LIVE TV LocalCrimeNationalInternationalPoliticsEducationTechnologyEntertainmentSportsFeature
State News

ರಾಜ್ಯದ HM ಗಳಿಗೆ ಮಹತ್ವದ ಸೂಚನೆ - ಶಾಲಾ ಶಿಕ್ಷಣ ಇಲಾಖೆಯಿಂದ ಮಹತ್ವದ ಸೂಚನೆ.....

ಬೆಂಗಳೂರು -

ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಉಚಿತ ವಿದ್ಯುತ್ ಸೌಲಭ್ಯ ಕಲ್ಪಿಸುವುದಾಗಿ ಸರ್ಕಾರ ಆದೇಶಿಸಿತ್ತು ಅದರಂತೆ ಜಾರಿಗೊಳಿಸಿ ಆದೇಶ ಕೂಡ ಮಾಡಿದೆ. ಆದರೇ ಕೆಲ ಪ್ರಾಂಶುಪಾಲರು ವರ್ಗಾವಣೆ ಯಾದ ನಂತ್ರ ಉಂಟಾಗಿರುವ ಸಮಸ್ಯೆ ಬಗ್ಗೆ ಶಾಲಾ ಶಿಕ್ಷಣ ಇಲಾಖೆಯಿಂದ ಹಾಲಿ ಹೆಚ್.ಎಂಗಳಿಗೆ ಮಹತ್ವದ ಸೂಚನೆಯನ್ನು ಹೊರಡಿಸಿದೆ.

ರಾಜ್ಯದ ಎಲ್ಲಾ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಉಚಿತವಾಗಿ ವಿದ್ಯುತ್ ಸೌಲಭ್ಯವನ್ನು ಒದಗಿಸುವ ಸಂಬಂಧ ವಿದ್ಯುನ್ಮಾನ ನಾಗರಿಕ ಸೇವಾ ವಿತರಣಾ ನಿರ್ದೇಶನಾಲಯದಿಂದ ಅಭಿವೃದ್ಧಿಪಡಿಸಲಾ ಗಿರುವ ತಂತ್ರಾಂಶವನ್ನು ಬಳಸಿಕೊಂಡು ಮುಖ್ಯೋ ಪಾಧ್ಯಾಯರುಗಳು ತಮ್ಮ ಶಾಲೆಯ ವಿದ್ಯುತ್ ಸಂಪರ್ಕದ ವಿವರವನ್ನು ಆನ್‌-ಲೈನ್‌ನಲ್ಲಿ ದಾಖಲಿಸಲು ಉಲ್ಲೇಖ(1)ರಲ್ಲಿ ಸುತ್ತೋಲೆ ಹೊರಡಿಸಲಾಗಿದೆ

ಈ ಕುರಿತು ಆನ್‌-ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಈ ಮುಂಚೆ ಕಾರ್ಯ ನಿರ್ವಹಿಸುತ್ತಿದ್ದ ಶಾಲಾ ಮುಖ್ಯೋಪಾಧ್ಯಾಯರ ಮೊಬೈಲ್ ಸಂಖ್ಯೆಗೆ OTP One Time Password) ಸ್ವೀಕೃತಿಯಾಗುತ್ತಿರುವ ಬಗ್ಗೆ ಪ್ರಸ್ತುತ ಕಾರ್ಯ ನಿರ್ವಹಿಸುತ್ತಿರುವ ಶಾಲಾ ಮುಖ್ಯೋಪಾಧ್ಯಾಯರುಗಳಿಂದ ದೂರುಗಳು ಬರುತ್ತಿರುವುದು ಕಛೇರಿ ಗಮನಕ್ಕೆ ಬಂದಿರುತ್ತದೆ.

ಈ ಬಗ್ಗೆ ಸ್ಯಾಟ್ಸ್ (SATS) ತಂತ್ರಾಂಶದಲ್ಲಿ ಪ್ರಸ್ತುತ ಕಾರ್ಯ ನಿರ್ವಹಿಸುತ್ತಿರುವ ಶಾಲಾ ಮುಖ್ಯೋ ಪಾಧ್ಯಾಯರು ತಮ್ಮ ಮೊಬೈಲ್ ಸಂಖ್ಯೆಯನ್ನು ಅಪ್‌ಡೇಟ್‌ ಮಾಡಬೇಕಾಗಿರುತ್ತದೆ. ಸ್ಯಾಟ್ಸ್ (SATS) ತಂತ್ರಾಂಶದಲ್ಲಿ ಮೊಬೈಲ್ ನಂಬರ್ ಅಪ್‌ಡೇಟ್ ಮಾಡಲು ಈ ಕೆಳಕಂಡ ಕ್ರಮ ಅನುಸರಿಸಬೇಕಾಗಿದೆ.

ಸ್ಯಾಟ್ಸ್ (SATS) ತಂತ್ರಾಂಶದಲ್ಲಿ ಶಾಲಾ ಮುಖ್ಯೋ ಪಾಧ್ಯಾಯರ ಲಾಗಿನ್‌ನಲ್ಲಿ ಲಾಗಿನ್ ಆಗಬೇಕು.
SCHOOL MANAGEMENT UPDATE SCHOOL INFO AND UDISE PLUS Dow Option ಮೇಲೆ ಕ್ಲಿಕ್ ಮಾಡಬೇಕು.ನಂತರ Section 1: School Profile ನಲ್ಲಿ A(1) School Particular ಎಂಬ Option ಮೇಲೆ ಕ್ಲಿಕ್ ಮಾಡಬೇಕು.

School Details ಮೆನುವಿನ Sl.No. 1.14(a) Office/Head of School Phone No. Option ನಲ್ಲಿ ಪ್ರಸ್ತುತ ಕಾರ್ಯ ನಿರ್ವಹಿಸುತ್ತಿರುವ ಶಾಲಾ ಮುಖ್ಯೋಪಾಧ್ಯಾಯರು ತಮ್ಮ ಮೊಬೈಲ್ ಸಂಖ್ಯೆಯನ್ನು ನಮೂದಿಸಿ Scrool Down ಮಾಡಿ Update ಬಟನ್ ಮೇಲೆ ಕ್ಲಿಕ್ ಮಾಡಬೇಕು.
ಅನಂತರ ಉಚಿತ ವಿದ್ಯುತ್‌ಗಾಗಿ ಆನ್-ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಉಲ್ಲೇಖ(1)ರ ಸುತ್ತೋಲೆಯಂತ ಕ್ರಮವಹಿಸಬೇಕಾಗಿದೆ.

ಈ ಬಗ್ಗೆ ತಮ್ಮ ವ್ಯಾಪ್ತಿಯ ಶಾಲಾ ಮುಖ್ಯೋ ಪಾಧ್ಯಾಯರುಗಳಿಗೆ ಸೂಕ್ತ ನಿರ್ದೇಶನ ನೀಡುವಂತೆ ಬಿಇಓಗಳಿಗೆ ಸೂಚಿಸಲಾಗಿದೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸಿಗಲಿದೆ ಸ್ಥಾನ CM ಭರವಸೆ - ಸಚಿವ ಸ್ಥಾನ ನಿರೀಕ್ಷೆ ಯಲ್ಲಿದ್ದ ಮಹಿಳೆಯರಿಗೆ ಗುಡ್ ನ್ಯೂಸ್ ನೀಡಿದ ನಾಡ ದೊರೆ.....ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....