LIVE TV LocalCrimeNationalInternationalPoliticsEducationTechnologyEntertainmentSportsFeature
State News

IAS ಅಧಿಕಾರಿ ಗ್ಯಾನೇಂದ್ರ ಕುಮಾರ್ ಬಂಧನ - ವಿಚಾರಣೆ ನಂತರ ವಶಕ್ಕೆ ತೆಗೆದುಕೊಂಡ ಪೊಲೀಸರು.....

ಬೆಂಗಳೂರು -

KPSC ನೇಮಕಾತಿ ನಗರದಲ್ಲಿ ಕೆಲ ದಿನಗಳಿಂದ ನಾಪತ್ತೆ ಯಾಗಿದ್ದ IAS ಅಧಿಕಾರಿ ಗ್ಯಾನೇಂದ್ರ ಕುಮಾರ್ ನ್ನು ಬಂಧನ ಮಾಡಲಾಗಿದೆ ರಾಜ್ಯಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ಕೆಪಿಎಸ್‌ಸಿ (KPSC) ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಐಎಎಸ್ ಅಧಿಕಾರಿ ಗ್ಯಾನೇಂದ್ರ ಕುಮಾರ್ ಅವರನ್ನು ಸಿಐಡಿ (CID) ಪೊಲೀಸರು ಬಂಧಿಸಿದ್ದಾರೆ. ವಿಚಾರಣೆ ವೇಳೆ ತನಿಖೆಗೆ ಸೂಕ್ತ ಸಹಕಾರ ನೀಡದ ಹಿನ್ನೆಲೆಯಲ್ಲಿ ಈ ಮಹತ್ವದ ಕ್ರಮ ಕೈಗೊಳ್ಳಲಾಗಿದೆ.

ಕರ್ನಾಟಕ ಲೋಕಸೇವಾ ಆಯೋಗದ ಪರೀಕ್ಷಾ ನಿಯಂತ್ರಕರಾಗಿದ್ದ ಅವಧಿಯಲ್ಲಿ ನಡೆದಿದೆ ಎನ್ನಲಾದ ಪ್ರಶ್ನೆಪತ್ರಿಕೆ ಸೋರಿಕೆ ಅಂಕ ತಿದ್ದುಪಡಿ ಹಾಗೂ ನೇಮಕಾತಿಯಲ್ಲಿನ ಅಕ್ರಮಗಳ ಕುರಿತಂತೆ ಸಿಐಡಿ ವಿಶೇಷ ತನಿಖಾ ತಂಡ ತೀವ್ರ ತನಿಖೆ ನಡೆಸುತ್ತಿದೆ.

ಪ್ರಕರಣದ ತನಿಖೆಯ ಭಾಗವಾಗಿ ಸಿಐಡಿ ಅಧಿಕಾರಿ ಗಳು ನಿನ್ನೆ ಸತತ 11 ಗಂಟೆಗಳ ಕಾಲ ಗ್ಯಾನೇಂದ್ರ ಕುಮಾರ್ ಅವರನ್ನು ಸುದೀರ್ಘ ವಿಚಾರಣೆಗೆ ಒಳಪಡಿಸಿದ್ದರು ಬಳಿಕ ಗಂಟೆಯಿಂದ ಮತ್ತೆ ವಿಚಾರಣೆ ಮುಂದುವರಿಸಿದ ತನಿಖಾಧಿಕಾರಿಗಳು ನೀಡಿದ ಹೇಳಿಕೆಗಳಲ್ಲಿನ ಅಸಮಂಜಸತೆ ಹಾಗೂ ತನಿಖಾ ಪ್ರಕ್ರಿಯೆಗೆ ಸರಿಯಾಗಿ ಸ್ಪಂದಿಸದ ಕಾರಣ ಅಂತಿಮ ವಾಗಿ ಅವರನ್ನು ಬಂಧನಕ್ಕೊಳಪಡಿಸಿದ್ದಾರೆ.

ಬಂಧಿತ ಅಧಿಕಾರಿಯನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿದ ಬಳಿಕ ನ್ಯಾಯಾಲಯದ ಮುಂದೆ ಹಾಜರುಪಡಿಸಿ ಪ್ರಕರಣದ ಮತ್ತಷ್ಟು ಆಳವಾದ ಮಾಹಿತಿ ಹಾಗೂ ಇತರ ಪ್ರಭಾವಿಗಳ ಪಾತ್ರವನ್ನು ಬಯಲಿಗೆಳೆಯಲು ಹೆಚ್ಚಿನ ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆಯಲು ಸಿಐಡಿ ಸಿದ್ಧತೆ ನಡೆಸಿದೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು.....

Author
Ravikumar Ullagaddi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
IAS ಅಧಿಕಾರಿ ಗ್ಯಾನೇಂದ್ರ ಕುಮಾರ್ ಬಂಧನ - ವಿಚಾರಣೆ ನಂತರ ವಶಕ್ಕೆ ತೆಗೆದುಕೊಂಡ ಪೊಲೀಸರು.....ಒತ್ತಡದ ಹತ್ತಾರು ಕಾರ್ಯಗಳ ನಡುವೆ ಶಿಕ್ಷಕರ ಕಾರ್ಯದ ಬಗ್ಗೆ ಮೆಚ್ಚುಗೆ - ಅರ್ಥಪೂರ್ಣವಾಗಿ ನಡೆಯಿತು KSPSTA ಪದಗ್ರಹಣ ಕಾರ್ಯಕ್ರಮ.....KAS ಅಧಿಕಾರಿಗಳ ವರ್ಗಾವಣೆ - ಹತ್ತಕ್ಕೂ ಹೆಚ್ಚು ಅಧಿಕಾರಿಗಳ ವರ್ಗಾವಣೆ ಆಡಳಿತ ಯಂತ್ರಕ್ಕೆ ಸರ್ಜರಿ.....IAS ಅಧಿಕಾರಿಗಳ ವರ್ಗಾವಣೆ - ಆಡಳಿತ ಯಂತ್ರಕ್ಕೆ ಸರ್ಜರಿ ಮಾಡಿದ ರಾಜ್ಯ ಸರ್ಕಾರ.....ಸರ್ಕಾರಿ ಶಾಲೆಯ SSLC ಟಾಪರ್ ಗಳಿಗೆ ಭರ್ಜರಿ ಗುಡ್ ನ್ಯೂಸ್ - ಟಾಪರ್ ಬರುವ ವಿದ್ಯಾರ್ಥಿಗಳಿಗೆ ಸಿಗಲಿದೆ ಭರ್ಜರಿ ಬಹುಮಾನ.....ಪರೀಕ್ಷಾ ಪದ್ಧತಿ ಸುಧಾರಣೆಗೆ ಸಾರ್ವಜನಿಕರಿಂದ ಸಲಹೆ ಸೂಚನೆ ಗೆ ಆಹ್ವಾನ - ನೀವು ಕೂಡಾ ಪರೀಕ್ಷಾ ವಿಧಾನ ಬದಲಾವಣೆಗೆ ಸಲಹೆ ಸೂಚನೆ ‌ನೀಡಬಹುದು.....ಆರಂಭಗೊಂಡ HRMS -2 ತರಬೇತಿ - KSPSTA ನಿರಂತರ ಪ್ರಯತ್ನದಿಂದಾಗಿ ತರಬೇತಿ ಕಾರ್ಯಾಗಾರ.....ಸಮಸ್ತ ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರ ಪರವಾಗಿ ಧನ್ಯವಾದಗಳೊಂದಿಗೆ ಅಭಿನಂದನೆ ಸಲ್ಲಿಸಿದ KSPSTA ಟೀಮ್.....ರಾಜ್ಯದ ಸರ್ಕಾರಿ ಶಾಲೆಗಳಿಗೆ ಕಂಪ್ಯೂಟರ್ ಶಿಕ್ಷಕರ ನೇಮಕ - 500 ಶಿಕ್ಷಕರ ನೇಮಕಾತಿ ಗೆ ಅಧಿಸೂಚನೆ..... ಆಸ್ಪತ್ರೆಗೆ ಹೋಗುವಾಗ ನಿಧನರಾದ ಶಿಕ್ಷಕ - ಸಹ ಶಿಕ್ಷಕ ಸೈಪನಸಾಬ ಚಪ್ಪರಬಂಧ ನಿಧನಕ್ಕೆ ಕಂಬನಿ ಮಿಡಿದ ಶಿಕ್ಷಕ ಬಂಧುಗಳು.....ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಯೋಜನೆಗಳ ಅನುಷ್ಠಾನಕ್ಕೆ ಅನುದಾನ ಬಿಡುಗಡೆ - ಬಜೆಟ್ ನಲ್ಲಿ ಘೋಷಣೆ ಮಾಡಿದಂತೆ ಅನುದಾನ ಬಿಡುಗಡೆ.....