರು ಮತ ಚಲಾಯಿಸಿದ್ದು,ಶೇ 53.81 ರಷ್ಟು ಮತದಾನವಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿ ಕಾರಿ ನಿತೇಶ ಕೆ. ಪಾಟೀಲ ಅವರು ತಿಳಿಸಿದ್ದಾರೆ.

82 ವಾರ್ಡ್ ಗಳಲ್ಲಿ ಒಟ್ಟು 842 ಮತಗಟ್ಟೆಗಳನ್ನು ಸ್ಥಾಪಿಸಲಾಗಿತ್ತು.ಅದರಲ್ಲಿ 292 ಸೂಕ್ಷ್ಮ, 93 ಅತೀ ಸೂಕ್ಷ್ಮ ಮತ್ತು 457 ಸಾಮಾನ್ಯ ಮತಗಟ್ಟೆಗಳನ್ನು ಸ್ಥಾಪಿಸಲಾಗಿತ್ತು,ಎಲ್ಲ ಮತಗಟ್ಟೆಗಳಲ್ಲಿಯೂ ಶಾಂತಿ ಯುತವಾಗಿ ಮತದಾನವಾಗಿದೆ ಎಂದರು.

ಇನ್ನೂ ಹು-ಧಾ ಮಹಾನಗರ ಪಾಲಿಕೆ ಚುನಾವಣೆ ಮತದಾನ ದಲ್ಲಿ ಗಣನೀಯ ಪ್ರಮಾಣದಲ್ಲಿ ಕುಸಿತ ವಾಗಿದೆ.2013ರ ಮಾರ್ಚ್ 7 ರಂದು ನಡೆದಿದ್ದ ಪಾಲಿಕೆ ಚುನಾವಣೆಯಲ್ಲಿ ಶೇ.66ರಷ್ಟು ಮತದಾನ ದಾಖಲಾಗಿತ್ತು.ಆಗ 67ವಾರ್ಡ್ ಗಳಿಗೆ ಚುನಾವಣೆ ನಡೆದಿತ್ತು

ಇನ್ನೂ ಪ್ರಮುಖವಾಗಿ ಹುಬ್ಬಳ್ಳಿ ಧಾರವಾಡ ಮಹಾನಗರ ಸೇರಿದಂತೆ ರಾಜ್ಯದಲ್ಲಿ ಇಂದು ಒಟ್ಟು ಪಾಲಿಕೆಗೆ ಚುನಾವಣೆ ನಡೆಯಿತು ಮತದಾನದ ವಿವರ ಈ ಕೆಳಗಿನಂತೆ ಇದೆ

ವಾರ್ಡ್‍ವಾರು ಮತದಾನದ ವಿವರ


ಈ ಬಾರಿ 82ವಾರ್ಡ್ ಗಳಿಗೆ ಮತದಾನ ನಡೆದ್ರೂ ಆಗಿದ್ದು ಮಾತ್ರ ಶೇ. 53.81ರಷ್ಟು ಮತದಾನ ವಾಗಿದೆ.ಮತದಾನ ಪ್ರಮಾಣದಲ್ಲಿ ಶೇ.12.19 ರಷ್ಟು ಕುಸಿತವಾಗಿದೆ‌.ಮತದಾನಕ್ಕೆ ರಜೆ ನೀಡಿದರು ಕೂಡಾ ದೂರುಳಿದ ಹು-ಧಾ ನಗರದ ಹಲವು ಮಂದಿ ಎಂಬೊಂದು ಇದರಿಂದ ಗೊತ್ತಾಗಿದೆ.

ಮತಾದಾನ ಪ್ರಮಾಣಕ್ಕೆ ಕೋವಿಡ್,ಅಗತ್ಯ ವಸ್ತುಗಳ ಬೆಲೆ ಏರಿಕೆಯ ಕಾರಣ.ಮುಂಬರುವ ವಿಧಾನಸಭೆ,ಲೋಕಸಭೆ ಚುನಾವಣೆಗೆ ನಿರ್ಣಾ ಯಕವಾಗಲಿರುವ ಪಾಲಿಕೆ ಮತದಾನದ ಶೇಕಡಾ ವಾರು ಪ್ರಮಾಣ.ಮತದಾನದಿಂದ ದೂರವುಳಿದು ಸರ್ಕಾರಕ್ಕೆ, ಜನ ಪ್ರತಿನಿಧಿಗಳಿಗೆ ತಕ್ಕ ಉತ್ತರ ಕೊಟ್ಟ ಹು-ಧಾ ಮಂದಿ ಎಂಬ ಮಾತುಗಳು ಗಲ್ಲಿ ಗಲ್ಲಿಯಲ್ಲಿ ಕೇಳಿ ಬರುತ್ತಿವೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....