LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಜಿಲ್ಲಾಸ್ಪತ್ರೆಯಲ್ಲಿ ICU ವಾರ್ಡ್

ಧಾರವಾಡ -

ಧಾರವಾಡ ಜಿಲ್ಲಾಸ್ಪತ್ರೆ ದಿನದಿಂದ ದಿನಕ್ಕೇ ಅತ್ಯಾಧುನಿಕ ಸ್ಪರ್ಶವನ್ನು ಪಡೆದುಕೊಳ್ಳುತ್ತಿದೆ. ಈಗಾಗಲೇ ಹತ್ತು ಹಲವಾರು ವೈಧ್ಯಕೀಯ ಸೇವೆಗಳನ್ನು ನೀಡುತ್ತಿರುವ ಜಿಲ್ಲಾಸ್ಪತ್ರೆಯಲ್ಲಿ ಈಗ ಮತ್ತೊಂದು ಸೌಲಭ್ಯ ದೊರಕಲಿದೆ. ಹೌದು ರೋಟರಿ ಕ್ಲಬ್ , KVG ಬ್ಯಾಂಕ್ ಮತ್ತು Logistimo India Pvt Ltd ಬೆಂಗಳೂರು ಈ ಮೂರು ಸಂಸ್ಥೆಗಳು ಜಿಲ್ಲಾಸ್ಪತ್ರೆಯಲ್ಲಿ ಕರೋನಾಗೆ ಐಸಿಯು ವಾರ್ಡ್ ಆರಂಭಿಸಿದ್ದಾರೆ.

ಬಡವರಿಗೆ ಕರೊನಾ ಸೋಂಕು ಕಾಣಿಸಿಕೊಂಡರೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಳ್ಳೊದು ಅದರಲ್ಲೂ ಐಸಿಯು ಬೆಡ್ ದುಬಾರಿ. ಹೀಗಾಗಿ ಈ ಒಂದು ಸಮಸ್ಯೆಯನ್ನು ಅರಿತ ಈ ಮೂರು ಸಂಸ್ಥೆಗಳು CSR ಅಡಿಯಲ್ಲಿ 35 ಲಕ್ಷ ರೂಪಾಯಿ ನೀಡಿದ್ದಾರೆ.

ಈ ಮೂರು ಸಂಸ್ಥೆಗಳ ನೀಡಿದ 35 ಲಕ್ಷ ವೆಚ್ಚದಲ್ಲಿ ಅತ್ಯಾಧುನಿಕ ಸೌಲಭ್ಯಗಳೊಂದಿಗೆ ಜಿಲ್ಲಾಸ್ಪತ್ರೆಯಲ್ಲಿ 12 ಸುಸಜ್ಜಿತ ಕೋವಿಡ್ ಐಸಿಯು ವಾರ್ಡ್ ಗಳು ಸಿದ್ದಗೊಂಡಿವೆ. 12 ವಾರ್ಡ್ ಆರಂಭಿಸಲಾಗಿದ್ದು ಎಲ್ಲಾ ಸೌಲಭ್ಯಗಳೊಂದಿಗೆ ಸಿದ್ದವಾಗಿದ್ದು ಐಸಿಯು ವಾರ್ಡ್ ಗಳನ್ನು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಲೋಕಾರ್ಪಣೆ ಮಾಡಿ ಹಸ್ತಾಂತರಿಸಿದರು.ಇದೇ ವೇಳೆ ಐಸಿಯು ವಾರ್ಡ್ ನ್ನು ಕೇಂದ್ರ ಸಚಿವರು ವೀಕ್ಷಿಸಿ ಪರಿಶೀಲನೆ ಮಾಡಿದರು.

ಇನ್ನೂ ಸಮಾಜಮುಖಿಯಾದ ಈ ಒಂದು ಕಾರ್ಯಕ್ಕೇ ನೆರವಾದ ರೋಟರಿ ಕ್ಲಬ್ ,ಕೆವಿಜಿ ಬ್ಯಾಂಕ್ ,ಹಾಗೇ ಬೆಂಗಳೂರಿನ Logistimo India Pvt Ltd ಈ ಮೂರು ಸಂಸ್ಥೆಗಳ ಸಾಮಾಜಮುಖಿ ಕಾರ್ಯವನ್ನು ಶ್ಲಾಘಿಸಿ ಮೆಚ್ಚಿಗೆ ವ್ಯಕ್ತಪಡಿಸಿ ಅಭಿನಂದಿಸಿ ಅಭಿನಂದಿಸಿದ್ರು.ಇನ್ನೂ ಈ ಮೂರು ಸಂಸ್ಥೆಗಳು ಸಮಾಜ ಸೇವೆಗೆ ಮಾದರಿಯಾಗಿವೆ. ದುರ್ಬಲ ಹಾಗೂ ಬಡಜನರ ಏಳಿಗೆಗಾಗಿ ಈ ಸಂಸ್ಥೆಗಳು ಶ್ರಮಿಸುತ್ತಿವೆ. ಸಮಾಜದ ಜನರ ಶ್ರೇಯೋಭಿವೃದ್ಧಿಗಾಗಿ ಗುಣಮಟ್ಟದ ಶಿಕ್ಷಣ, ವೈದ್ಯಕೀಯ ಹಾಗೂ ಇನ್ನಿತರ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಈ ಸಂಸ್ಥೆಗಳು ನಿರ್ದಿಷ್ಟ ಯೋಜನೆಗಳನ್ನು ರೂಪಿಸಿ ಜನರಿಗೆ ಸೇವೆಗಳನ್ನು ತಲುಪಿಸುತ್ತಿರುವ ಕಾರ್ಯವೈಖರಿ ತುಂಬಾ ಶ್ಲಾಘನೀಯ ಎಂದರು.

ಅಲ್ಲದೇ ಮುಂದೆಯೂ ಇಂಥ ಒಳ್ಳೆಯ ಕಾರ್ಯಗಳು ಮುಂದುವರೆಯಲಿ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.ಈ ಸಂಧರ್ಭದಲ್ಲಿ ರೋಟರಿ ಸಂಸ್ಥೆಯ ಡಾ ಕವನ ದೇಶಪಾಂಡೆ,ಸುನೀಲ ಬಾಗೇವಾಡಿ, ಬೆಂಗಳೂರಿನ Logistimo India Pvt Ltd ಸಂಸ್ಥೆಯ ಮುಖ್ಯಸ್ಥರು ಹಾಗೇ ಕೆವಿಜಿ ಬ್ಯಾಂಕ್ ಅಧ್ಯಕ್ಷ ಪಿ ಗೋಪಿಕೃಷ್ಣ ಬ್ಯಾಂಕ್ ನ ಸಾರ್ವಜನಿಕರ ಸಂಪರ್ಕಾಧಿಕಾರಿ ಉಲ್ಲಾಸ ಗುಣಗಾ. ಇವರೊಂದಿಗೆ ಜಿಲ್ಲಾಸ್ಪತ್ರೆಯ ಶಸ್ತ್ರಚಿಕಿತ್ಸಕ ಶಿವಕುಮಾರ ಮಾನಕರ ಆಸ್ಪತ್ರೆಯ ವೈಧ್ಯರು ಸಿಬ್ಬಂದ್ದಿಗಳಾದ ರಾಜೇಶ್ ಕೊನರಡ್ಡಿ, ಹಾಗೇ ಬಿಜೆಪಿ ಪಕ್ಷದ ಮುಖಂಡ ವಿರೇಶ ಅಂಚಟಗೇರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...