LIVE TV LocalCrimeNationalInternationalPoliticsEducationTechnologyEntertainmentSportsFeature
State News

ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿ - ವರ್ಗಾವಣೆ ಮಾರ್ಗಸೂಚಿ ಪ್ರಕಟ.....

ಬೆಂಗಳೂರು -

ರಾಜ್ಯ ಸರಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆ ಪ್ರಕ್ರಿಯೆ ಮೇ 15ರಿಂದ ಜೂನ್ 14ರ ವರೆಗೆ ನಡೆಯ ಲಿದ್ದು ಈ ಸಂಬಂಧ ರಾಜ್ಯ ಸರಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಮಂಗಳವಾರ ಆದೇಶ ಹೊರಡಿಸಿದೆ. ಗ್ರೂಪ್-ಎ, ಗ್ರೂಪ್-ಬಿ, ಗ್ರೂಪ್-ಸಿ, ಮತ್ತು ಗ್ರೂಪ್ ಡಿ ಹುದ್ದೆಗಳಿಗೆ ಮಾಡಲಾಗುವ ವರ್ಗಾವಣೆಗಳ ಸಂಖ್ಯೆಯು ಆಯಾ ವೃಂದಗಳ ಕಾರ್ಯನಿರತ ವೃಂದ ಬಲದ ಶೇ.6ರಷ್ಟನ್ನು ಮೀರ ಬಾರದು.

ಗ್ರೂಪ್-ಎ, ಗ್ರೂಪ್-ಬಿ ವೃಂದದ ಅಧಿಕಾರಿಗಳಿಗೆ ಸಂಬಂಧಿಸಿದಂತೆ ಆಯಾ ಇಲಾಖೆ ಸಚಿವರಿಗೆ ಹಾಗೂ ಗ್ರೂಪ್-ಸಿ ಮತ್ತು ಗ್ರೂಪ್-ಡಿ ವೃಂದದ ಸರಕಾರಿ ನೌಕರ ರಿಗೆ ಸಂಬಂಧಿಸಿದಂತೆ ಆಯಾ ನೇಮಕಾತಿ ಪ್ರಾಧಿಕಾರ ಗಳಿಗೆ ಅಧಿಕಾರ ನೀಡಲಾಗಿದೆ ಎಂದು ಆದೇಶದಲ್ಲಿ ಉಲ್ಲೇಖಿಸಿದೆ.

ಗ್ರೂಪ್ 'ಎ' ಮತ್ತು 'ಬಿ' ವೃಂದದ ಹುದ್ದೆಗಳಲ್ಲಿ 2 ವರ್ಷ, 'ಸಿ' ವೃಂದದ ಹುದ್ದೆಯಲ್ಲಿ 4 ವರ್ಷ ಹಾಗೂ 'ಡಿ' ವೃಂದದ ಹುದ್ದೆಗಳಲ್ಲಿ 7 ವರ್ಷ ಸೇವಾವಧಿಯನ್ನು ಪೂರ್ಣಗೊಳಿಸಿದವರನ್ನು ವರ್ಗಾವಣೆ ಮಾಡಬಹು ದಾಗಿದೆ. 'ಎ' ಮತ್ತು 'ಬಿ' ವೃಂದದ ಅಧಿಕಾರಿಗಳಿಗೆ ಸಂಬಂಧಿಸಿದ ವರ್ಗಾವಣೆ ಪ್ರಸ್ತಾವನೆಗಳನ್ನು ಸಚಿವಾ ಲಯದ ಆಡಳಿತ ಇಲಾಖೆಗಳ ಮೂಲಕವೇ ಆಯಾ ಇಲಾಖಾ ಸಚಿವರಿಗೆ ಸಲ್ಲಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಹೈದರಾಬಾದ್ ಕರ್ನಾಟಕ ಪ್ರದೇಶದ ಕಚೇರಿಗಳಲ್ಲಿ ವಿವಿಧ ವೃಂದಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆದುರಾಗಿ ನೇಮಕಗೊಂಡ ನೌಕರರನ್ನು ಅವರ ನೇಮಕಾತಿ ದಿನಾಂಕದಿಂದ ಕನಿಷ್ಠ 10 ವರ್ಷಗಳ ವರೆಗೆ ಹೈ.ಕ. ಪ್ರದೇಶ ಹೊರತು ಪಡಿಸಿ ಬೇರೆಡೆ ವರ್ಗಾವಣೆ ಮಾಡು ವಂತಿಲ್ಲ ಎಂದು ಆದೇಶದಲ್ಲಿ ಸೂಚನೆ ನೀಡಲಾಗಿದೆ.

ಇದೇ ವೇಳೆ ಪತಿ-ಪತ್ನಿ, ವಿಶೇಷ ಚೇತನ, ತೀವ್ರ ಸ್ವರೂಪದ ಕಾಯಿಲೆಯಿಂದ ಬಳಲುತ್ತಿರುವ ಸರಕಾರಿ ನೌಕರರು ಮತ್ತು ಅಧಿಕಾರಿಗಳ ಸಾರ್ವತ್ರಿಕ ವರ್ಗಾ ವಣೆಗೆ ಸಾಮಾನ್ಯ ನೌಕರರಿಗೆ ನಿಗದಿಪಡಿಸಿರುವ ಷರತ್ತುಗಳನ್ನು ಸಡಿಲಗೊಳಿಸಲಾಗಿದೆ. ಅಲ್ಲದೆ, ಗಂಭೀರ ಸ್ವರೂಪದ ಆರೋಪಗಳಿದ್ದಲಿ, ವಿಚಾರಣೆ/ ಕ್ರಿಮಿನಲ್ ನಡಾವಳಿ ಪ್ರಾರಂಭಿಸಿದ್ದಲ್ಲಿ ಅಂತಹ ಅಧಿಕಾರಿ-ನೌಕರರ ಹುದ್ದೆಗಳಿಗೆ ಸ್ಥಳ ನಿಯುಕ್ತಿ ಕೋರಬಾರದು ಎಂದು ತಿಳಿಸಲಾಗಿದೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...