LIVE TV LocalCrimeNationalInternationalPoliticsEducationTechnologyEntertainmentSportsFeature
State News

ರಜೆಯ ಕುರಿತು ರಾಜ್ಯದ ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿ - ರಜೆಯ ವಿಚಾರದಲ್ಲಿ ಹೊಸ ಅಪ್ಡೇಟ್.....

ಬೆಂಗಳೂರು -

ಕರ್ನಾಟಕ ಸರ್ಕಾರ ಸರ್ಕಾರಿ ನೌಕರರು ಒಂದು ಬಾರಿಗೆ ಪಡೆಯಬಹುದಾದ ಗರಿಷ್ಠ ಸಾಂದರ್ಭಿಕ ರಜೆಯ ಮಿತಿಯನ್ನು ನಿರ್ಬಂಧಿಸುವ ಬಗ್ಗೆ ಆದೇಶ ಹೊರಡಿಸಿದೆ.ಸಾಂದರ್ಭಿಕ ರಜೆಯ ಅರ್ಹತೆ ಮತ್ತು ಮಂಜೂರಾತಿ ಬಗ್ಗೆ ಕರ್ನಾಟಕ ನಾಗರಿಕ ಸೇವಾ ನಿಯಮಾವಳಿಯ ಅನುಬಂಧ ಬಿ ರಲ್ಲಿನ ಇತರೆ ಷರತ್ತುಗಳು ಮುಂದುವರೆಯು ತ್ತವೆ ಎಂದು ಸ್ಪಷ್ಟಪಡಿಸಲಾಗಿದೆ.

ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ ಆರ್ಥಿಕ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ-2 ಜಿ. ಜಿ. ಹೇಮಣ್ಣ ಈ ಕುರಿತು ಆದೇಶ ಹೊರಡಿಸಿದ್ದಾರೆ.ರಾಜ್ಯ ಸರ್ಕಾರಿ ನೌಕರರಿಗೆ ಪ್ರತಿ ಕ್ಯಾಲೆಂಡರ್ ವರ್ಷದಲ್ಲಿ 15 ದಿವಸಗಳ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಲು ಆದೇಶಿಸಲಾಗಿತ್ತು.

ನಂತರ, 15 ದಿವಸಗಳ ಸಾಂದರ್ಭಿಕ ರಜೆಯನ್ನು 10 ದಿವಸಗಳಿಗೆ ಇಳಿಸಿ ಆದೇಶಿಸಲಾಗಿದೆ ಎಂದು ಹೇಳಿದೆ.ಕರ್ನಾಟಕ ನಾಗರೀಕ ಸೇವಾ ನಿಯಮಾ ವಳಿಯ ಅನುಬಂಧ-ಬಿ ಯ ನಿಯಮ(1) ರನ್ವಯ 15 ದಿನಗಳ ಸಾಂದರ್ಭಿಕ ರಜೆ ಜಾರಿ ಯಲ್ಲಿದ್ದ ಸಂದರ್ಭದಲ್ಲಿ ಒಂದು ಬಾರಿಗೆ ಪಡೆ ಯಬಹುದಾದ ಗರಿಷ್ಠ ಸಾಂದರ್ಭಿಕ ರಜೆಯ ಮಿತಿಯನ್ನು 7 ದಿನಗಳಿಗೆ ಸೀಮಿತಗೊಳಿಸಿ ಸಾರ್ವತ್ರಿಕ ರಜೆಯೊಂದಿಗೆ ಸಂಯೋಜಿಸಿದಾಗ ಈ ಅವಧಿಯನ್ನು 10 ದಿವಸಗಳಿಗೆ ನಿರ್ಭಂದಿಸಿ ಅವಕಾಶ ಕಲ್ಪಿಸಲಾಗಿತ್ತು

ಸಾಂದರ್ಭಿಕ ರಜೆಯನ್ನು 10 ದಿವಸಗಳಿಗೆ ಇಳಿಸಿರುವ ಹಿನ್ನೆಲೆಯಲ್ಲಿ ಒಂದು ಬಾರಿಗೆ ಪಡೆಯಬಹುದಾದ ಗರಿಷ್ಠ ಸಾಂದರ್ಭಿಕ ರಜೆಯನ್ನು 5 ದಿನಗಳೆಂದು ನಿರ್ಬಂಧಿಸಲು ಹಾಗೂ ಸಾರ್ವತ್ರಿಕ ರಜೆಯೊಂದಿಗೆ ಸಂಯೋ ಜಿಸಿದಾಗ ಈ ಅವಧಿಯನ್ನು 8 ದಿವಸಗಳಿಗೆ ನಿರ್ಭಂದಿಸಿ ಅವಕಾಶ ಕಲ್ಪಿಸಲು ನಿರ್ಧರಿಸ ಲಾಗಿದೆ. ಆದ್ದರಿಂದ, ಈ ಆದೇಶವನ್ನು ಹೊರಡಿಸಿದೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....